ಕಲ್ಲಿಕೋಟೆ: ದೇಶದಲ್ಲಿ ಕೋವಿಡ್ ರೋಗ ಹರಡಲು ತಬ್ಲೀಗ್ನವರು ಮತ್ತವರ ನಿಝಾಮುದ್ದೀನ್ ಸಮ್ಮೇಳನವನ್ನು ಕಾರಣ ಎನ್ನುವುದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಸಮಸ್ತ ಅಧ್ಯಕ್ಷ ಸಯ್ಯಿದ್ ಜಿಫ್ರಿ ಮುತ್ತುಕೋಯ ತಂಙಳ್ ಹೇಳಿದ್ದಾರೆ.
ಕೇಂದ್ರ ಸರಕಾರ ಲಾಕ್ ಡೌನ್ ಘೋಷಿಸುವ ಮೊದಲು ನಿಝಾಮುದ್ದೀನ್ ಸಮ್ಮೇಳನವನ್ನು ಆಯೋಜಿಸಲಾಗಿತ್ತು. ಕೋವಿಡ್ ಹರಡಿರುವ ನೆಪದಲ್ಲಿ ಇಸ್ಲಾಂ ಮತ್ತು ಮುಸ್ಲಿಮರನ್ನು ದೂಷಿಸುವುದನ್ನು ಅಂಗೀಕರಿಸಲು ಸಾಧ್ಯವಿಲ್ಲ.
ತಬ್ಲೀಗ್ ನ ಆದರ್ಶವು ಸಮಸ್ತ ದ ಆದರ್ಶಕ್ಕೆ ವಿರುದ್ಧವಾಗಿದ್ದರೂ,ಸರಕಾರದ ಅನುಮತಿ ಪಡೆದು ಸಮ್ಮೇಳನವನ್ನು ನಡೆಸಿದ್ದರೆ ತಬ್ಲೀಗ್ನವರನ್ನು ಆರೋಪಿಸುವುದು ಸರಿಯಲ್ಲ. ಆದರೂ ಸಮ್ಮೇಳನ ನಡೆಸಿದವರು ಆರೋಗ್ಯ ವಿಷಯಗಳ ಬಗ್ಗೆ ಹೆಚ್ಚಿನ ಗಮನ ಹರಿಸಬೇಕಾಗಿತ್ತು ಎಂದು ಜಿಫ್ರಿ ತಂಙಳ್ ಹೇಳಿದರು.
ಕೊರೋನಾ ವೈರಸ್ ನ್ನು ತಡೆಗಟ್ಟುವ ಸಲುವಾಗಿ ಸಲಕಾರದ ಆದೇಶದ ಮೇರೆಗೆ ಮಸೀದಿಗಳು ಮತ್ತು ಮದರಸಾಗಳನ್ನು ಮುಚ್ಚಳಾಗಿದೆ, ಆದರೂ ಅಲ್ಲಿ ಕೆಲಸ ಮಾಡುವ ಖತೀಬ್, ಮುಅದ್ಸಿನ್ ಹಾಗೂ ಮದ್ರಸಾ ಅದ್ಯಾಪಕರಿಗೆ ಮೊಹಲ್ಲಾ ಸಮಿತಿ ಸಂಬಳವನ್ನು ನೀಡಲು ಸಿದ್ಧರಾಗಿರಬೇಕು ಎಂದು ಜಿಫ್ರಿ ತಂಙಳ್ ಹೇಳಿದರು.















ಇನ್ನಷ್ಟು ಸುದ್ದಿಗಳು
ಚುನಾವಣಾ ಸಂಭ್ರಮಾಚರಣೆ: ಪಟಾಕಿ ಸಿಡಿದು ಮುಸ್ಲಿಂ ಲೀಗ್ ಕಾರ್ಯಕರ್ತ ಮೃತ್ಯು
ತಮ್ಮದೇ ಸರ್ಕಾರ ಮಂಡಿಸಿದ ಜಾತಿ ಸಮೀಕ್ಷೆ ವರದಿಯನ್ನು ಸುಟ್ಟು ಹಾಕಿದ ಕಾಂಗ್ರೆಸ್ ಎಂಎಲ್ಸಿ
ಕರ್ನಾಟಕ ಸರ್ಕಾರವನ್ನು ಬೀಳಿಸಲು ಕೇರಳ ದೇವಸ್ಥಾನದಲ್ಲಿ ಮೃಗ ಬಲಿ – ದೇವಸ್ವಂ ಸಚಿವರು ಹೇಳಿದ್ದೇನು?
ಮಣಿಪುರ: ಚುನಾವಣೆ ಬಹಿಷ್ಕಾರ ಕ್ಕೆ ಕರೆ ಕೊಟ್ಟ ಕುಕಿ!!
ಬಡತನದಿಂದ ಬಳಲುತ್ತಿರುವ ಕುಟುಂಬದ ಮಹಿಳೆಯರ ಬ್ಯಾಂಕ್ ಖಾತೆಗೆ ವರ್ಷಕ್ಕೆ 1 ಲಕ್ಷ ರೂಪಾಯಿ
ಸಯ್ಯಿದ್ ಹಸನುಲ್ ಅಹ್ದಲ್ ತಂಙಳರಿಗೆ ಗೌರವ ‘ಅತ್ತಕ್ರೀಂ’- ಸ್ವಾಗತ ಸಮಿತಿ ಅಸ್ತಿತ್ವಕ್ಕೆ
ಪುಟ್ಟ ಬಾಲಕಿಯ ಅತ್ಯಾಚಾರ,ಹತ್ಯೆ ಪ್ರಕರಣ- ಆರೋಪಿ ಅಶ್ಫಾಕ್ ಆಲಂಗೆ ಮರಣ ದಂಡನೆ
ಕಳಮಶ್ಶೇರಿಯಲ್ಲಿ ಬಾಂಬ್ ಸ್ಫೋಟಿಸಿದ್ದು ಡೊಮಿನಿಕ್ ಮಾರ್ಟಿನ್- ದೃಢೀಕರಿಸಿದ ಪೊಲೀಸ್
ಕಳಮಶ್ಶೇರಿಯಲ್ಲಿ ಬಾಂಬ್ ಇಟ್ಟಿದ್ದು ನಾನೇ – ಪೊಲೀಸ್ ಠಾಣೆಯಲ್ಲಿ ಶರಣಾಗಿ ತಪ್ಪೊಪ್ಪಿಗೆ
ಕಳಮಶ್ಶೇರಿ ಘಟನೆ ಬಾಂಬ್ ಸ್ಪೋಟದಿಂದ- ಖಚಿತಪಡಿಸಿದ ಡಿಜಿಪಿ ಶೇಖ್ ದರ್ವೇಶ್