ಭುವನೇಶ್ವರ: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭೇಟಿಯಿಂದ ಭಾರತಕ್ಕೆ ಪ್ರಯೋಜನವಿಲ್ಲ ಎಂದು ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ.
ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ‘ಅಮೆರಿಕದ ಆರ್ಥಿಕತೆ ಉತ್ತೇಜಿಸುವ ಸಲುವಾಗಿ ಟ್ರಂಪ್ ಬರುತ್ತಿದ್ದಾರೆ. ಅವರ ಭೇಟಿಯಿಂದ ನಮ್ಮ ದೇಶಕ್ಕೆ ಪ್ರಯೋಜವಿದೆ ಎಂದೆನಿಸುತ್ತಿಲ್ಲ’ ಎಂದು ಹೇಳಿದ್ದಾರೆ.
‘ಟ್ರಂಪ್ ಭೇಟಿ ವೇಳೆ ಕೆಲವು ರಕ್ಷಣಾ ಒಪ್ಪಂದಗಳಾಗಬಹುದು. ಅದೂ ಕೂಡ ಅಮೆರಿಕದ ಆರ್ಥಿಕತೆಯ ಉತ್ತೇಜನದ ಸಲುವಾಗಿಯೇ. ರಕ್ಷಣಾ ಸಾಮಗ್ರಿಗಳಿಗಾಗಿ ನಾವು ಪಾವತಿ ಮಾಡುತ್ತೇವೆ, ಅವರೇನೂ ಉಚಿತವಾಗಿ ಕೊಡುವುದಿಲ್ಲ’ ಎಂದು ಸ್ವಾಮಿ ಹೇಳಿದ್ದಾರೆ.
ಟ್ರಂಪ್ ಅವರು ಸೋಮವಾರದಿಂದ ಎರಡು ದಿನ ಭಾರತ ಪ್ರವಾಸ ಕೈಗೊಂಡಿದ್ದಾರೆ.
ಇದೇ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ ಯೆಚೂರಿ, ‘ಅಮೆರಿಕದ ರೈತರಿಗೆ ನೆರವು ಮಾಡಿಕೊಡುವ ಉದ್ದೇಶದಿಂದ ಟ್ರಂಪ್ ಬರುತ್ತಿದ್ದಾರೆ’ ಎಂದು ಹೇಳಿದ್ದಾರೆ.
ನಿಧಾನಗತಿಯ ಭಾರತದ ಆರ್ಥಿಕತೆಗೆ ಉತ್ತೇಜನ ನೀಡುವ ಅಗತ್ಯವಿದೆ ಎಂದು ಇಬ್ಬರೂ ನಾಯಕರು ಅಭಿಪ್ರಾಯಪಟ್ಟಿದ್ದಾರೆ. ಆದರೆ, ಆರ್ಥಿಕತೆಯ ಉತ್ತೇಜನಕ್ಕೆ ಇಬ್ಬರೂ ಭಿನ್ನ ಸಲಹೆಗಳನ್ನು ನೀಡಿದ್ದಾರೆ. ಜಿಎಸ್ಟಿ, ಆದಾಯ ತೆರಿಗೆ ರದ್ದುಗೊಳಿಸಬೇಕು ಎಂದು ಸ್ವಾಮಿ ಸಲಹೆ ನೀಡಿದರೆ, ಮೂಲಸೌಕರ್ಯ ಕ್ಷೇತ್ರದಲ್ಲಿ ಹೆಚ್ಚು ಹೂಡಿಕೆ ಮಾಡಬೇಕು ಮತ್ತು ಅಲ್ಪಾವಧಿ–ದೀರ್ಘಾವಧಿಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಯೆಚೂರಿ ಹೇಳಿದ್ದಾರೆ.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ