ಬಳ್ಳಾರಿ: ಕರ್ನಾಟಕ ಮುಸ್ಲಿಂ ಜಮಾಅತ್ ಇದರ ಬಳ್ಳಾರಿ ಜಿಲ್ಲಾ ಸಮಿತಿಯನ್ನು ಅಸ್ತಿತ್ವಕ್ಕೆ ತರಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೌಲಾನಾ ಅಬೂಸುಫ್ಯಾನ್ ಮದನಿ ವಹಿಸಿದ್ದು ರಾಜ್ಯ ವಕ್ಫ್ ಮಂಡಳಿ ಸದಸ್ಯ ಯಾಕೂಬ್ ಯೂಸುಫ್ ಹೊಸನಗರ ಉದ್ಘಾಟಿಸಿದರು.

ಮೌಲಾನಾ ಶಾಫಿ ಸಅದಿ ಆಯ್ಕೆ ಪ್ರಕ್ರಿಯೆಗೆ ನಾಯಕತ್ವ ನೀಡಿದರು. ‘ಪ್ರಜಾ ಭಾರತ’ ವಿಷಯ ಮಂಡನೆಯನ್ನು ಚಿಂತಕ ಹಾಗೂ ಬರಹಗಾರ ಅಬ್ದುಲ್ ಹಮೀದ್ ಬಜ್ಪೆ ಮಂಡಿಸಿದರು. ‘ಬದಲಾವಣೆ ನಮ್ಮಿಂದಲೇ’ ವಿಷಯವನ್ನು ಪ್ರೊ ಸಾದಿಕ್ ಮಲೆಬೆಟ್ಟು ಮಂಡಿಸಿದರು.

ಸಭೆಯಲ್ಲಿ ಮೌಲಾನಾ ಇಬ್ರಾಹಿಂ ಸಖಾಫಿ, ಅಬ್ದುಲ್ ನವಾಝ್ ಬಳ್ಳಾರಿ, ಮೌಲಾನಾ ಬಳ್ಳಾರಿ ಖಾಝಿ ಮುಹಿನುದ್ದೀನ್, ಬಳ್ಳಾರಿ ನಗರಸಭಾ ಅಧ್ಯಕರು ಝರ್ಫಾಕ್ ಅಹ್ಮದ್ ಮುಂತಾದವರು ಭಾಗವಹಿಸಿದ್ದರು.
ಅಧ್ಯಕ್ಷರಾಗಿ ಮಾಜಿ ಮೂಡ ಚೇರ್ಮನ್ ಜನಾಬ್ ಹುಮಯೂನ್ ಖಾನ್, ಪ್ರಧಾನ ಕಾರ್ಯದರ್ಶಿಯಾಗಿ ವರದ ಗೌಸ್ ಸಾಹೇಬ್ ಹಡಗಲಿ ಹಾಗೂ 33 ಮಂದಿ ಸದಸ್ಯರನ್ನೊಳಗೊಂಡ ಜಿಲ್ಲಾ ಸಮಿತಿಯನ್ನು ಆರಿಸಲಾಯಿತು.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ