ದುಬೈ: ಕರೋನವೈರಸ್ ಕುರಿತ ಆತಂಕವನ್ನು ಚರ್ಚಿಸಲು ಸೌದಿ ಅರೇಬಿಯಾ ತುರ್ತು ಸಭೆ ಕರೆದಿದ್ದು, ಕೊಲ್ಲಿ ದೇಶಗಳ ಆರೋಗ್ಯ ಸಚಿವರು ಭಾಗವಹಿಸಿದ್ದರು.
ಜಿಸಿಸಿ ಜನರಲ್ ಸೆಕ್ರಟ್ಟರಿಯೇಟ್ನ ಪ್ರಧಾನ ಕಚೇರಿಯಲ್ಲಿ ನಡೆದ ಈ ಸಭೆಯಲ್ಲಿ ಆರೋಗ್ಯ ಮತ್ತು ರಕ್ಷಣಾ ಸಚಿವ ಅಬ್ದುರ್ರಹ್ಮಾನ್ ಬಿನ್ ಮುಹಮ್ಮದ್ ಬಿನ್ ನಾಸರ್ ಅಲ್-ಓವೈಸ್ ಭಾಗವಹಿಸಿದ್ದರು. ಕರೋನವೈರಸ್ ಸೋಂಕಿನ ವಿರುದ್ಧ ಯುಎಇ ಕೈಗೊಂಡ ಪರಿಣಾಮಕಾರಿ ಕ್ರಮಗಳನ್ನು ಕೊಲ್ಲಿ ಆರೋಗ್ಯ ಸಚಿವರುಗಳು ಶ್ಲಾಘಿಸಿದರು.
ವಿಶ್ವ ಆರೋಗ್ಯ ಸಂಸ್ಥೆ ಅನುಮೋದಿಸಿದ ಅಂತರ್ರಾಷ್ಟ್ರೀಯ ಆರೋಗ್ಯ ನಿಯಮಗಳಿಗೆ ಅನುಸಾರವಾಗಿ ವೈರಸ್ ವಿರುದ್ಧ ಎಲ್ಲಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಸಚಿವರುಗಳು ಖಚಿತಪಡಿಸಿದ್ದಾರೆ. 2018 ರ ಡಿಸೆಂಬರ್ನಲ್ಲಿ ರಿಯಾದ್ನಲ್ಲಿ ನಡೆದ 39ನೇ ಶೃಂಗಸಭೆಯಲ್ಲಿ ಅಂಗೀಕರಿಸಲಾದ ಏಕೀಕೃತ ಆರೋಗ್ಯ ವಿಧಾನಗಳನ್ನು ಜಾರಿಗೆ ತರಲು ನಿರ್ಧರಿಸಲಾಯಿತು. ಪ್ರತಿ ದೇಶಗಳಲ್ಲಿ ಪ್ರಸ್ತುತ ಸ್ಥಿತಿಗತಿಗಳು, ಕಾರ್ಯವಿಧಾನಗಳು ಮತ್ತು ರೋಗ ತಡೆಗಟ್ಟುವಿಕೆಯ ಸಿದ್ಧತೆಗಳನ್ನು ಸಭೆಯಲ್ಲಿ ಪರಿಶೀಲಿಸಲಾಯಿತು.
ವಿಮಾನ ನಿಲ್ದಾಣಗಳಿಗೆ ಆಗಮಿಸುವವರ ಪರಿಶೋಧನೆ ಮತ್ತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕ್ರಮ ಕೈಗೊಳ್ಳಲಾಗುವುದು. ಜಿಸಿಸಿ ಪ್ರಧಾನ ಕಾರ್ಯದರ್ಶಿ ಡಾ. ನೈಫ್ ಬಿನ್ ಫಲಾಹ್ ಅಲ್-ಹಜ್ರಫ್ ಅವರ ಕೋರಿಕೆಯ ಮೇರೆಗೆ ಈ ಸಭೆ ನಡೆಯಿತು.
ಯುಎಇಯಲ್ಲಿ, ಭಾರತೀಯ ವ್ಯಕ್ತಿ ಸೇರಿದಂತೆ ಒಂಬತ್ತು ಜನರಿಗೆ ಕರೋನವೈರಸ್ ಇರುವುದು ಪತ್ತೆಯಾಗಿದೆ. ಅವರ ಪೈಕಿ ಆರೋಗ್ಯ ಸ್ಥಿತಿ ಸುಧಾರಿಸಿದ ಬಳಿಕ ಮೂವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಭಾರತೀಯ ನಾಗರಿಕನ ಸ್ಥಿತಿಯು ತೃಪ್ತಿಕರವಾಗಿದೆ ಎಂದು ಆರೋಗ್ಯ ಮತ್ತು ರಕ್ಷಣಾ ಸಚಿವಾಲಯ ತಿಳಿಸಿದೆ.















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು