ಕುವೈತ್ ಸಿಟಿ: ಭಾರತ ಸೇರಿದಂತೆ ಹತ್ತು ದೇಶಗಳ ಪ್ರಯಾಣಿಕರಿಗೆ ಕುವೈತ್ ಪ್ರವೇಶಿಸಲು ಅವಕಾಶ ಲಭಿಸಬೇಕಾದರೆ ಕೋವಿಡ್ 19 ಸೋಂಕು ತಗುಲದ ಬಗ್ಗೆ ಖಚಿತಪಡಿಸುವ ಪ್ರಮಾಣ ಪತ್ರವನ್ನು ಹಾಜರು ಪಡಿಸಬೆಎಕು ಎಂದು ನಾಗರಿಕ ವಿಮಾನಯಾನ ಇಲಾಖೆ ಹೇಳಿದೆ. ಕೋವಿಡ್ 19 ಮುಕ್ತರೆನ್ನುವ ಪ್ರಮಾಣ ಪತ್ರವನ್ನು ಅವರು ತಮ್ಮ ದೇಶದ ಕುವೈತ್ ರಾಯಭಾರ ಕಚೇರಿಯ ಅಧಿಕೃತ ಆರೋಗ್ಯ ಕೇಂದ್ರಗಳಿಂದ ಪಡೆದುಕೊಳ್ಳಬೇಕು. ಮಾರ್ಚ್ 8 ರಿಂದ ಹೊಸ ನಿರ್ಧಾರ ಜಾರಿಗೆ ಬರಲಿದೆ.
ಭಾರತದ ಜೊತೆಗೆ, ಫಿಲಿಪೈನ್ಸ್, ಬಾಂಗ್ಲಾದೇಶ, ಈಜಿಪ್ಟ್, ಸಿರಿಯಾ, ಅಜೆರ್ಬೈಜಾನ್, ಟರ್ಕಿ, ಶ್ರೀಲಂಕಾ, ಜಾರ್ಜಿಯಾ ಮತ್ತು ಲೆಬನಾನ್ ದೇಶಗಳ ಪ್ರಯಾಣಿಕರಿಗೂ ಇದು ಅನ್ವಯಿಸುತ್ತದೆ. ಈ ದೇಶಗಳಿಂದ ಬರುವ ಪ್ರಯಾಣಿಕರು ಮಾರ್ಚ್ 8ರಿಂದ ಮುಂದಿನ ಸೂಚನೆ ಬರುವವರೆಗೆ ವಿಮಾನ ನಿಲ್ದಾಣದಲ್ಲಿ ವೈದ್ಯಕೀಯ ಪ್ರಮಾಣಪತ್ರವನ್ನು ಸಲ್ಲಿಸಬೇಕಾಗುತ್ತದೆ.
ಕುವೈತ್ನ ರಾಯಭಾರ ಕಚೇರಿಯಿಲ್ಲದ ದೇಶಗಳಲ್ಲಿ, ಆಯಾ ದೇಶಗಳ ಅಧಿಕಾರಿಗಳು ಅನುಮೋದಿಸಿದ ಆರೋಗ್ಯ ಕೇಂದ್ರಗಳ ಪ್ರಮಾಣೀಕರಣವು ಸಾಕಾಗುತ್ತದೆ.ಹೊಸತಾಗಿ ಆಗಮಿಸುವವರು ಮತ್ತು ರಜಾದಿನ ಮುಗಿದು ಮರಳುವವರಿಗೂ ಆದೇಶ ಅನ್ವಯಿಸುತ್ತದೆ.
ವೈದ್ಯಕೀಯ ಪ್ರಮಾಣಪತ್ರವನ್ನು ಹಾಜರುಪಡಿಸದಿದ್ದರೆ, ಅದೇ ವಿಮಾನದಲ್ಲಿ ತನ್ನ ಸ್ವಂತ ವೆಚ್ಚದಲ್ಲಿ ಹಿಂತಿರುಗಿಸಲಾಗುತ್ತದೆ. ವಾಪಸಾತಿ ವೆಚ್ಚವನ್ನು ಕುವೈತ್ ಭರಿಸುವುದಿಲ್ಲ. ಈ ನಿರ್ದೇಶನವು ಮೇಲಿನ ದೇಶಗಳಿಂದ ಬಂದ ಕುವೈತ್ ಪ್ರಜೆಗಳಿಗೆ ಅನ್ವಯಿಸುವುದಿಲ್ಲ, ಆದರೆ ನಾಗರಿಕರನ್ನು ವಿಮಾನ ನಿಲ್ದಾಣದಲ್ಲಿ ಕಡ್ಡಾಯ ಪರಿಶೋಧನೆಗೆ ಒಳಪಡಿಸಲಾಗುವುದು ಎಂದು ನಿರ್ದೇಶನಾಲಯ ತಿಳಿಸಿದೆ.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ