janadhvani

Kannada Online News Paper

ಮಸೀದಿಗಳಲ್ಲಿ ನಮಾಜ್ ಗಳನ್ನು ಶೀಘ್ರ ಮುಗಿಸಬೇಕು-ಖಾಝಿ ಬೇಕಲ್ ಉಸ್ತಾದ್

ಉಡುಪಿ: ವಿಶ್ವಾದ್ಯಂತ ವ್ಯಾಪಕವಾಗಿ ಹರಡುತ್ತಿರುವ ಕೊರೋನ ವೈರಸ್ ಭಾರತದಲ್ಲೂ ದಿನೇನೆ ಹೆಚ್ಚುತ್ತಿದ್ದು, ಈ ನಿಟ್ಟಿನಲ್ಲಿ ರಾಜ್ಯ ಸರಕಾರವು ಜಾರಿಗೆ ತಂದಿರುವ ಕಾನೂನುಗಳನ್ನು ಪಾಲಿಸುವಂತೆ ಉಡುಪಿ,ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲಾ ಸುನ್ನೀ ಸಂಯುಕ್ತ ಜಮಾಅತ್ ಖಾಝಿ ಶೈಖುನಾ ಪಿ.ಎಮ್ ಇಬ್ರಾಹಿಂ ಮುಸ್ಲಿಯಾರ್ ತಿಳಿಸಿದ್ದಾರೆ.

ಜನಸಂಖ್ಯೆ ಒಟ್ಟಾಗುವ ಸಭೆ, ಸಮಾರಂಭಗಳನ್ನು ಸಧ್ಯಕ್ಕೆ ಕೈಬಿಡಬೇಕು, ಮಸೀದಿಗಳಲ್ಲಿ ನಡೆಸುವ ನಮಾಝ್ ಮುಂತಾದ ಆರಾಧನೆಗಳನ್ನು ಶೀಘ್ರದಲ್ಲೇ ಮುಗಿಸಬೇಕು, ಸಾರ್ವಜನಿಕರು ಉಪಯೋಗಿಸುವ ಟ್ಯಾಂಕ್ ನೀರನ್ನು ಬಳಸುವುದನ್ನು ನಿಲ್ಲಿಸಿ ನಳ್ಳಿ ನೀರನ್ನು ಬಳಸಿ ಜಾಗರೂಕರಾಗಬೇಕೆಂದು  ಖಾಝಿ ಶೈಖುನಾ ಪಿ.ಎಮ್ ಇಬ್ರಾಹಿಂ ಮುಸ್ಲಿಯಾರ್ ತಿಳಿಸಿರುವುದಾಗಿ ಜಿಲ್ಲಾ ಸಂಯುಕ್ತ ಜಮಾಅತ್ ಅಧ್ಯಕ್ಷರಾದ ಹಾಜಿ ಪಿ ಅಬೂಬಕ್ಕರ್ ನೇಜಾರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !! Not allowed copy content from janadhvani.com