ಮಂಜೇಶ್ವರ, ಮಾ. 29: ಕೊರೋನಾ ವೈರಸ್ ಎಂಬ ಮಹಾಮಾರಿಯನ್ನು ತಡೆಯುವ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ.ಇದರ ಭಾಗವಾಗಿ ಕೇರಳದ ಆ್ಯಂಬುಲೆನ್ಸ್ ಗೆ ಕರ್ನಾಟಕ ಗಡಿಯಲ್ಲಿ ನಿರ್ಬಂಧ ಹಾಕಿರುವುದರಿಂದ ಬಿ.ಸಿ.ರೋಡ್ ಮೂಲದ ಮಹಿಳೆಯೊಬ್ಬರು ಚಿಕಿತ್ಸೆ ಸಿಗದೆ ಮೃತಪಟ್ಟಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಬಿ.ಸಿ.ರೋಡ್ ಮೂಲದ ಪಾತುಞಿ (70) ಚಿಕಿತ್ಸೆ ಸಿಗದೆ ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ.
ಕೊರೋನಾ ತಡೆಗಟ್ಟುವುದು ಮನುಷ್ಯ ಜೀವವನ್ನು ಉಳಿಸುವ ನಿಟ್ಟಿನಲ್ಲಾಗಿದೆ,ಆದರೆ ಮನುಷ್ಯ ಜೀವಕ್ಕೆ ಬೆಲೆ ಕಲ್ಪಿಸದೆ ಗಡಿ ಮಾರ್ಗವನ್ನು ಬಂದ್ ಮಾಡಿರುವ ಅಧಿಕಾರಿಗಳ ಅಮಾನವೀಯ ಕೃತ್ಯಕ್ಕೆ ಕೇರಳ-ಕರ್ನಾಟಕ ಗಡಿ ಸಾಕ್ಷಿಯಾಗಿದೆ.
ಮೂಲತಃ ಬಿ.ಸಿ.ರೋಡಿನ ಪಾತುಞಿ ಅವರು 15 ದಿನಗಳ ಹಿಂದೆ ಬಿ.ಸಿ.ರೋಡಿನಿಂದ ಮಂಜೇಶ್ವರ ಉದ್ಯಾವರದಲ್ಲಿರುವ ಮೊಮ್ಮಗಳ ಮನೆಗೆ ತೆರಳಿದ್ದರು ಎನ್ನಲಾಗಿದೆ. ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಂಗಳೂರು ಆಸ್ಪತ್ರೆಯೊಂದರ ವೈದ್ಯರಿಂದ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ.
ಶನಿವಾರ ಸಂಜೆ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಮಂಗಳೂರಿನ ಅದೇ ಆಸ್ಪತ್ರೆಗೆಂದು ಆಂಬ್ಯುಲೆನ್ಸ್ ಮೂಲಕ ಮಂಜೇಶ್ವರದಿಂದ ಕರೆದುಕೊಂಡು ಬರಲಾಗಿದ್ದು ಈ ವೇಳೆ ಕೇರಳ – ಕರ್ನಾಟಕ ಗಡಿಯಾದ ತಲಪಾಡಿಯಲ್ಲಿ ಕರ್ತವ್ಯದಲ್ಲಿದ್ದ ಪೊಲೀಸರು ಆಂಬ್ಯುಲೆನ್ಸ್ ಗೆ ನಿರ್ಬಂಧ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.
ಆ ಬಳಿಕ ಎರಡು ರಾಜ್ಯಗಳ ಇತರ ಮೂರು ರಸ್ತೆಗಳ ಮೂಲಕ ಮಂಗಳೂರಿಗೆ ಬರಲು ಪ್ರಯತ್ನಿಸಿದರೂ ಕರ್ನಾಟಕ ಪೊಲೀಸರು ಅವಕಾಶ ನೀಡಿಲ್ಲ. ಕೇರಳದ ಯಾವುದೇ ರೋಗಿಗಳು ನಮಗೆ ಬೇಡ ಎಂದು ಗಡಿಯಲ್ಲಿ ಕರ್ತವ್ಯದಲ್ಲಿದ್ದ ಪೊಲೀಸರು ತಿಳಿಸಿದ್ದಾರೆ ಎಂದು ಆರೋಪಿಸಲಾಗಿದೆ. ಬಳಿಕ ಮಹಿಳೆಯನ್ನು ಉದ್ಯಾವರದ ಮೊಮ್ಮಗಳ ಮನೆಗೆ ವಾಪಸ್ ಕರೆದುಕೊಂಡು ಹೋಗಲಾಗಿದ್ದು ಇಂದು ಬೆಳಗ್ಗೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.















ಇನ್ನಷ್ಟು ಸುದ್ದಿಗಳು
ಮುಸ್ಲಿಮ್ ಮತ ಸ್ಥಿತಿಗತಿ ಇಂದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಸುದೃಢಗೊಳಿಸಿದೆ,ರಾಜಣ್ಣ ಅರಿಯಲಿ: ಕೆ.ಅಶ್ರಫ್
ಮೊಂಟೆಪದವು ಗುಡ್ಡ ಕುಸಿತ: ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಮೃತ್ಯು- ತಾಯಿಯ ರಕ್ಷಣೆ
ದೇರಳಕಟ್ಟೆ : ಮನೆಯ ತಡೆಗೋಡೆ ಕುಸಿದು 10 ವರ್ಷದ ಪುಟ್ಟ ಬಾಲಕಿ ಮೃತ್ಯು
ಭಾರೀ ಮಳೆ: ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಪುಟ್ಟ ಮಗು ಸಹಿತ ಇಬ್ಬರು ಮೃತ್ಯು
ಸದಾ ಸಮುದಾಯದ ಪರ ಧ್ವನಿಯೆತ್ತುವ ಅಲ್ಪಸಂಖ್ಯಾತ ಸಚಿವರು ಕರಾವಳಿಗೆ ಭೇಟಿ ನೀಡದಿರಲು ಕಾರಣವೇನು?
ಉಲಮಾ ಒಕ್ಕೂಟದ ವಖ್ಫ್ ಪ್ರತಿಭಟನೆ : ಪೊಲೀಸ್ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ ಸಂಘಟಕರು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ: ಜೆಡಿಎಸ್ ಬಂಟ್ವಾಳ ಮೈನಾರಿಟಿ ಅಧ್ಯಕ್ಷ ಮುಹಮ್ಮದ್ ಶಫೀಕ್ ಆಲಡ್ಕ
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಮ್ ಬಸ್ ಪ್ರಯಾಣಿಕನ ಮೇಲೆ ಹಲ್ಲೆ: ಶೀಘ್ರ ಕಾನೂನು ಕ್ರಮ ಕೈಗೊಳ್ಳಬೇಕು- ಕೆ.ಅಶ್ರಫ್