ಬೆಂಗಳೂರು: ಲಾಕ್ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರ ಅಗತ್ಯ ಸೇವೆಯಲ್ಲಿ ತೊಡಗಿರುವವರಿಗೆ ಆನ್ಲೈನ್ ಮೂಲಕವೇ ಪಾಸ್ ವಿತರಿಸಲು ಪೊಲೀಸ್ ಇಲಾಖೆ ಮುಂದಾಗಿದೆ.ಕರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿದೆ. ಗೃಹ ಬಂಧನದಲ್ಲಿರುವ (ಕ್ವಾರಂಟೈನ್) ವ್ಯಕ್ತಿಗಳು ಅನಗತ್ಯವಾಗಿ ಹೊರಗಡೆ ಓಡಾಡುತ್ತಿದ್ದಾರೆ. ಇದರಿಂದ ಮತ್ತಷ್ಟು ಜನರಿಗೆ ಸೋಂಕು ತಗುಲುವ ಭೀತಿಯಿಂದ ಮಾ.25ರಿಂದ ದೇಶದಾದ್ಯಂತ ಸಂಪೂರ್ಣ ಲಾಕ್ಡೌನ್ ಮಾಡಲಾಗಿದೆ. ಆದಾಗ್ಯೂ ತುರ್ತು ಸೇವೆ ನೆಪದಲ್ಲಿ ಓಡಾಡುವುದನ್ನು ಜನ ಮುಂದುವರಿಸಿದ್ದಾರೆ.
ಇದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ನಗರ ಪೊಲೀಸರು ಅಗತ್ಯತೆ ಇರುವರಿಗೆೆ ಪಾಸ್ ವ್ಯವಸ್ಥೆ ಜಾರಿಗೊಳಿಸಿದ್ದರು. ನಗರದ ಎಲ್ಲ ವಿಭಾಗದ ಡಿಸಿಪಿ ಕಚೇರಿಯಲ್ಲಿ ಪಾಸ್ ವಿತರಣೆ ಪ್ರಕ್ರಿಯೆ ಶುರುವಾಗಿತ್ತು. ಆದರೆ, ಜನರು ಪಾಸ್ಗಾಗಿ ಮುಗಿಬಿದ್ದಿದ್ದರು. ಅಂತರ ಕಾಯ್ದುಕೊಂಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಆನ್ಲೈನ್ ಮೂಲಕ ಪಾಸ್ ವಿತರಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ. ‘ಮೈ ಗೇಟ್’ ಆಪ್ ಮೂಲಕ ಭಾನುವಾರ (ಮಾ.29) ನೋಂದಣಿ ಆರಂಭವಾಗಿದೆ.
ಸರಕು ಸಾಗಣೆ ವಾಹನಕ್ಕೆ ಪಾಸ್ ಬೇಡ: ರಾಜ್ಯದಲ್ಲಿ ಸಂಚಾರ ನಡೆಸುವ ಸರಕು ಸಾಗಣೆ ವಾಹನಗಳಿಗೆ ಪೊಲೀಸ್ ಇಲಾಖೆ ಪಾಸ್ ಅಗತ್ಯ ಇಲ್ಲ. ವಾಹನ ಸರಕು ಸಾಗಣೆ ಎಂದು ನೋಂದಣಿ ಆಗಿರಬೇಕು. ಅದರಲ್ಲಿ ಚಾಲಕ ಮತ್ತು ಕ್ಲೀನರ್ ಮಾತ್ರ ಇರಬೇಕು. ಬೇರೆ ಯಾರಾದರೂ ಇದ್ದರೇ ಅಂತಹವರಿಗೆ ಪಾಸ್ ಕಡ್ಡಾಯ. ಹಾಲಿನ ವಾಹನಗಳಿಗೂ ಪಾಸ್ ಅಗತ್ಯವಿಲ್ಲ ಎಂದು ಸರಕು ಸಾಗಣೆ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಸರ್ಕಾರ ನೇಮಿಸಿರುವ ನೋಡಲ್ ಅಧಿಕಾರಿ ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ.
ಯಾರು ಪಾಸ್ ಪಡೆಯಲು ಅರ್ಹರು?: ತುರ್ತು ಸೇವಾ ಸಿಬ್ಬಂದಿ, ಔಷಧ, ತರಕಾರಿ, ಆಹಾರ ಪದಾರ್ಥಗಳ ವಿತರಕರು ಹಾಗೂ ಮಾಧ್ಯಮದವರನ್ನು ಅಗತ್ಯ ಸೇವೆಗಳ ವ್ಯಾಪ್ತಿಗೆ ಸೇರಿಸಲಾಗಿದೆ. ಇವರೆಲ್ಲರೂ ಪಾಸ್ ಪಡೆಯಬಹುದಾಗಿದ್ದು, ಆನ್ಲೈನ್ನಲ್ಲಿ ಅಗತ್ಯ ದಾಖಲಾತಿಗಳನ್ನು ಸಲ್ಲಿಸಬೇಕು.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ