ರಿಯಾದ್: ಸೌದಿಯಲ್ಲಿ ವಿಮಾನಯಾನ ಸಂಸ್ಥೆಗಳು ತಮ್ಮ ಸೇವೆಗಳನ್ನು ಸ್ಥಗಿತಗೊಳಿಸಿದ ಬಳಿಕ ಉಮ್ರಾ ಯಾತ್ರಿಕರು ಜಿದ್ದಾದಲ್ಲಿ ಸಿಲುಕಿಕೊಂಡಿದ್ದಾರೆ. ಅವರನ್ನು ಆದಷ್ಟು ಬೇಗ ಹಿಂದಿರುಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ದೂತಾವಾಸ ತಿಳಿಸಿದೆ. ಊರಿಗೆ ಮರಳಲು ಹೆಣಗಾಡುತ್ತಿರುವ ಉಮ್ರಾ ಯಾತ್ರಿಕರಿಗೆ ಸಹಾಯ ಮಾಡಲು ಕಾನ್ಸುಲೇಟ್ ವತಿಯಿಂದ
ಸಹಾಯವಾಣಿ ಕೇಂದ್ರವನ್ನು ಪ್ರಾರಂಭಿಸಲಾಗಿದೆ.
ಕೋವಿಡ್ 19 ವೈರಸ್ ಹರಡಿರುವ ಹಿನ್ನೆಲೆಯಲ್ಲಿ ವಿವಿಧ ವಿಮಾನಯಾನ ಸಂಸ್ಥೆಗಳು ಸೇವೆಯನ್ನು ನಿಲ್ಲಿಸಿದ ಕಾರಣ ಭಾರತದ ವಿವಿಧ ಕಡೆಯಿಂದ ಬಂದ ಉಮ್ರಾ ಯಾತ್ರಿಕರು ಜಿದ್ದಾದಲ್ಲಿ ಸಿಲುಕಿಕೊಂಡಿದ್ದು, ಅವರನ್ನು ಆದಷ್ಟು ಬೇಗ ಹಿಂದಿರುಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಜಿದ್ದಾದ ಭಾರತೀಯ ದೂತಾವಾಸದ ಮೂಲಗಳು ತಿಳಿಸಿವೆ. ಇದಕ್ಕಾಗಿ ಉಮ್ರಾ ಗುಂಪು ಮತ್ತು ವಿಮಾನಯಾನ ಸಂಸ್ಥೆಗಳ ನಡುವೆ ಚರ್ಚೆಗಳು ನಡೆಯುತ್ತಿವೆ.
ಅವರು ಈ ತಿಂಗಳ 9 ರಂದು ಹಿಂದಿರುಗಬೇಕಿತ್ತು. ಸೌದಿಯು ನಿರ್ಬಂಧ ಹೇರುವ ಮುನ್ನ ಆಗಮಿಸಿದವರ ಪೈಕಿ ಮರಳಲು ಕಷ್ಟಪಡುತ್ತಿರುವವರು ಸಹಾಯವಾಣಿಯ ಮೂಲಕ ತಿಳಿಸುವಂತೆ ಭಾರತೀಯ ದೂತಾವಾಸ ತಿಳಿಸಿದೆ. ಮರಳಲು ಸಹಾಯದ ಅಗತ್ಯವಿರುವವರು 00966 55 44 03 02 3 ಗೆ ಕರೆ ಮಾಡಲು ಕೋರಲಾಗಿದೆ.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ