ಬೆಂಗಳೂರು: ಕರ್ನಾಟಕದಲ್ಲಿ ಮಾರಕ ಕೊರೋನಾ ವೈರಸ್ ಸೋಂಕಿತರ ಪ್ರಮಾಣ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವಂತೆಯೇ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಐದು ಜಿಲ್ಲೆಗಳನ್ನು ಕೋವಿಡ್ 19 ರೆಡ್ ಝೋನ್ ಪಟ್ಟಿಗೆ ಸೇರಿಸಲು ನಿರ್ಧರಿಸಲಾಗಿದೆ.
ಅತ್ತ ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಸಂವಾದ ಮೂಲಕ ವೈರಸ್ ಸೋಂಕು ನಿಯಂತ್ರಣದ ಕುರಿತು ಚರ್ಚೆ ನಡೆಸಿದ ಬೆನ್ನಲ್ಲೇ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಿಎಂ ಬಿಎಸ್ ಯಡಿಯೂರಪ್ಪ ಅವರು ಹಲವು ನಿರ್ಧಾರಗಳನ್ನು ಕೈಗೊಂಡಿದ್ದಾರೆ ಎನ್ನಲಾಗಿದೆ. ಈ ಪೈಕಿ ಕೊರೋನಾ ವೈರಸ್ ಸೋಂಕು ಪೀಡಿತರ ಸಂಖ್ಯೆ ಹೆಚ್ಚಿರುವ ಜಿಲ್ಲೆಗಳನ್ನು ಕೋವಿಡ್-19 ರೆಡ್ ಝೋನ್ ಪಟ್ಟಿಗೆ ಸೇರಿಸುವ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ,
ರಾಜಧಾನಿ ಬೆಂಗಳೂರಿನಲ್ಲಿ ಅತೀ ಹೆಚ್ಚು ಸೋಂಕು ಪ್ರಕರಣಗಳು ದಾಖಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಜನರಕನ್ನು ಕ್ವಾರಂಟೈನ್ ಮಾಡಲಾಗಿದೆ. ಹೀಗಾಗಿ ಪಟ್ಟಿಯಲ್ಲಿ ಬೆಂಗಳೂರು ಅಗ್ರಸ್ಥಾನದಲ್ಲಿದ್ದು, ಉಳಿದಂತೆ ಚಿಕ್ಕಬಳ್ಳಾಪುರ, ಮೈಸೂರು, ಉತ್ತರ ಕನ್ನಡ ಮತ್ತು ಮಂಗಳೂರು (ದಕ್ಷಿಣ ಕನ್ನಡ) ಜಿಲ್ಲೆಗಳು ಕೋವಿಡ್ 19 ರೆಡ್ ಝೋನ್ ಪಟ್ಟಿಗೆ ಸೇರಿವೆ. ಈ ಜಿಲ್ಲೆಗಳಲ್ಲಿ ಲಾಕ್ ಡೌನ್ ಅನ್ನು ಮತ್ತಷ್ಟು ಕಠಿಣಗೊಳಿಸಿ ಸೋಂಕು ಪ್ರಕರಣಗಳು ಹೆಚ್ಚು ದಾಖಲಾಗದಂತೆ ಮುನ್ನಚ್ಚರಿಕೆ ವಹಿಸಲಾಗುತ್ತದೆ.
ಈ ಕುರಿತಂತೆ ಮಾತನಾಡಿರುವ ಸಚಿವ ಸುಧಾಕರ್ ಅವರು, ದಿನಕಳದಂತೆ ರಾಜ್ಯದಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಈ ಜಿಲ್ಲೆಗಳಿಗೆ ಹೆಚ್ಚಿನ ಒತ್ತು ನೀಡಿ ಲಾಕ್ ಡೌನ್ ನಿಯಮವನ್ನು ಮತ್ತಷ್ಡು ಕಠಿಣಗೊಳಿಸಲಾಗುತ್ತದೆ ಎಂದು ಹೇಳಿದರು, ಮೈಸೂರಿನ ಫಾರ್ಮಾಸುಟಿಕಲ್ ಸಂಸ್ಥೆಯಲ್ಲಿ ಸೋಂಕಿತರು ಪತ್ತೆಯಾದ ಬಳಿಕ ಮೈಸೂರಿನಲ್ಲಿ ವೈರಸ್ ಸೋಂಕಿತರ ಸಂಖ್ಯೆ 16ಕ್ಕೆ ಏರಿಕೆಯಾಗಿದ್ದು, ಈ ಪೈಕಿ 14 ಮಂದಿ ಇದೇ ಫಾರ್ಮಾಸುಟಿಕಲ್ ಸಂಸ್ಥೆಯ ಸಿಬ್ಬಂದಿಗಳಾಗಿದ್ದಾರೆ. ಅಂತೆಯೇ ಜಿಲ್ಲೆಯಲ್ಲಿ 1,463 ಮಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ ಎಂದು ಹೇಳಿದರು.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ