ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯ ಯಲ್ಲಾಪುರಿ ಮದನಿ ಮಿಯಾ ಸಭಾ ಭವನದಲ್ಲಿ ಕರ್ನಾಟಕ ಮುಸ್ಲಿಂ ಜಮಾಅತ್ ಹುಬ್ಬಳ್ಳಿ ಧಾರವಾಡ ಜಿಲ್ಲಾ ಸಮೀತಿಯ ಘೋಷಣಾ ಸಭೆ ಇಂದು ನಡೆಯಿತು.
ಮೌಲಾನಾ ಅನ್ಝರ್ ಅಲಿ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ರಾಜ್ಯ ವಕ್ಫ್ ಮಂಡಳಿ ನಿರ್ದೇಶಕರಾದ ಮೌಲಾನಾ ಎನ್. ಕೆ.ಎಂ ಶಾಫಿ ಸಅದಿ ಉಸ್ತಾದರು ಉದ್ಘಾಟಿಸಿದರು.


ರಾಜ್ಯದ ಮುಸ್ಲಿಮರ ಧಾರ್ಮಿಕ ,ಶೈಕ್ಷಣಿಕ, ಸಾಮಾಜಿಕ, ರಾಜಕೀಯ ಮತ್ತು ಆರ್ಥಿಕ ಸ್ಥಿತಿಯ ಅಂಕಿಅಂಶವನ್ನು ಬಿಡುಗಡೆಗೊಳಿಸಿದ ಶಾಫಿ ಸಅದಿಯವರು ಅದರ ಪರಿಹಾರ ಹೇಗೆ ಎಂಬುದನ್ನು ಎಳೆ ಎಳೆಯಾಗಿ ವಿವರಿಸಿಕೊಟ್ಟರು.
ಸಮುದಾಯ ಮತ್ತು ಸಮಾಜದ ಅಭಿವೃದ್ಧಿ ಕಾರ್ಯದಲ್ಲಿ ಮುಸ್ಲಿಂ ಜಮಾಅತ್ ಮುಂಚೂಣಿಯಲ್ಲಿ ನಿಲ್ಲಲಿದೆ ಎಂದು ಹೇಳಿದರು. ಹುಬ್ಬಳ್ಳಿಯ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮೂರು ಯುವಕರು ಪಾಕಿಸ್ತಾನದ ಘೋಷಣೆ ಕೂಗಿದ್ದು ಸೂಕ್ತ ತನಿಖೆಗೆ ಒಳಪಡಿಸಬೇಕು. ತಪ್ಪಿತಸ್ಥರು ಎಂದು ರುಜುವತ್ತಾದರೆ ಗರಿಷ್ಠ ಶಿಕ್ಷೆಯನ್ನು ನೀಡಬೇಕು,ಅದರೊಟ್ಟಿಗೆ ನ್ಯಾಯಾಲಯದ ಆವರಣದಲ್ಲಿ ಕಾನೂನನ್ನು ಕೈಗೆತ್ತಿಕೊಂಡವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಅವರು ಹೇಳಿದರು.
ಮೌಲಾನಾ ಅಖ್ತರ್ ಹುಸೈನಿ,ಮೌಲಾನಾ ಶಬನಾ ಮಿಸ್ಬಾಹಿ, ಮೌಲಾನಾ ಬಿ.ಎ. ಇಬ್ರಾಹಿಂ ಸಖಾಫಿ ಮುಂತಾದವರು ಭಾಷಣ ಮಾಡಿದರು.ನಂತರ ನೂತನ ಜಿಲ್ಲಾ ಸಮೀತಿಯ ಘೋಷಣೆ ನಡೆಯಿತು.
ಅಧ್ಯಕ್ಷರಾಗಿ ಆಯ್ಕೆಯಾದ ಜನಾಬ್ ವಾಸಿಮ್ ಅಕ್ರಮ್ ಸಾಹೇಬ್ ಪ್ರವಾದಿ ನಿಂದಕ ಮಧುಗಿರಿ ಮೋದಿಯ ವಿರುದ್ಧ ಖಂಡನ ತರವನ್ನು ಮಂಡಿಸಿದರು. ಸಭೆಯಲ್ಲಿ ಉವೈಸ್ ಮನ್ಝರಿ ಸ್ವಾಗತಿಸಿ ಸಾಹುಲ್ ಹಮೀದ್ ಮುಸ್ಲಿಯಾರ್ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ