ಎಸ್.ಎಸ್.ಎಫ್ ಹಾಗೂ ಎಸ್.ವೈ.ಎಸ್ ಎಲಿಮಲೆ ಯುನಿಟ್ ವತಿಯಿಂದ ಲಾಕ್ ಡೌನಿನಿಂದ ತತ್ತರಿಸಿ ಆರ್ಥಿಕವಾಗಿ ಹಿಂದುಳಿದ ಹಾಗೂ ಮಧ್ಯಮ ವರ್ಗದ ಕುಟುಂಬಗಳನ್ನು ಗುರುತಿಸಿ ಕಿಟ್ ಗಳನ್ನು ವಿತರಿಸುವ ಕಾರ್ಯವು ನಡೆಯುತ್ತಿದ್ದು, ಮಾದರಿ ಚಟುವಟಿಕೆಯೆಂದು ಎಲ್ಲೆಡೆಗಳಿಂದ ಪ್ರಶಂಸೆಯ ಮಾತುಗಳು ಕೇಳಿಬರುತ್ತಿದೆ.
ಎಲಿಮಲೆ ಜಮಾಅತ್ ವ್ಯಾಪ್ತಿಯಲ್ಲಿರುವ ಅರ್ಹರು ಫೋನ್ ಮೂಲಕ ತಮಗೆ ಬೇಕಾದ ದಿನನಿತ್ಯದ ಅಗತ್ಯ ಆಹಾರ ಸಾಮಗ್ರಿಗಳ ಪಟ್ಟಿಯನ್ನು ನೀಡಿದರೆ ಅದನ್ನು ಗೌಪ್ಯವಾಗಿ ಮತ್ತು ಉಚಿತವಾಗಿ ತಲುಪಿಸುವ ವ್ಯವಸ್ಥೆಯನ್ನು ಎಸ್.ಎಸ್.ಎಫ್ ಹಾಗೂ ಎಸ್.ವೈ.ಎಸ್ ಎಲಿಮಲೆ ಯುನಿಟ್ ವತಿಯಿಂದ ಮಾಡಲಾಗಿದೆ. ಅದಕ್ಕಾಗಿಯೇ ಪ್ರತ್ಯೇಕ ತಂಡವನ್ನು ರಚಿಸಲಾಗಿದ್ದು, ಈಗಾಗಲೇ ಒಂದೇ ದಿನದಲ್ಲಿ ಮೂರು ಕುಟುಂಬಗಳ ಮಾಹಿತಿ ಪಡೆದು ಅಗತ್ಯದ ಆಹಾರ ಸಾಮಗ್ರಿಗಳನ್ನು ತಲುಪಿಸಲಾಗಿದೆ. ಜೊತೆಗೆ ಔಷಧಿಗಳನ್ನು ತಲುಪಿಸುವ ವ್ಯವಸ್ಥೆ ಕೂಡಾ ಇದೆ. ಇದಕ್ಕಾಗಿ ಊರ ಪರವೂರ ಹಲವು ಉದಾರ ದಾನಿಗಳು ಧನಸಹಾಯಗಳನ್ನು ನೀಡುತ್ತಿದ್ದಾರೆ.
ದಿನನಿತ್ಯದ ಅಗತ್ಯ ಸಾಮಗ್ರಿಗಳ ಕೊರತೆಯಿರುವವರು ಮತ್ತು ಕಿಟ್ ದಾನ ನೀಡಬಯಸುವವರು ಎಸ್.ವೈ.ಎಸ್ ಎಲಿಮಲೆ ಯುನಿಟ್ ಅಧ್ಯಕ್ಷರಾದ ಬಶೀರ್ ದೊಡ್ಡಂಗಡಿ, ಎಸ್.ಎಸ್.ಎಫ್ ಎಲಿಮಲೆ ಯುನಿಟ್ ಅಧ್ಯಕ್ಷರಾದ ಝಕರಿಯ್ಯ ಸಅದಿ, ಪ್ರ.ಕಾರ್ಯದರ್ಶಿ ಸಿದ್ದೀಖ್ ಪಿ.ಎ ಹಾಗೂ ಕೋಶಾಧಿಕಾರಿ ನಿಯಾಝ್ ದೊಡ್ಡಂಗಡಿಯವರನ್ನು ಸಂಪರ್ಕಿಸಬಹುದಾಗಿದೆ.















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ