ದುಬೈ: ಕೆಲವು ವೈಮಾನಿಕ ಕಂಪೆನಿಗಳು ಭಾರತಕ್ಕೆ ಟಿಕೆಟ್ ಕಾಯ್ದಿರಿಸಲು ಪ್ರಾರಂಭಿಸಿದ್ದರೂ, ಪ್ರಯಾಣಿಸಲು ಸಾಧ್ಯವಾಗುತ್ತದೆಯೇ ಎಂಬ ಬಗ್ಗೆ ಅನಿಶ್ಚಿತತೆ ಉಳಿದಿದೆ. ಪ್ರಯಾಣಿಕರನ್ನು ಭಾರತಕ್ಕೆ ಕರೆದೊಯ್ಯುವ ಬಗ್ಗೆ ಸರಕಾರದಿಂದ ಈ ವರೆಗೆ ಯಾವುದೇ ನಿರ್ದೇಶನ ಬಂದಿಲ್ಲ ಎಂದು ದುಬೈನ ಭಾರತೀಯ ಕಾನ್ಸುಲ್ ಜನರಲ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಕೊಚ್ಚಿ ಮತ್ತು ಕೋಝಿಕೋಡ್ ಸೇರಿದಂತೆ ಭಾರತದ ಎಂಟು ನಗರಗಳಲ್ಲಿ ಫ್ಲೈ ದುಬೈ ಬುಕಿಂಗ್ ಪ್ರಾರಂಭಿಸಲಾಗಿದೆ. ಈ ತಿಂಗಳ 15ರಿಂದ ತನ್ನ ಪ್ರಯಾಣವನ್ನು ಪ್ರಾರಂಭಿಸುವುದಾಗಿ ಅದು ಪ್ರಕಟಿಸಿದೆ. ಆದರೆ, ಭಾರತದಲ್ಲಿ ಲಾಕ್ಡೌನ್ ಮುಂದುವರಿಸಲಾಗುತ್ತದೆಯೇ, ವಿಮಾನ ಸೇವೆಯನ್ನು ನಿಷೇಧಿಸಲಾಗುತ್ತದೆಯೇ ಮತ್ತು ವಿಮಾನ ಇಳಿಯಲು ಸಾಧ್ಯವಾಗಲಿದೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.
ಈ ಮೊದಲು ಯುಎಇಯಲ್ಲಿ ಸಿಲುಕಿರುವ ಭಾರತೀಯರನ್ನು ವಾಪಸ್ ಕಳುಹಿಸಲು ಯೋಜಿಸುತ್ತಿದೆ ಎಂದು ವಿಮಾನಯಾನ ಸಂಸ್ಥೆ ತಿಳಿಸಿದ್ದವು. ಭಾರತ ಸರಕಾರದಿಂದ ನಾಗರಿಕರನ್ನು ಮರಳಿಸುವ ಬಗ್ಗೆ ಯಾವುದೇ ಮಾರ್ಗದರ್ಶನವಿಲ್ಲ ಎಂದು ದುಬೈನ ಭಾರತೀಯ ಕಾನ್ಸುಲ್ ಜನರಲ್ ವಿಪುಲ್ ತಿಳಿಸಿದರು.
ಬುಕಿಂಗ್ ಪ್ರಾರಂಭವಾದ ನಂತರ, ಟಿಕೆಟ್ ಖರೀದಿಸುವವರ ಸಂಖ್ಯೆಯು ಏರಿದೆ. ವೆಬ್ಸೈಟ್ನಲ್ಲಿ ಇರುವ ಮಾಹಿತಿ ಪ್ರಕಾರ ಮೇ 2 ರವರೆಗಿನ ಟಿಕೇಟ್ ಮಾರಾಟವಾಗಿದೆ. ಮೇ 2 ರಂದು, ಕೊಚ್ಚಿಗೆ ಏಕಮುಖ ಹಾರಾಟಕ್ಕೆ 1,325 ದಿರ್ಹಂ ಅಥವಾ 27,000 ರೂ. ವೆಚ್ಚವಾಗಿದೆ. ಫ್ಲೈ ದುಬೈ ಭಾರತ ಹೊರತಾಗಿ ಪಾಕಿಸ್ತಾನಕ್ಕೂ ವಿಮಾನ ಕಾಯ್ದಿರಿಸಲು ಪ್ರಾರಂಭಿಸಿದೆ.















ಇನ್ನಷ್ಟು ಸುದ್ದಿಗಳು
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ
ಸೌದಿ: ವೀಸಾ ಅವಧಿ ಮುಕ್ತಾಯ- ಸ್ವದೇಶಕ್ಕೆ ಮರಳಲಾಗದೆ ಸಾವಿರಾರು ಮಂದಿ ಸಂಕಷ್ಟದಲ್ಲಿ