janadhvani

Kannada Online News Paper

ಪ್ರಚೋದನಕಾರಿ ವಾಟ್ಸಾಪ್ ಸ್ಟೇಟಸ್: ಪ್ರಕರಣ ದಾಖಲು

ಬಂಟ್ವಾಳ, ಎ. 9: ದೇಶಾದ್ಯಂತ ದೈನಂದಿನ ವ್ಯಾಪಕವಾಗಿ ಹರಡುತ್ತಿರುವ ಮಾರಕ ಕೊರೋನ ವೈರಸ್ ಸಂಬಂಧಿಸಿ ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದಕ ಸ್ಟೇಟಸ್ ಹಾಕಿದ ಆರೋಪದಲ್ಲಿ ಯುವಕನೋರ್ವನ ವಿರುದ್ಧ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಜಿಪ ಮೂಡ ಗ್ರಾಮದ ಕಾರಾಜೆ ಎಸ್ಡಿಪಿಐ ಸದಸ್ಯ ಮುಹಮ್ಮದ್ ನಿಸಾರ್ ಎಂಬವರು ನೀಡಿದ ದೂರಿನಂತೆ ಬೋಳಿಯಾರ್ ಗ್ರಾಮದ ರಂತಡ್ಕ ವಡಕಿನಕಟ್ಟೆ ನಿವಾಸಿ ರಂಜನ್ ಪೂಜಾರಿ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ.

ಮಂದಿರ, ಗುರುದ್ವಾರಗಳಿಂದ ದಾನ ಮಾಡುತ್ತಿದ್ದರೆ ಮಸೀದಿಗಳಿಂದ ಕೊರೋನ ಹಬ್ಬಿಸುವ ಕೆಲಸ ಆಗುತ್ತಿದೆ ಎಂದು ತನ್ನ ವಾಟ್ಸ್ಆ್ಯಪ್ ಸ್ಟೇಟಸ್ ನಲ್ಲಿ ಹಾಕುವ ಮೂಲಕ ಒಂದು ಸಮುದಾಯವನ್ನು ನಿಂದಿಸಿದ್ದು ಅಲ್ಲದೆ ಇದು ಕೋಮು ಗಲಭೆಗೆ ಪ್ರಚೋದನೆ ನೀಡುವ ಮೂಲಕ ಸಮಾಜದಲ್ಲಿ ಅಶಾಂತಿಯ ಸೃಷ್ಟಿಸುವ ಪ್ರಯತ್ನವಾಗಿದೆ. ಆದ್ದರಿಂದ ರಂಜನ್ ಪೂಜಾರಿಯನ್ನು ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು ಎಂದು ದೂರಿನಲ್ಲಿ ಆಗ್ರಹಿಸಿದ್ದಾರೆ.

ಪ್ರಕರಣವನ್ನು ದಾಖಲಿಸಿರುವ ಬಂಟ್ವಾಳ ನಗರ ಠಾಣಾ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

error: Content is protected !! Not allowed copy content from janadhvani.com