ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯ ಯಲ್ಲಾಪುರಿ ಮದನಿ ಮಿಯಾ ಸಭಾ ಭವನದಲ್ಲಿ ಕರ್ನಾಟಕ ಮುಸ್ಲಿಂ ಜಮಾಅತ್ ಹುಬ್ಬಳ್ಳಿ ಧಾರವಾಡ ಜಿಲ್ಲಾ ಸಮೀತಿಯ ಘೋಷಣಾ ಸಭೆ ಇಂದು ನಡೆಯಿತು.
ಮೌಲಾನಾ ಅನ್ಝರ್ ಅಲಿ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ರಾಜ್ಯ ವಕ್ಫ್ ಮಂಡಳಿ ನಿರ್ದೇಶಕರಾದ ಮೌಲಾನಾ ಎನ್. ಕೆ.ಎಂ ಶಾಫಿ ಸಅದಿ ಉಸ್ತಾದರು ಉದ್ಘಾಟಿಸಿದರು.


ರಾಜ್ಯದ ಮುಸ್ಲಿಮರ ಧಾರ್ಮಿಕ ,ಶೈಕ್ಷಣಿಕ, ಸಾಮಾಜಿಕ, ರಾಜಕೀಯ ಮತ್ತು ಆರ್ಥಿಕ ಸ್ಥಿತಿಯ ಅಂಕಿಅಂಶವನ್ನು ಬಿಡುಗಡೆಗೊಳಿಸಿದ ಶಾಫಿ ಸಅದಿಯವರು ಅದರ ಪರಿಹಾರ ಹೇಗೆ ಎಂಬುದನ್ನು ಎಳೆ ಎಳೆಯಾಗಿ ವಿವರಿಸಿಕೊಟ್ಟರು.
ಸಮುದಾಯ ಮತ್ತು ಸಮಾಜದ ಅಭಿವೃದ್ಧಿ ಕಾರ್ಯದಲ್ಲಿ ಮುಸ್ಲಿಂ ಜಮಾಅತ್ ಮುಂಚೂಣಿಯಲ್ಲಿ ನಿಲ್ಲಲಿದೆ ಎಂದು ಹೇಳಿದರು. ಹುಬ್ಬಳ್ಳಿಯ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮೂರು ಯುವಕರು ಪಾಕಿಸ್ತಾನದ ಘೋಷಣೆ ಕೂಗಿದ್ದು ಸೂಕ್ತ ತನಿಖೆಗೆ ಒಳಪಡಿಸಬೇಕು. ತಪ್ಪಿತಸ್ಥರು ಎಂದು ರುಜುವತ್ತಾದರೆ ಗರಿಷ್ಠ ಶಿಕ್ಷೆಯನ್ನು ನೀಡಬೇಕು,ಅದರೊಟ್ಟಿಗೆ ನ್ಯಾಯಾಲಯದ ಆವರಣದಲ್ಲಿ ಕಾನೂನನ್ನು ಕೈಗೆತ್ತಿಕೊಂಡವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಅವರು ಹೇಳಿದರು.
ಮೌಲಾನಾ ಅಖ್ತರ್ ಹುಸೈನಿ,ಮೌಲಾನಾ ಶಬನಾ ಮಿಸ್ಬಾಹಿ, ಮೌಲಾನಾ ಬಿ.ಎ. ಇಬ್ರಾಹಿಂ ಸಖಾಫಿ ಮುಂತಾದವರು ಭಾಷಣ ಮಾಡಿದರು.ನಂತರ ನೂತನ ಜಿಲ್ಲಾ ಸಮೀತಿಯ ಘೋಷಣೆ ನಡೆಯಿತು.
ಅಧ್ಯಕ್ಷರಾಗಿ ಆಯ್ಕೆಯಾದ ಜನಾಬ್ ವಾಸಿಮ್ ಅಕ್ರಮ್ ಸಾಹೇಬ್ ಪ್ರವಾದಿ ನಿಂದಕ ಮಧುಗಿರಿ ಮೋದಿಯ ವಿರುದ್ಧ ಖಂಡನ ತರವನ್ನು ಮಂಡಿಸಿದರು. ಸಭೆಯಲ್ಲಿ ಉವೈಸ್ ಮನ್ಝರಿ ಸ್ವಾಗತಿಸಿ ಸಾಹುಲ್ ಹಮೀದ್ ಮುಸ್ಲಿಯಾರ್ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ