ಟೆಹರಾನ್,ಮಾ.7: ದೆಹಲಿಯಲ್ಲಿ ಹಿಂದುತ್ವ ಉಗ್ರರಿಂದ ಮುಸ್ಲಿಮರ ಹತ್ಯಾಕಾಂಡದ ಬಗ್ಗೆ ಇರಾನ್ನ ಸರ್ವೋಚ್ಚ ನಾಯಕ ಅಯತುಲ್ಲಾ ಅಲಿ ಖುಮೇನಿ ಪ್ರತಿಕ್ರಿಯಿಸಿದ್ದು, ಭಾರತದಲ್ಲಿ ಮುಸ್ಲಿಮರ ಮೇಲಿನ ಹಿಂಸಾಚಾರವು ವಿಶ್ವದಾದ್ಯಂತ ಮುಸ್ಲಿಮರನ್ನು ನೋಯಿಸುತ್ತಿದೆ ಎಂದು ಅವರು ಹೇಳಿದರು.
‘‘ಭಾರತದಲ್ಲಿ ನಡೆಯುತ್ತಿರುವ ಮುಸ್ಲಿಮರ ಹತ್ಯಾಕಾಂಡದ ಬಗ್ಗೆ ಜಗತ್ತಿನಾದ್ಯಂತವಿರುವ ಮುಸ್ಲಿಮರ ಹೃದಯಗಳು ರೋದಿಸುತ್ತಿವೆ” “ಹಿಂದುತ್ವ ಉಗ್ರವಾದಿಗಳು ಮತ್ತು ಅವರ ಪಕ್ಷಗಳನ್ನು ಭಾರತ ಸರಕಾರವು ನಿಯಂತ್ರಿಸಬೇಕು ಇಲ್ಲದಿದ್ದಲ್ಲಿ, ಮುಸ್ಲಿಂ ಜಗತ್ತಿನಲ್ಲಿ ಭಾರತವು ಪ್ರತ್ಯೇಕವಾಗಲಿದೆ” ಎಂದು ಅವರು ಟ್ವಿಟ್ಟರ್ನಲ್ಲಿ ತಿಳಿಸಿದ್ದಾರೆ.
ಈ ಹಿಂದೆ ದೆಹಲಿ ಹತ್ಯಾಕಾಂಡದಲ್ಲಿ ಬ್ರಿಟಿಷ್ ಸಂಸತ್ತು ಕೇಂದ್ರ ಸರ್ಕಾರವನ್ನೂ ಟೀಕಿಸಿತ್ತು. ಬ್ರಿಟಿಷ್ ಸಂಸತ್ತಿನ ಹೌಸ್ ಆಫ್ ಕಾಮನ್ಸ್ ನಲ್ಲಿ, ಲೇಬರ್, ಎಸ್ಎನ್ಪಿ ಮತ್ತು ಕನ್ಸರ್ವೇಟಿವ್ ಪಕ್ಷದ ಸಂಸದರು ಭಾರತ ಸರ್ಕಾರವನ್ನು ಟೀಕಿಸಿದರು. ಪೌರತ್ವ ಕಾನೂನಿನ ತಿದ್ದುಪಡಿಯನ್ನು ಬ್ರಿಟಿಷ್ ಸಂಸದರು ದೂಷಿಸಿದರು.
ಒಂದು ನಿರ್ಧಿಷ್ಟ ಸಮುದಾಯವನ್ನು ಗುರಿಯಾಗಿಸಿ, ಕೇಂದ್ರಾಡಳಿತವು ನಡೆಸಿದ ನರಮೇಧಕ್ಕೆ ಈವರೆಗೆ 53 ಮಂದಿ ಮೃತಪಟ್ಟು,ನೂರಾರು ಮಂದಿ ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆಪಡೆಯುತ್ತಿದ್ದಾರೆ.ಸಾವಿರಾರು ಬಡಕುಟುಂಬಗಳು ಬೀದಿ ಪಾಲಾಗಿವೆ.















ಇನ್ನಷ್ಟು ಸುದ್ದಿಗಳು
ಇರಾನ್ ಮೇಲೆ ಮತ್ತೆ ಯುಎಸ್ ದಾಳಿ; ಬಂದರ್ ಅಬ್ಬಾಸ್ ಸೇರಿದಂತೆ ವಿವಿಧ ಕೇಂದ್ರಗಳಲ್ಲಿ ಬಾಂಬ್ ದಾಳಿ
ಇರಾಕ್ನಲ್ಲೂ ಖಾಮ್ನಈ ಅಂತ್ಯಕ್ರಿಯೆ ವಿಧಿವಿಧಾನಗಳು; ನಜಫ್ನತ್ತ ಹರಿದುಬಂದ ಜನಸಾಗರ
ವಿಕಾಸದ ಕೂಗಿನೊಂದಿಗೆ ಇತ್ತಿಹಾದ್ ರೈಲು; ಟಿಕೆಟ್ ದರ ಮತ್ತು ರಿಯಾಯಿತಿಗಳ ಘೋಷಣೆ
ಯುಎಇ: ಮುಂದುವರಿದ ಭಾರತೀಯ ಪಾಸ್ಪೋರ್ಟ್ ಸೇವಾ ಬಿಕ್ಕಟ್ಟು
ಇತ್ತಿಹಾದ್ ರೈಲಿಗೆ ಐತಿಹಾಸಿಕ ಕ್ಷಣ; ಭವ್ಯ ಆರಂಭಕ್ಕೆ ಯುಎಇನಲ್ಲಿ ಅಭೂತಪೂರ್ವ ಜನಸ್ಪಂದನ
ವಲಸಿಗರಿಗೆ ಶುಭ ಸುದ್ದಿ: ಸೌದಿ ವರ್ಕ್ ಪರ್ಮಿಟ್ ಸ್ಥಿತಿ ಸರಿಪಡಿಸಿಕೊಳ್ಳುವ ಗಡುವು ವಿಸ್ತರಣೆ
‘ಅವನು ಬದುಕಿದ್ದರೆ ನಾನು ಕೂಡ ಬದುಕುತ್ತೇನೆ’; ಭೂಕಂಪದ ಅವಶೇಷಗಳ ನಡುವೆ ಮರಣವನ್ನೇ ಗೆದ್ದು ಬಂದ ತಾಯಿ ಮತ್ತು 18 ದಿನದ ಮಗು!
ದಾಳಿಗಳು ಮುಂದುವರಿದರೆ ‘ನರಕಸದೃಶ’ ತಿರುಗೇಟು ನೀಡಲಾಗುವುದು- ಇರಾನ್ ಎಚ್ಚರಿಕೆ
ಮತ್ತೆ ಯುದ್ಧವೇ? – ಎರಡನೇ ದಿನವೂ ಇರಾನ್ ಮೇಲೆ ಯುಎಸ್ ದಾಳಿ
ಬಹ್ರೇನ್ ಮೇಲೆ ಇರಾನ್ ಡ್ರೋನ್ ದಾಳಿ: ಸೌದಿ ಅರೇಬಿಯಾ ತೀವ್ರ ಖಂಡನೆ- ಪೂರ್ಣ ಬೆಂಬಲ ಘೋಷಣೆ