ಎಲಿಮಲೆ ಜೀರ್ಮುಕ್ಕಿ ಮುಹ್ಯದ್ದೀನ್ ಮಸೀದಿ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ತರ್ಬಿಯತ್ತುಲ್ ಇಸ್ಲಾಂ ಎಸೋಸಿಯೇಶನ್ ಇದರ ವಾರ್ಷಿಕ ಮಹಾಸಭೆಯು ಬುಸ್ತಾನುಲ್ ಉಲೂಂ ಮದ್ರಸಾ ಸಭಾಂಗಣದಲ್ಲಿ ಸಮಿತಿಯ ಅಧ್ಯಕ್ಷರಾದ ಹಸನ್ ಹರ್ಲಡ್ಕರವರ ಅಧ್ಯಕ್ಷತೆಯಲ್ಲಿ ಜರಗಿತು.
ಸ್ಥಳೀಯ ಇಮಾಮರಾದ ಸೂಫಿ ಮುಸ್ಲಿಯಾರ್ ರವರು ಪ್ರಾರ್ಥನೆಗೆ ನೇತೃತ್ವ ಉದ್ಘಾಟಿಸಿದರು. ವರದಿ ಹಾಗೂ ಲೆಕ್ಕಪತ್ರ ಮಂಡಿಸಿ ನೂತನ ಕಾರ್ಯಕಾರಿ ಸಮಿತಿಯನ್ನು ಆರಿಸಲಾಯಿತು.
ಗೌರವಾಧ್ಯಕ್ಷರಾಗಿ ಅಬ್ದುಲ್ಲ ಜಿ. ಎ. ಕೆ, ಅಧ್ಯಕ್ಷರಾಗಿ ಫೈಝಲ್ ಜೀರ್ಮುಕ್ಕಿ, ಉಪಾಧ್ಯಕ್ಷರಾಗಿ ಸೂಫಿ ಮುಸ್ಲಿಯಾರ್, ಪ್ರ. ಕಾರ್ಯದರ್ಶಿಯಾಗಿ ಜುನೈದ್ ಸಖಾಫಿ ಜೀರ್ಮುಕ್ಕಿ, ಜೊತೆ ಕಾರ್ಯದರ್ಶಿಯಾಗಿ ಅಬ್ದುಲ್ ಖಾದರ್ ಜಿ. ಎಂ, ಕೋಶಾಧಿಕಾರಿಯಾಗಿ ಹಸನ್ ಹರ್ಲಡ್ಕ ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರುಗಳಾಗಿ ಜಿ. ಎಸ್ ಅಬ್ದುಲ್ಲ, ಸಿದ್ದೀಖ್ ಜಿ, ಹನೀಫ್ ಜಿ, ಬಾತಿಷಾ ವೈ ಹಾಗೂ ಲತೀಫ್ ಕ್ವಾಲಿಟಿ ಆಯ್ಕೆಯಾದರು.
ಜಮಾಅತ್ತಿನ ಹಿರಿಯ ನಾಯಕರಾದ ಅಬೂಬಕರ್ ಪಿ. ಎಚ್, ಮುಹಮ್ಮದ್ ಕುಂಞಿ ಹರ್ಲಡ್ಕ, ಮಸೀದಿಯ ಕೋಶಾಧಿಕಾರಿ ಯೂಸುಫ್ ಪಿ. ಎಚ್, ಸಮಿತಿಯ ಸ್ಥಾಪಕ ನಾಯಕರಾದ ಎಂ. ಕೆ ಜೀರ್ಮುಕ್ಕಿ, ಅಶ್ರಫ್ ಜಿ ಮುಂತಾದವರು ಮುಖ್ಯಾತಿಥಿಗಳಾಗಿ ಭಾಗವಹಿಸಿದ್ದರು. ಲತೀಫ್ ಕ್ವಾಲಿಟಿ ಸ್ವಾಗತಿಸಿ, ನೂತನ ಪ್ರ. ಕಾರ್ಯದರ್ಶಿ ಜುನೈದ್ ಸಖಾಫಿ ಜೀರ್ಮುಕ್ಕಿ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ