ಹೊಸ ದಿಲ್ಲಿ: ಟ್ರಂಪ್ ಅವರ 36 ತಾಸುಗಳ ಭಾರತ ಭೇಟಿಯಿಂದ ಏನೂ ಪ್ರಯೋಜನ ಇಲ್ಲ ಎಂದು ಶಿವಸೇನೆಯ ಮುಖವಾಣಿ ಸಾಮ್ನಾದಲ್ಲಿ ಸಂಪಾದಕೀಯ ಲೇಖನ ಬರೆಯಲಾಗಿದೆ.
ಭಾರತದಲ್ಲಿ ಬಡವರ ಬದಲು ಹಸನಾಗುವುದಿಲ್ಲ. ಮಧ್ಯಮ ವರ್ಗದ ಏಳ್ಗೆ ಸಾಧ್ಯವಾಗುವುದಿಲ್ಲ. ಹೀಗಿರುವಾಗ ಟ್ರಂಪ್ ಭೇಟಿಯು ಜನರಲ್ಲಿ ಉತ್ಸಹ ಮೂಡಿಸುವ ಮಾತು ದೂರ ಉಳಿದಿದೆ. ಅಂತಹ ಕುತೂಹಲ ಏನಾದರೂ ಇದ್ದರೆ ಅದು ಅಹಮದಾಬಾದ್ಗೆ ಸೀಮಿತಗೊಂಡಿದೆ ಎಂದು ಸಾಮ್ನಾ ಪತ್ರಿಕೆಯ ಸಂಪಾದಕೀಯಲ್ಲಿ ಶಿವಸೇನೆ ಹರಿಹಾಯ್ದಿದೆ.
ಔತಣಕೂಟಕ್ಕೆ ಕಾಂಗ್ರೆಸ್ ಗೈರು:
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಮಂಗಳವಾರ ನೀಡಲಾಗುವ ಸತ್ಕಾರ ಕೂಟದಲ್ಲಿ ಪಾಲ್ಗೊಳ್ಳದಿರಲು ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದಾರೆ. ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್, ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಮತ್ತು ರಾಜ್ಯಸಭೆ ಪ್ರತಿಪಕ್ಷ ನಾಯಕ ಗುಲಾಂ ನಬಿ ಆಜಾದ್ ಅವರಿಗೆ ಶನಿವಾರ ಅಧಿಕೃತ ಆಹ್ವಾನ ನೀಡಲಾಗಿತ್ತು.
ಮೊದಲು ಆಹ್ವಾನ ಒಪ್ಪಿದ್ದ ನಾಯಕರು ಸೋಮವಾರ ದಿಢೀರ್ ಬೆಳವಣಿಗೆಯಲ್ಲಿ ಉಲ್ಟಾ ಹೊಡೆದಿದ್ದಾರೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಆಹ್ವಾನ ನೀಡದಿರುವುದೇ ಇದಕ್ಕೆ ಕಾರಣ ಎಂದು ಮೂಲಗಳು ತಿಳಿಸಿವೆ. ‘ಟ್ರಂಪ್ ಇಲ್ಲಿಗೆ ಬಂದಿದ್ದಾರೆ. ಅವರಿಗಾಗಿ ಸರಕಾರ ಭರ್ಜರಿ ಔತಣಕೂಟ ಏರ್ಪಡಿಸಿದೆ. ಇದಕ್ಕೆ ಪ್ರತಿಪಕ್ಷಗಳನ್ನು ಕಡೆಗಣಿಸಲಾಗಿದೆ.
ಟ್ರಂಪ್ ಜತೆಗಿನ ಸತ್ಕಾರ ಕೂಟಕ್ಕೆ ಸೋನಿಯಾ ಗಾಂಧಿ ಅವರಿಗೆ ಆಹ್ವಾನ ನೀಡಿಲ್ಲ ಯಾಕೆ? ಅಮೆರಿಕದಲ್ಲಿ ‘ಹೌಡಿ ಮೋದಿ’ ಕಾರ್ಯಕ್ರಮಕ್ಕೆ ರಿಪಬ್ಲಿಕನ್ ಮತ್ತು ಡೆಮಾಕ್ರಟಿಕ್ಸ್ ಎರಡೂ ಪಕ್ಷಗಳ ನಾಯಕರಿಗೆ ಆಹ್ವಾನ ನೀಡಲಾಗಿತ್ತು. ಆದರೆ, ಇಲ್ಲಿ ಮೋದಿ ಮಾತ್ರ ಟ್ರಂಪ್ ಜತೆಗೆ ವೇದಿಕೆ ಮೇಲಿದ್ದರು. ಇದು ಯಾವ ರೀತಿಯ ಪ್ರಜಾಪ್ರಭುತ್ವ?’ ಎಂದು ಅಧೀರ್ ರಂಜನ್ ಪ್ರಶ್ನಿಸಿದ್ದಾರೆ.
ಮುಫ್ತಿ ಪುತ್ರಿಯಿಂದಲೂ ಸಿಟ್ಟು..!
ದಿಲ್ಲಿ ಹೊತ್ತು ಉರಿಯುತ್ತಿದೆ. 80 ಲಕ್ಷ ಕಾಶ್ಮೀರಿಗಳು ಮೂಲಭೂತ ಹಕ್ಕುಗಳಿಂದ ವಂಚಿತರಾಗಿದ್ದಾರೆ. ಆದರೆ ಕೇಂದ್ರ ಸರಕಾರ ಮಾತ್ರ ಅಮೆರಿಕ ಅಧ್ಯಕ್ಷ ಸ್ವಾಗತದಲ್ಲಿ ಬ್ಯುಸಿಯಾಗಿದೆ. ಗಾಂಧಿಯನ್ನು ಸ್ಮರಿಸಲಾಗಿದೆ, ಆದರೆ ಅವರ ಮೌಲ್ಯಗಳನ್ನು ಮರೆಯಲಾಗಿದೆ ಎಂದು ಮೆಹಬೂಬಾ ಮುಫ್ತಿ ಮಗಳು ಇಲ್ತಿಜಾ ಮುಫ್ತಿ ಹರಿಹಾಯ್ದಿದ್ದಾರೆ.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ