ಉಡುಪಿ: ಕೊರೋನಾ ವೈರಸ್ ಭೀತಿಯಿಂದ ರಾಜ್ಯ ಸರಕಾರ ಹಾಗೂ ಆರೋಗ್ಯ ಇಲಾಖೆಯು 2020 ಮಾರ್ಚ್ 23 ರಿಂದ 31ರ ವರೆಗೆ ಹೊರಡಿಸಿದ ‘ಲಾಕ್ ಡೌನ್’ ಆದೇಶವನ್ನು ಪಾಲಿಸುವುದು ನಮ್ಮ ಕರ್ತವ್ಯವಾಗಿದೆ ಎಂದು ಉಡುಪಿ, ಚಿಕಮಗಳೂರು, ಹಾಸನ ಜಿಲ್ಲಾ ಸಂಯುಕ್ತ ಖಾಝಿ ಪಿ.ಎಂ.ಇಬ್ರಾಹೀಂ ಮುಸ್ಲಿಯಾರ್ ತಿಳಿಸಿದ್ದಾರೆ.
ಆರೋಗ್ಯ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ.ಆದ್ದರಿಂದ ಮನೆಯಿಂದ ಹೊರಬಾರದೆ, ಮನೆಯಲ್ಲೇ ನಮಾಜನ್ನು ನಿರ್ವಹಿಸಿ, ಆರಾಧನಾ ಕರ್ಮಗಳನ್ನು ಹೆಚ್ಚಿಸಿ, ಈ ಮಹಾಮಾರಿಯಿಂದ ಮುಕ್ತಿ ಲಭಿಸಲು ಅಲ್ಲಾಹನಲ್ಲಿ ಪ್ರಾರ್ಥಿಸ ಬೇಕಾಗಿದೆ.
ಜುಮುಅ ಸಹಿತ ಐದು ಹೊತ್ತಿನ ನಮಾಝ್ ಗಳನ್ನು ತಾತ್ಕಾಲಿಕ ಮಸೀದಿಯಲ್ಲಿ ನಿಲ್ಲಿಸಿ ಎಂಬ ಸರಕಾರದ ಆದೇಶವನ್ನು ಪಾಲಿಸಿ,ಮನೆಯಲ್ಲೇ ನಮಾಝ್ ನಿರ್ವಹಿಸ ಬೇಕಾಗಿದೆ. ಕೊರೋನಾ ಒಂದು ಸಾಂಕ್ರಾಮಿಕ ರೋಗವಾಗಿದ್ದು,ಅದನ್ನು ತಡೆಗಟ್ಟಲು ಸರಕಾರ ಮತ್ತು ಆರೋಗ್ಯ ಇಲಾಖೆ ಯಾವುದೇ ಆದೇಶಗಳನ್ನು ಹೊರಡಿಸಿದರೂ ಅದನ್ನು ಪಾಲಿಸುವುದು ನಮ್ಮ ಜವಾಬ್ದಾರಿಯಾಗಿದೆ.
ಜುಮುಅ ದಿನ ಮನೆಯಲ್ಲಿ 4 ರಕಅತ್ ಳುಹರ್ ನಮಾಝ್ ನಿರ್ವಹಿಸಿ ಎಂದು ಉಡುಪಿ ಜಿಲ್ಲಾ ಸಂಯುಕ್ತ ಖಾಝಿ ಪಿ.ಎಮ್.ಇಬ್ರಾಹಿಂ ಮುಸ್ಲಿಯಾರ್ ಬೇಕಲ ತಿಳಿಸಿರುವುದಾಗಿ ಉಡುಪಿ ಜಿಲ್ಲಾ ಸುನ್ನೀ ಸಂಯುಕ್ತ ಜಮಾಅತ್ ಪ್ರಧಾನ ಕಾರ್ಯದರ್ಶಿ ಹಾಜಿ ಎಮ್ ಎ ಬಾವು ಮೂಳೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಸುನ್ನೀ ಕೋ-ಓಡಿನೇಶನ್ ವತಿಯಿಂದ ಎಮ್ ಎ ಗಫೂರ್ ರವರಿಗೆ ಸನ್ಮಾನ
ಉಡುಪಿಯಲ್ಲಿ : ಎಸ್ ವೈ ಎಸ್ ‘ಸೌಹಾರ್ದ ಸಂಚಾರ’
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ನಮ್ಮ ನಾಡ ಒಕ್ಕೂಟ: ವಿದ್ಯಾರ್ಥಿಗಳಿಗೆ ತರಬೇತಿ ಹಾಗೂ ಸಹಾಯಧನ ವಿತರಣೆ
ಎನ್.ಎನ್.ಓ ಉಡುಪಿ ಜಿಲಾ ಸಮಿತಿ: ಕಟ್ಟಡ ದಾನಿಗೆ ಸನ್ಮಾನ
ಉಡುಪಿ: ಬಡ ಪ್ರತಿಭಾವಂತ ವಿದ್ಯಾರ್ಥಿಗೆ ಸಹಾಯಧನ ಹಸ್ತಾಂತರ
ನಮ್ಮ ನಾಡ ಒಕ್ಕೂಟ ಉಡುಪಿ ಜಿಲ್ಲಾ ಪದಗ್ರಹಣ ಹಾಗೂ ಸನ್ಮಾನ
ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಪರ್ಕಳ ಹಾಜಿ ಅಬ್ದುಲ್ಲಾ ಸಾಹೇಬರಿಗೆ ಸನ್ಮಾನ
ಖಿದ್ಮಾ ಫೌಂಡೇಶನ್ ವತಿಯಿಂದ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ
ರಾಜ್ಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವರನ್ನು ಭೇಟಿ ಮಾಡಿದ ಎನ್.ಎನ್. ಓ ಉಡುಪಿ ಜಿಲ್ಲಾ ನಿಯೋಗ