ನವದೆಹಲಿ: ಸಿಎಎ ವಿರೋಧಿಸಿ ಸಾಕಷ್ಟು ಭಾರೀ ಸಂಖ್ಯೆಯಲ್ಲಿ ಧರಣಿ ಕುಳಿತಿರುವ ಜಫರಾಬಾದ್ ಬಳಿಯ ಮೌಜ್ಪುರ್ ಏರಿಯಾದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಬೆಂಬಲಿಸಿ ನಡೆಯುತ್ತಿದ್ದ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿರುವುದಾಗಿ ಭಾನುವಾರ ಸಂಜೆ ವರದಿಯಾಗಿದೆ.
ಹೀಗಾಗಿ ಜಫರಾಬಾದ್ಗೆ ಹಾಗೂ ಮೌಜ್ಪುರ್ ಸಂಧಿಸುವ ಸ್ಥಳದಲ್ಲಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ದೆಹಲಿ ಪೂರ್ವ ಜಿಲ್ಲೆ ಸೇರಿದಂತೆ ಇತರೆ ಪ್ರದೇಶದ ಡಿಸಿಪಿಗಳಿಗೂ ಸ್ಥಳಕ್ಕೆ ಬುಲಾವ್ ನೀಡಲಾಗಿದೆ. ಅಲ್ಲದೆ, ಅರೆಸೇನಾ ಪಡೆಯನ್ನು ಸ್ಥಳಕ್ಕೆ ನಿಯೋಜಿಸಲಾಗಿದೆ.
ಪೌರತ್ವ ತಿದ್ದುಪಡಿ ಕಾಯ್ದೆ ಬೆಂಬಲಿತ ಮತ್ತು ಸಿಎಎ ವಿರೋಧಿಗಳ ನಡುವೆ ಕಲ್ಲು ತೂರಾಟ ನಡೆದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಪೊಲೀಸರು ಸಾಕಷ್ಟು ಸಂಖ್ಯೆಯಲ್ಲಿ ಇರದಿದ್ದ ಕಾರಣ ಪರಿಸ್ಥಿತಿ ನಿಯಂತ್ರಣಯನ್ನು ಮೀರಿತ್ತು. ಹೀಗಾಗಿ ಪರಿಸ್ಥಿತಿಯನ್ನು ತಹಬದಿಗೆ ತರಲು ಪೊಲೀಸ್ ಸಿಬ್ಬಂದಿ ಅಶ್ರುವಾಯು ಪ್ರಯೋಗ ಮಾಡಿದ್ದಾರೆ.
ಈ ಘಟನೆಯಲ್ಲಿ ಅನೇಕ ಪ್ರತಿಭಟನಾಕಾರರು ಕಲ್ಲು ತೂರಾಟದಿಂದ ಗಾಯಗೊಂಡಿದ್ದಾರೆ. ಘಟನೆಯ ಸ್ಥಳದಲ್ಲಿ ಜೈ ಶ್ರೀರಾಮ ಎಂಬ ಘೋಷಣೆಯು ಮೊಳಗಿತ್ತು ಎಂದು ಹೇಳಲಾಗಿದೆ.
ಇದಕ್ಕೂ ಮುನ್ನ ಬಿಜೆಪಿಯ ವಿವಾದಿತ ನಾಯಕ ಕಪಿಲ್ ಮಿಶ್ರಾ ಮತ್ತು ಇತರರು ಮಧ್ಯಾಹ್ನ 3 ಗಂಟೆ ಸಮಯಕ್ಕೆ ಜಫರಾಬಾದ್ ಮೆಟ್ರೋ ನಿಲ್ದಾಣ ಬಳಿ ಬಂದು ರಸ್ತೆಯನ್ನು ಖಾಲಿ ಮಾಡುವಂತೆ ಪ್ರತಿಭಟನಾಕಾರರನ್ನು ಕೋರಿದ್ದಾರೆ. ಈ ವೇಳೆ ಮಾತಿನ ಚಕಮಕಿ ಉಂಟಾಗಿ 4 ಗಂಟೆ ಸುಮಾರಿಗೆ ರಸ್ತೆಗೆ ಇಳಿದ ಜನರು ಕಲ್ಲು ತೂರಾಟ ನಡೆಸಿದ್ದಾರೆ ಎಂದು ತಿಳಿದುಬಂದಿದೆ.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ