ಮಂಗಳೂರು, ಮಾ.15- ವಿಶ್ವಾದ್ಯಂತ ಮಹಾಮಾರಿ ಕೊರೋನಾ ವೈರಸ್ ಗೆ ಜನರು ತತ್ತರಿಸಿದ್ದು, ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ವೃದ್ಧಿಸುತ್ತಲೇ ಇದೆ. ಕೊರೊನಾ ಎಂದ ತಕ್ಷಣ ನಾಗರಿಕರು ಓಡುವ ಪರಿಸ್ಥತಿ ನಿರ್ಮಾಣವಾದರೆ, ಆದರೆ ಕರ್ನಾಟಕದ ಮಂಗಳೂರಿನಲ್ಲಿ ಇದಕ್ಕಿಂತ ಕೊಂಚ ಭಿನ್ನ ಪರಿಸ್ಥಿತಿ ಇದೆ. ಈ ಮಧ್ಯೆ ಕಡಲ ನಗರಿ ಮಂಗಳೂರು ಬಂದರಿನಲ್ಲಿ ಕೊರೊನಾ ಪತ್ತೆಯಾಗಿದೆ. ಆದರೆ ಇದು ಮಹಾಮಾರಿ ಕೋವಿಡ್ 19 ಕೊರೋನಾ ವೈರಸ್ ಅಲ್ಲ, ಬದಲಾಗಿ ಇದು ಕೊರೋನಾ ಹೆಸರಿನ ಮೀನಾಗಿದೆ.
ಕೊರೊನಾ ಬರುವುದೇ ಬೇಡ ಅಂತ ದೇವರಲ್ಲಿ ಮೊರೆ ಇಟ್ಟು ಮುಂಜಾಗ್ರತಾ ಕ್ರಮ ಕೈಗೊಂಡರೆ ಇಲ್ಲಿ ಮಾತ್ರ ಜನ ಕೊರೊನಾ ಬೇಕು ಅಂತಿದ್ದಾರಂತೆ. ಕೊರೊನಾ ಕಡಲಿನಲ್ಲಿ ಸಿಗುವ ಬಲು ಅಪರೂಪದ ಮೀನು ಆಗಿದೆ. ಕೊರೊನಾ ಮೀನಿಗೆ ಕೆ.ಜಿ ಗೆ 1,800 ರಿಂದ 2000 ವರೆಗೆ ಉತ್ತಮ ಬೆಲೆ ಇದೆ. ಕರಾವಳಿ ಜಿಲ್ಲೆಯಲ್ಲಿ ಇದರ ಬೇಡಿಕೆ ಕಡಿಮೆ. ಹೀಗಾಗಿ ಕೊರೊನಾ ಮೀನಿಗೆ ಉತ್ತಮ ಬೇಡಿಕೆ ಇರುವ ಗುಜರಾತ್ ಸೇರಿದಂತೆ ಬೇರೆ ರಾಜ್ಯಗಳಿಗೆ ಇದು ರಫ್ತು ಆಗುತ್ತಿದೆ. ಮತ್ಸ್ಯ ಕ್ಷಾಮದಿಂದ ಕಂಗೆಟ್ಟಿದ್ದ ಮೀನುಗಾರರಿಗೆ ಕೊರೊನಾ ಮೀನು ಸಿಕ್ಕಿದ್ದು ಖುಷಿ ಕೊಟ್ಟಿದೆ. ಇದರ ನಡುವೆ ವೈರಸ್ ಕೊರೊನಾದಿಂದ ಬಂದರಿನಲ್ಲಿ ಕೊರೊನಾ ಮೀನಿನ ಸದ್ದು ಕೂಡ ಜೋರಾಗಿದೆ.















ಇನ್ನಷ್ಟು ಸುದ್ದಿಗಳು
ಮುಸ್ಲಿಮ್ ಮತ ಸ್ಥಿತಿಗತಿ ಇಂದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಸುದೃಢಗೊಳಿಸಿದೆ,ರಾಜಣ್ಣ ಅರಿಯಲಿ: ಕೆ.ಅಶ್ರಫ್
ಮೊಂಟೆಪದವು ಗುಡ್ಡ ಕುಸಿತ: ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಮೃತ್ಯು- ತಾಯಿಯ ರಕ್ಷಣೆ
ದೇರಳಕಟ್ಟೆ : ಮನೆಯ ತಡೆಗೋಡೆ ಕುಸಿದು 10 ವರ್ಷದ ಪುಟ್ಟ ಬಾಲಕಿ ಮೃತ್ಯು
ಭಾರೀ ಮಳೆ: ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಪುಟ್ಟ ಮಗು ಸಹಿತ ಇಬ್ಬರು ಮೃತ್ಯು
ಸದಾ ಸಮುದಾಯದ ಪರ ಧ್ವನಿಯೆತ್ತುವ ಅಲ್ಪಸಂಖ್ಯಾತ ಸಚಿವರು ಕರಾವಳಿಗೆ ಭೇಟಿ ನೀಡದಿರಲು ಕಾರಣವೇನು?
ಉಲಮಾ ಒಕ್ಕೂಟದ ವಖ್ಫ್ ಪ್ರತಿಭಟನೆ : ಪೊಲೀಸ್ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ ಸಂಘಟಕರು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ: ಜೆಡಿಎಸ್ ಬಂಟ್ವಾಳ ಮೈನಾರಿಟಿ ಅಧ್ಯಕ್ಷ ಮುಹಮ್ಮದ್ ಶಫೀಕ್ ಆಲಡ್ಕ
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಮ್ ಬಸ್ ಪ್ರಯಾಣಿಕನ ಮೇಲೆ ಹಲ್ಲೆ: ಶೀಘ್ರ ಕಾನೂನು ಕ್ರಮ ಕೈಗೊಳ್ಳಬೇಕು- ಕೆ.ಅಶ್ರಫ್