ರಿಯಾದ್: ಕೋವಿಡ್ 19 ಹರಡುವಿಕೆಯನ್ನು ತಡೆಯಲು ಸೌದಿಯು ನಿಯಂತ್ರಣಗಳನ್ನು ಬಿಗಿಗೊಳಿಸಿರುವುದರಿಂದ ಜಿದ್ದಾದ ಎಲ್ಲಾ ಪ್ರಮುಖ ನಗರಗಳು ಜನಸಂಚಾರವಿಲ್ಲದೆ ಬಿಕೋ ಎನ್ನುತ್ತಿದೆ.
ರೆಸ್ಟೋರೆಂಟ್ಗಳಲ್ಲಿ ಪಾರ್ಸೆಲ್ಗಳನ್ನು ಅನುಮತಿಸಲಾಗಿದ್ದರೂ, ಅನೇಕ ಸಂಸ್ಥೆಗಳು ಮುಚ್ಚಲ್ಪಟ್ಟಿವೆ. ಇದು ಅನೇಕ ಜನರ ಕೆಲಸದ ಮೇಲೆ ಪರಿಣಾಮ ಬೀರಿದೆ.ಜನರಿಂದ ತುಂಬಿತುಳುಕುತ್ತಿದ್ದ ಜಿದ್ದಾದ ಶರಫಿಯಾ ನಿಶ್ಚಲವಾಗಿದೆ.
ಕೋವಿಡ್ 19 ರೋಗ ಭಿತಿಯ ಹಿನ್ನೆಲೆಯಲ್ಲಿ ಜಾರಿಗೆ ತಂದಿರುವ ನಿರ್ಬಂಧಗಳು ಅನೇಕ ಭಾರತೀಯರನ್ನು ಬಿಕ್ಕಟ್ಟಿಗೆ ಸಿಲುಕಿಸಿವೆ. ಗ್ರಾಹಕರ ಕೊರತೆಯಿಂದಾಗಿ ಅನೇಕ ರೆಸ್ಟೋರೆಂಟ್ಗಳು ಸಹ ಮುಚ್ಚಲ್ಪಟ್ಟಿವೆ.
ಹತ್ತಿರದಲ್ಲೇ ಬರುವ ರಂಝಾನ್ನ ವ್ಯಾಪಾರದ ಮೇಲೆಯೂ ಇದು ಪ್ರತಿಕೂಲ ಪರಿಣಾಮ ಬೀರಬಹುದು ಎಂಬ ಆತಂಕವೂ ವ್ಯಾಪಾರಿಗಳಿಗಿದೆ. ಹೊಸ ಪರಿಸ್ಥಿತಿ ಅವರ ನಿರೀಕ್ಷೆಗಳನ್ನು ಮಸುಕಾಗಿಸಿದೆ. ಸಾರ್ವಜನಿಕ ಸಾರಿಗೆ ನಿಷೇಧದಿಂದಾಗಿ, ರಸ್ತೆಗಳು ಮತ್ತು ಸಾರ್ವಜನಿಕ ಮಾರುಕಟ್ಟೆಗಳಲ್ಲಿ ದಟ್ಟಣೆ ಕಡಿಮೆಯಾಗಿದೆ. ಇದು ಸಣ್ಣ ಮತ್ತು ದೊಡ್ಡ ವ್ಯಾಪಾರ ಕ್ಷೇತ್ರಗಳ ಮೇಲೆ ಪ್ರತಿಕೂಲ ಪರಿಣಾಮ ಬೀರಿದೆ.















ಇನ್ನಷ್ಟು ಸುದ್ದಿಗಳು
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ
ಸೌದಿ: ವೀಸಾ ಅವಧಿ ಮುಕ್ತಾಯ- ಸ್ವದೇಶಕ್ಕೆ ಮರಳಲಾಗದೆ ಸಾವಿರಾರು ಮಂದಿ ಸಂಕಷ್ಟದಲ್ಲಿ