ದುಬೈ: ಕರೋನವೈರಸ್ ಕುರಿತ ಆತಂಕವನ್ನು ಚರ್ಚಿಸಲು ಸೌದಿ ಅರೇಬಿಯಾ ತುರ್ತು ಸಭೆ ಕರೆದಿದ್ದು, ಕೊಲ್ಲಿ ದೇಶಗಳ ಆರೋಗ್ಯ ಸಚಿವರು ಭಾಗವಹಿಸಿದ್ದರು.
ಜಿಸಿಸಿ ಜನರಲ್ ಸೆಕ್ರಟ್ಟರಿಯೇಟ್ನ ಪ್ರಧಾನ ಕಚೇರಿಯಲ್ಲಿ ನಡೆದ ಈ ಸಭೆಯಲ್ಲಿ ಆರೋಗ್ಯ ಮತ್ತು ರಕ್ಷಣಾ ಸಚಿವ ಅಬ್ದುರ್ರಹ್ಮಾನ್ ಬಿನ್ ಮುಹಮ್ಮದ್ ಬಿನ್ ನಾಸರ್ ಅಲ್-ಓವೈಸ್ ಭಾಗವಹಿಸಿದ್ದರು. ಕರೋನವೈರಸ್ ಸೋಂಕಿನ ವಿರುದ್ಧ ಯುಎಇ ಕೈಗೊಂಡ ಪರಿಣಾಮಕಾರಿ ಕ್ರಮಗಳನ್ನು ಕೊಲ್ಲಿ ಆರೋಗ್ಯ ಸಚಿವರುಗಳು ಶ್ಲಾಘಿಸಿದರು.
ವಿಶ್ವ ಆರೋಗ್ಯ ಸಂಸ್ಥೆ ಅನುಮೋದಿಸಿದ ಅಂತರ್ರಾಷ್ಟ್ರೀಯ ಆರೋಗ್ಯ ನಿಯಮಗಳಿಗೆ ಅನುಸಾರವಾಗಿ ವೈರಸ್ ವಿರುದ್ಧ ಎಲ್ಲಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಸಚಿವರುಗಳು ಖಚಿತಪಡಿಸಿದ್ದಾರೆ. 2018 ರ ಡಿಸೆಂಬರ್ನಲ್ಲಿ ರಿಯಾದ್ನಲ್ಲಿ ನಡೆದ 39ನೇ ಶೃಂಗಸಭೆಯಲ್ಲಿ ಅಂಗೀಕರಿಸಲಾದ ಏಕೀಕೃತ ಆರೋಗ್ಯ ವಿಧಾನಗಳನ್ನು ಜಾರಿಗೆ ತರಲು ನಿರ್ಧರಿಸಲಾಯಿತು. ಪ್ರತಿ ದೇಶಗಳಲ್ಲಿ ಪ್ರಸ್ತುತ ಸ್ಥಿತಿಗತಿಗಳು, ಕಾರ್ಯವಿಧಾನಗಳು ಮತ್ತು ರೋಗ ತಡೆಗಟ್ಟುವಿಕೆಯ ಸಿದ್ಧತೆಗಳನ್ನು ಸಭೆಯಲ್ಲಿ ಪರಿಶೀಲಿಸಲಾಯಿತು.
ವಿಮಾನ ನಿಲ್ದಾಣಗಳಿಗೆ ಆಗಮಿಸುವವರ ಪರಿಶೋಧನೆ ಮತ್ತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕ್ರಮ ಕೈಗೊಳ್ಳಲಾಗುವುದು. ಜಿಸಿಸಿ ಪ್ರಧಾನ ಕಾರ್ಯದರ್ಶಿ ಡಾ. ನೈಫ್ ಬಿನ್ ಫಲಾಹ್ ಅಲ್-ಹಜ್ರಫ್ ಅವರ ಕೋರಿಕೆಯ ಮೇರೆಗೆ ಈ ಸಭೆ ನಡೆಯಿತು.
ಯುಎಇಯಲ್ಲಿ, ಭಾರತೀಯ ವ್ಯಕ್ತಿ ಸೇರಿದಂತೆ ಒಂಬತ್ತು ಜನರಿಗೆ ಕರೋನವೈರಸ್ ಇರುವುದು ಪತ್ತೆಯಾಗಿದೆ. ಅವರ ಪೈಕಿ ಆರೋಗ್ಯ ಸ್ಥಿತಿ ಸುಧಾರಿಸಿದ ಬಳಿಕ ಮೂವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಭಾರತೀಯ ನಾಗರಿಕನ ಸ್ಥಿತಿಯು ತೃಪ್ತಿಕರವಾಗಿದೆ ಎಂದು ಆರೋಗ್ಯ ಮತ್ತು ರಕ್ಷಣಾ ಸಚಿವಾಲಯ ತಿಳಿಸಿದೆ.















ಇನ್ನಷ್ಟು ಸುದ್ದಿಗಳು
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ
ಸೌದಿ: ವೀಸಾ ಅವಧಿ ಮುಕ್ತಾಯ- ಸ್ವದೇಶಕ್ಕೆ ಮರಳಲಾಗದೆ ಸಾವಿರಾರು ಮಂದಿ ಸಂಕಷ್ಟದಲ್ಲಿ