ಉಜಿರೆ : ಕರ್ನಾಟಕ ರಾಜ್ಯ ಸುನ್ನಿ ಸ್ಟೂಡೆಂಟ್ಸ್ ಫೆಡರೇಶನ್ (ರಿ.) SSF ಉಜಿರೆ ಇದರ ವಾರ್ಷಿಕ ಕೌನ್ಸಿಲ್ ಸೆಕ್ಟರ್ ಅಧ್ಯಕ್ಷರಾಗಿದ್ದ ಇಕ್ಬಾಲ್ ಮಾಚಾರುರವರ ಅಧ್ಯಕ್ಷತೆಯಲ್ಲಿ ಮಲ್ಜಅ್ ಕ್ಯಾಂಪಸ್ ಉಜಿರೆಯಲ್ಲಿ ನಡೆಯಿತು.ಸೆಕ್ಟರ್ ಉಸ್ತುವಾರಿ ಅಶ್ರಫ್ ಸಅದಿ ನಾವೂರು ಉದ್ಘಾಟಿಸಿದರು. ಸೆಕ್ಟರ್ ಪ್ರ.ಕಾರ್ಯದರ್ಶಿ ಮುಹಮ್ಮದ್ ಮುಬೀನ್ ಉಜಿರೆ ಲೆಕ್ಕಪತ್ರ ವಾಚಿಸಿ,ಕೋಶಾಧಿಕಾರಿ ಸಿದ್ದೀಕ್ ಕಾಜೂರು ಲೆಕ್ಕಪತ್ರ ಮಂಡಿಸಿದರು.
SSF ಬೆಳ್ತಂಗಡಿ ಡಿವಿಷನ್ ಮಾಜಿ ಅಧ್ಯಕ್ಷರಾದ ಕಾಸಿಂ ಮುಸ್ಲಿಯಾರ್ ಮಾಚಾರು ಸಾಂಘಿಕ ಕಾರ್ಯಚಟುವಟಿಕೆಯ ಬಗ್ಗೆ ಮಾತನಡಿದರು. ಇದೇ ಸಂದರ್ಭದಲ್ಲಿ ವೀಕ್ಷಕರಾಗಿ ಬಂದ ಬೆಳ್ತಂಗಡಿ ಡಿವಿಷನ್ ಪ್ರ.ಕಾರ್ಯದರ್ಶಿ ಶರೀಫ್ ನಾವೂರು ನೇತೃತ್ವದಲ್ಲಿ ಹಳೇ ಸಮಿತಿಯನ್ನು ಬರ್ಕಾಸುಗೊಳಿಸಿ ನೂತನ ಸಮಿತಿಯನ್ನು ಆರಿಸಲಾಯಿತು.
ಅಧ್ಯಕ್ಷರಾಗಿ ಹಮೀದ್ ಸಅದಿ,ಕುಕ್ಕಾವು. ಉಪಾಧ್ಯಕ್ಷರಾಗಿ ಮುಸ್ತಫಾ ಉಜಿರೆ,ಅಬ್ದುಲ್ ಹಕೀಂ ಹನೀಫಿ ನಿಡಿಗಲ್. ಪ್ರ.ಕಾರ್ಯದರ್ಶಿಯಾಗಿ ಮುಹಮ್ಮದ್ ಮುಬೀನ್ ಉಜಿರೆ. ಜೊತೆ ಕಾರ್ಯದರ್ಶಿಯಾಗಿ ಅನ್ಸಾರ್ ಸಅದಿ ಮಾಚಾರು, ಮಜೀದ್ ಅತ್ತಾಜೆ. ಕೋಶಾಧಿಕಾರಿಯಾಗಿ ಹಕೀಂ ಕಕ್ಕಿಂಜೆ. ಕ್ಯಾಂಪಸ್ ಕಾರ್ಯದರ್ಶಿಯಾಗಿ ಆದಿಲ್ ಮಾಚಾರು ಹಾಗೂ 15 ಮಂದಿ ಕಾರ್ಯಕಾರಿ ಸಮಿತಿ ಸದಸ್ಯರನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ SSF ಬೆಳ್ತಂಗಡಿ ಡಿವಿಷನ್ ಮಾಜಿ ಕಾರ್ಯದರ್ಶಿ ಹಾಗೂ ಖ್ಯಾತ ಪತ್ರಕರ್ತರಾದ ಅಶ್ರಫ್ ಅಲಿಕುಂಞಿ ಮುಂಡಾಜೆಯವರನ್ನು ಗೌರವಿಸಲಾಯಿತು. ಈ ಕಾರ್ಯಕ್ರಮದಲ್ಲಿ SSF ಬೆಳ್ತಂಗಡಿ ಡಿವಿಷನ್ ಕೋಶಾಧಿಕಾರಿ ಹಾರಿಸ್ ಕುಕ್ಕುಡಿ, KCF ನಾಯಕರಾದ ಇಬ್ರಾಹೀಂ ಕಾಜೂರು ಹಾಗೂ ಯುನಿಟ್ಗಳ ಸೆಕ್ಟರ್ ಕೌನ್ಸಿಲರ್ಗಳು ಉಪಸ್ಥಿತರಿದ್ದರು.
ಪ್ರ.ಕಾರ್ಯದರ್ಶಿ ಮುಹಮ್ಮದ್ ಮುಬೀನ್ ಉಜಿರೆ ಸ್ವಾಗತಿಸಿ ಕೊನೆಯಲ್ಲಿ ವಂದಿಸಿದರು.
ವರದಿ : ಎಂ.ಎಂ.ಉಜಿರೆ















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ