ಬೆಂಗಳೂರು: ಪಾಸ್ಪೋರ್ಟ್ ಅರ್ಜಿಗಳನ್ನು ಪರಿಶೀಲಿಸಿ ವಿಲೇವಾರಿ ಮಾಡುವ ಪ್ರಕ್ರಿಯೆ ರಾಜ್ಯದಲ್ಲಿ ವಿಳಂಬವಾಗುತ್ತಿದೆ. ಇದರಿಂದಾಗಿ ದೇಶದಲ್ಲಿ ರಾಜ್ಯ 37ನೇ ಸ್ಥಾನದಲ್ಲಿದೆ. ಪೊಲೀಸ್ ಠಾಣೆಗಳಿಗೆ ಬರುವ ಪಾಸ್ಪೋರ್ಟ್ ಅರ್ಜಿಗಳ ಪರಿಶೀಲನಾ ಪ್ರಕ್ರಿಯೆಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ ಸೇವಾ ಕೇಂದ್ರಗಳಿಗೆ ಮರಳಿಸಲು ಪೊಲೀಸ್ ಮಹಾನಿರ್ದೇಶಕ ಮತ್ತು ಮಹಾನಿರೀಕ್ಷಕ ಪ್ರವೀಣ್ ಸೂದ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಚೆನ್ನೈ, ಹೈದರಾಬಾದ್ನಲ್ಲಿ ನಾಲ್ಕು ದಿನಗಳಲ್ಲಿ ಈ ಪ್ರಕ್ರಿಯೆ ಪೂರ್ಣಗೊಳ್ಳುತ್ತಿದೆ. ಆಂಧ್ರ, ತೆಲಂಗಾಣ ಮತ್ತು ಗುಜರಾತ್ ಉಳಿದ ರಾಜ್ಯಗಳಿಗಿಂತಲೂ ಮುಂಚೂಣಿಯಲ್ಲಿವೆ. ನಾವು ಮಾತ್ರ ಏಕೋ ಏನೋ ಪಾಸ್ಪೋರ್ಟ್ ಅರ್ಜಿಗಳ ಪರಿಶೀಲನೆ ವಿಷಯದಲ್ಲಿ ಅಸಡ್ಡೆ ತೋರುತ್ತಿದ್ದೇವೆ ಎಂದು ಪ್ರವೀಣ್ ಸೂದ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪಾಸ್ಪೋರ್ಟ್ ಅರ್ಜಿಗಳ ವಿಲೇವಾರಿಗಾಗಿ ‘ಸಕಾಲ’ ಯೋಜನೆ ಜಾರಿಗೆ ತಂದಿರುವ ಮೊದಲ ರಾಜ್ಯ ಕರ್ನಾಟಕ. ಪ್ರಾಯೋಗಿಕವಾಗಿ ಈ ಯೋಜನೆಯನ್ನು ಜಾರಿ ಮಾಡಲಾಗಿತ್ತು. ಬೆಂಗಳೂರು ಗ್ರಾಮೀಣದಲ್ಲಿ ಶೇ 15, ಕಲಬುರ್ಗಿಯಲ್ಲಿ ಶೇ 19 ಹಾಗೂ ಕೋಲಾರದಲ್ಲಿ ಶೇ 37ರಷ್ಟು ಅರ್ಜಿಗಳು ನಿಗದಿತ ಅವಧಿಯೊಳಗೆ ವಿಲೇವಾರಿ ಆಗುತ್ತಿವೆ. ಈ 21 ದಿನವೂ ಸಾರ್ವಜನಿಕರ ದೃಷ್ಟಿಯಿಂದ ವಿಳಂಬವೇ ಆಗಿದೆ ಎಂದು ಅವರು ಹೇಳಿದ್ದಾರೆ.
ಸದ್ಯದ ಪರಿಸ್ಥಿತಿಯಲ್ಲಿ ಬೀದರ್, ಬೆಂಗಳೂರು ನಗರ, ಶಿವಮೊಗ್ಗ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಮಾತ್ರ ಪಾಸ್ಪೋರ್ಟ್ ಅರ್ಜಿಗಳ ಪರಿಶೀಲನಾ ಪ್ರಕ್ರಿಯೆ ಕ್ರಮವಾಗಿ 5,10,11 ಹಾಗೂ 12 ದಿನಗಳಲ್ಲಿ ಮುಗಿಯುತ್ತಿದೆ. ಬೆಂಗಳೂರು ಗ್ರಾಮೀಣ, ಕಲಬುರ್ಗಿ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಕ್ರಮವಾಗಿ 38, 44 ಮತ್ತು 30 ದಿನ ಹಿಡಿಯುತ್ತಿದೆ. ಬೆಂಗಳೂರು ಮತ್ತು ಮಂಗಳೂರು ಹೊರತುಪಡಿಸಿದರೆ ಉಳಿದೆಡೆ ಅಷ್ಟೇನೂ ಹೊರೆ ಇರುವುದಿಲ್ಲ. ಆದಾಗ್ಯೂ ಪಾಸ್ಪೋರ್ಟ್ ಅರ್ಜಿಗಳ ಪರಿಶೀಲನೆಗೆ ಅಧಿಕಾರಿಗಳು ಅನಗತ್ಯ ವಿಳಂಬ ಮಾಡುತ್ತಿರುವುದು ಸರಿಯಲ್ಲ ಎಂದು ಸೂದ್ ಎಚ್ಚರಿಸಿದ್ದಾರೆ.
ಪಾಸ್ಪೋರ್ಟ್ ಅರ್ಜಿಗಳ ಪರಿಶೀಲನೆ ಮೇಲೆ ಹಿರಿಯ ಅಧಿಕಾರಿಗಳು ನಿಗಾ ವಹಿಸಬೇಕು. ಕಾಲಕಾಲಕ್ಕೆ ಪ್ರಗತಿ ಪರಿಶೀಲಿಸಬೇಕು. ಈ ವಿಷಯದಲ್ಲಿ ಏನಾದರೂ ಅಡೆತಡೆಗಳಿದ್ದರೆ ತಮ್ಮ ಗಮನಕ್ಕೆ ತರಬೇಕು. ತಾವೂ ಮೇಲಿಂದ ಮೇಲೆ ಪ್ರಗತಿ ಪರಿಶೀಲಿಸುವುದಾಗಿ ಡಿಜಿ ಮತ್ತು ಐಜಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಅಬ್ದುಲ್ ರಹೀಮ್ ಬಿಡುಗಡೆ ಆದೇಶಕ್ಕೆ ಸಹಿ – 20 ವರ್ಷಗಳ ಸೆರೆಮನೆ ವಾಸಕ್ಕೆ ಕೊನೆಗೂ ಮುಕ್ತಿ
ಬಕ್ರೀದ್ ‘ಈದ್ ಅಲ್-ಅದ್ಹಾ’ ; 382 ಕೈದಿಗಳ ಬಿಡುಗಡೆ- ಒಮಾನ್ ದೊರೆ ಆದೇಶ
ಈದುಲ್ ಅದ್’ಹಾ ಮುಬಾರಕ್ – ಯುಎಇ ಯಲ್ಲಿ 2700 ಕ್ಕೂ ಹೆಚ್ಚು ಖೈದಿಗಳಿಗೆ ಬಿಡುಗಡೆ ಭಾಗ್ಯ
‘ಲಬ್ಬೈಕ್ ಅಲ್ಲಾಹುಮ್ಮ ಲಬ್ಬೈಕ್’ ಪುಣ್ಯ ಭೂಮಿಯಲ್ಲಿ 20 ಲಕ್ಷಕ್ಕೂ ಹೆಚ್ಚು ಯಾತ್ರಿಕರ ಸಮಾಗಮ- ಇಂದು ‘ಅರಫಾತ್ ಸಂಗಮ’
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವೈದ್ಯಕೀಯ ಕ್ಷೇತ್ರಕ್ಕೆ ಗಂಭೀರ ಸವಾಲು : ಎಸ್ಸೆಸ್ಸೆಫ್ ಬೆಂಗಳೂರು
ಕಾನೂನುಬದ್ಧ ಬಲಿದಾನಕ್ಕೆ ಪೊಲೀಸ್ ಸಂರಕ್ಷಣೆ ನೀಡಿ- ಗೃಹ ಸಚಿವರಿಗೆ ಮೌಲಾನಾ ಶಾಫಿ ಸಅದಿ ಮನವಿ
‘ನನ್ನನ್ನು ತಿಹಾರ್ ಜೈಲಿಗೆ ಹಾಕಬಹುದು’; ಆತಂಕ ಹಂಚಿಕೊಂಡ ಕಾಕ್ರೋಚ್ ಜನತಾ ಪಕ್ಷದ ಸಂಸ್ಥಾಪಕ ಅಭಿಜೀತ್ ದಿಪ್ಕೆ
ವೈದ್ಯರ ನಿರ್ಲಕ್ಷ್ಯದಿಂದ ಯುವಕ ಮೃತ್ಯು: ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿ ಶಾಫಿ ಸಅದಿ ಅವರಿಂದ ಸಚಿವರಿಗೆ ಮನವಿ
ಉಪ್ಪಿನಂಗಡಿ: ಕಂಪ್ಯೂಟರ್ ಕ್ಲಾಸ್ಗೆ ತೆರಳಿದ್ದ 13 ವರ್ಷದ ಬಾಲಕ ನಾಪತ್ತೆ
ಗಲ್ಫ್ ನಾಯಕರ ವಿನಂತಿಗೆ ಮನ್ನಣೆ ; ಇರಾನ್ ಮೇಲಿನ ದಾಳಿ ತಾತ್ಕಾಲಿಕ ರದ್ದು- ಟ್ರಂಪ್