ಮನಾಮ: ಬಹ್ರೇನ್ನ ವಲಸಿಗರಿಗೆ ಸಂತೋಷದ ಸುದ್ದಿ. ಎಲ್ಲರ ವಿದ್ಯುತ್ ಮತ್ತು ನೀರಿನ ಬಿಲ್ಗಳನ್ನು ಮೂರು ತಿಂಗಳವರೆಗೆ ಸರಕಾರವೇ ಪಾವತಿಸಲಿದೆ.
ಕೋವಿಡ್ನ ಪರಿಣಾಮವಾಗಿ ಉಂಟಾಗುವ ಆರ್ಥಿಕ ಪರಿಣಾಮವನ್ನು ಸರಿದೂಗಿಸಲು ಏಪ್ರಿಲ್ನಿಂದ ಮೂರು ತಿಂಗಳವರೆಗೆ ವಿದ್ಯುತ್ ಮತ್ತು ನೀರಿನ ಬಿಲ್ಗಳನ್ನು ಯಾರೂ ಪಾವತಿಸಬೇಕಾಗಿಲ್ಲ ಎಂದು ಸರ್ಕಾರ ನಿರ್ಧರಿಸಿದೆ.
ಹಲವಾರು ಪ್ರಮುಖ ನಿರ್ಧಾರಗಳನ್ನು ಪ್ರಕಟಿಸಲಾಗಿದೆ. ಕೋವಿಡ್ -19 ಕಾಯಿಲೆಯಿಂದ ಉಂಟಾಗುವ ಬಿಕ್ಕಟ್ಟನ್ನು ನಿಭಾಯಿಸಲು ವಿತ್ತ ಸಚಿವ ಶೈಖ್ ಸಲ್ಮಾನ್ ಬಿನ್ ಖಾಲಿದ್ ಅಲ್ ಖಲೀಫಾ ಪ್ರತಿದಿನ 430 ಕೋಟಿ ದಿನಾರ್ನ ಆರ್ಥಿಕ ಪ್ಯಾಕೇಜನ್ನು ಪ್ರಕಟಿಸಿದ್ದಾರೆ.
ವಲಸಿಗರು ಸೇರಿದಂತೆ ದೇಶದ ಜನರಿಗೆ ಅನುಕೂಲವಾಗುವಂತಹ ಹಲವಾರು ನಿರ್ಧಾರಗಳನ್ನು ಸಚಿವರು ಘೋಷಿಸಿದ್ದಾರೆ.
- ಏಪ್ರಿಲ್ ನಿಂದ ಮೂರು ತಿಂಗಳ ವರೆಗೆ ಎಲ್ಲಾ ವ್ಯಕ್ತಿಗಳ ಮತ್ತು ಸಂಸ್ಥೆಗಳ ವಿದ್ಯುತ್ ಮತ್ತು ನೀರಿನ ಬಿಲ್ಗಳನ್ನು ಸರಕಾರವು ಪಾವತಿಸಲಿದೆ.
- ಈ ಮೂರು ತಿಂಗಳಲ್ಲಿ ಪುರಸಭೆ ಮತ್ತು ಪ್ರವಾಸೋದ್ಯಮ ಶುಲ್ಕವನ್ನು ವಿಧಿಸಲಾಗುವುದಿಲ್ಲ.
- ಖಾಸಗಿ ಕೈಗಾರಿಕಾ ಭೂಮಿಯ ಬಾಡಿಗೆಯನ್ನೂ ಬಿಡಲಿದೆ.
- ಸಾಲ ಮರುಪಾವತಿ ಅವಧಿಯನ್ನು ಆರು ತಿಂಗಳವರೆಗೆ ಮುಂದೂಡಲು ಮತ್ತು ಹೆಚ್ಚುವರಿ ಸಾಲಗಳನ್ನು ಒದಗಿಸಲು ಬ್ಯಾಂಕುಗಳಿಗೆ ಸಹಾಯ ಮಾಡಲು ಸೆಂಟ್ರಲ್ ಬ್ಯಾಂಕ್ ಆಫ್ ಬಹ್ರೈನ್ 370 ಕೋಟಿಗಳ ಪ್ಯಾಕೇಜ್ ಅನ್ನು ಜಾರಿಗೆ ತರಲಿದೆ.
- ಸಂಕಷ್ಟಕ್ಕೀಡಾದ ಸಂಸ್ಥೆಗಳಿಗೆ ಸಹಾಯವಾಗಲು, ಸಾಲಗಳನ್ನು ಪುಣರ್ ಕ್ರಮೀಕರಿಸಲು ಲೇಬರ್ ಫಂಡ್ ಯೋಜನೆಯನ್ನು ಉಪಯೋಗಿಸಲಾಗುವುದು.
- ಲಿಕ್ವಿಡ್ ಫಂಡ್ ಅನ್ನು ಇಮ್ಮಡಿಗೊಳಿಸಿ, 200 ಮಿಲಿಯನ್ ದಿನಾರ್ಗಳಾಗಿ ದ್ವಿಗುಣಗೊಳಿಸಲು ಯೋಜನೆ ರೂಪಿಸಲಾಗಿದೆ.















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು