ದುಬೈ: ಯುಎಇಯಲ್ಲಿ ಸಿಕ್ಕಿಹಾಕಿಕೊಂಡಿರುವ ಭಾರತೀಯರಿಗೆ ಅವಕಾಶ ನೀಡಲಾಗಿದ್ದು, ಕೊಚ್ಚಿ ಮತ್ತು ತಿರುವನಂತಪುರಂಗೆ ಎಮಿರೇಟ್ಸ್ ಏರ್ಲೈನ್ಸ್ ವಿಶೇಷ ಸೇವೆಗಳನ್ನು ನಡೆಸಲಿದೆ. ಆಸಕ್ತರು ತಮ್ಮ ದೇಶಗಳಿಗೆ ಮರಳಲು ಇದೊಂದು ವಿಶೇಷ ಸೇವೆಯಾಗಲಿದೆ.
ಕೋವಿಡ್ ಹರಡುವುದರೊಂದಿಗೆ, ಯುಎಇಯಲ್ಲಿ ಅನೇಕ ಭಾರತೀಯರು ಸಿಕ್ಕಿಹಾಕಿಕೊಂಡಿದ್ದಾರೆ. ಎಮಿರೇಟ್ಸ್ ಅಂತಹ ಜನರಿಗೆ ಅವಕಾಶವನ್ನು ನೀಡಿದ್ದು, ಎಮಿರೇಟ್ಸ್ ವಿಶ್ವದಾದ್ಯಂತ 14 ನಗರಗಳಿಗೆ ವಿಶೇಷ ಸೇವೆಗಳನ್ನು ಘೋಷಿಸಿದೆ.
ಕೊಚ್ಚಿ ಮತ್ತು ತಿರುವನಂತಪುರಕ್ಕೆ ವಿಶೇಷ ವಿಮಾನ ಹಾರಾಟ ನಡೆಸಲಿದ್ದು, ವಿಶೇಷ ಅನುಮತಿ ಪ್ರಕಾರ ಸೇವೆಗಳು ಎಪ್ರಿಲ್ 6ರಿಂದ ಪ್ರಾರಂಭವಾಗಲಿವೆ.
ಭಾರತೀಯ ನಗರಗಳಾದ ದೆಹಲಿ, ಮುಂಬೈ, ಚೆನ್ನೈ, ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನಯಾನ ಸೇವೆ ಘೋಷಿಸಿದೆ. ಜನರನ್ನು ತಲುಪಿಸಲು ಎಮಿರೇಟ್ಸ್ ಈಗಾಗಲೇ ಭಾರತ ಸೇರಿದಂತೆ ವಿದೇಶಗಳಿಂದ ಅನುಮತಿ ಕೋರಿತ್ತು.
ನಿರ್ಧಾರವು ಭಾರತದ ಅನುಮೋದನೆ ಪಡೆಯುವುದು ಸಾಧದ್ಯವಾಗಲಿದೆಯೇ ಎಂಬುದರ ಮೇಲೆ ಅವಲಂಬಿತವಾಗಿದೆ. ವಿದೇಶಿ ವಿಮಾನಯಾನ ಸಂಸ್ಥೆಗಳ ಮೇಲೆ ಭಾರತದ ನಿಷೇಧ ಮುಂದುವರಿದರುವಾಗ ಇದು ಸಾಧ್ಯವಾಗಲಿದೆಯೇ ಎಂಬುದು ಕಾದು ನೋಡಬೇಕಿದೆ.
ಯುಎಇಯಲ್ಲಿ ಸಿಲುಕಿರುವ ಸಾವಿರಾರು ವಲಸಿಗರಿಗೆ ಇದು ಒಳ್ಳೆಯ ಸುದ್ದಿಯಾಗಿದ್ದು, ಏರ್ ಅರೇಬಿಯಾ ಕೂಡ ಪ್ರತ್ಯೇಕ ಸೇವೆ ಪ್ರಾರಂಭಿಸಲಿದೆ ಎಂದು ವರದಿಯಾಗಿದೆ. ಯುಎಇಗೆ ಆಗಮನಕ್ಕೆ ಅವಕಾಶವಿಲ್ಲ. ಕೋವಿಡ್ ನಿಯಂತ್ರಣಕ್ಕೆ ಬಂದ ನಂತರವೇ ಹಿಂದಿನಂತೆ ವಿಮಾನಯಾನವು ಪುನರಾರಂಭಗೊಳ್ಳಲಿದೆ.















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು