ಮಂಗಳೂರು:ಕೋವಿಡ್ -19 ವ್ಯಾಪಕವಾಗಿ ಹರಡುತ್ತಿರುವ ಈ ಸನ್ನಿವೇಶದಲ್ಲಿ ವಿದೇಶದಲ್ಲಿ ದುಡಿಯುತ್ತಿರುವ ಅನಿವಾಸಿ ಕನ್ನಡಿಗರನ್ನು ಸರಕಾರವು ತಾಯ್ನಾಡಿಗೆ ಕರೆತರುವುದಾದರೆ ಅವರನ್ನು ಕಾರೆಂಟೈನ್ ನಲ್ಲಿರಿಸಲು ದಾರುಲ್ ಇರ್ಶಾದ್ ಸಮುಚ್ಚಯ ಸಿದ್ಧವಿದೆ ಎಂದು ಝೈನುಲ್ ಉಲಮಾ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ತಿಳಿಸಿದ್ದಾರೆ.
ಎಸ್ ವೈ ಎಸ್ ಇಸ್ವಾಬ, ಎಸ್ಸೆಸ್ಸೆಫ್ , ಕೆಸಿಎಫ್ ಮುಂತಾದ ಸ್ವಯಂ ಸೇವಾ ಸಂಘಟನೆಗಳ ಸಹಯೋಗದೊಂದಿಗೆ ದಾರುಲ್ ಇರ್ಶಾದ್ ಅಧೀನದ ಕೆಜಿಎನ್ ಕ್ಯಾಂಪಸ್ ನ ಶಾಲಾ, ಕಾಲೇಜು ಕಟ್ಟಡಗಳನ್ನು ನೀಡಲು ಸಿದ್ಧ ಎಂದು ದಾರುಲ್ ಇರ್ಶಾದ್ ವಿದ್ಯಾಸಂಸ್ಥೆಗಳ ಸಾರಥಿ ಝೈನುಲ್ ಉಲಮಾ ತಿಳಿಸಿದ್ದಾರೆ.
ಜೀವನೋಪಾಯಕ್ಕಾಗಿ ವಿದೇಶದಲ್ಲಿರುವ ನೂರಾರು ಕನ್ನಡಿಗರು ಕೋರೋನ ಭೀತಿಯಿಂದ ಸಂಕಷ್ಟದಲ್ಲಿದ್ದಾರೆ. ಹಲವು ದೇಶಗಳಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಅವರ ಸುರಕ್ಷತೆಯನ್ನು ಸರಕಾರವು ಖಚಿತಪಡಿಸಬೇಕೆಂದು ಕರ್ನಾಟಕ ಸುನ್ನಿ ಜಂಇಯ್ಯತುಲ್ ಉಲಮಾದ ರಾಜ್ಯ ಪ್ರ.ಕಾರ್ಯದರ್ಶಿಯೂ ಆಗಿರುವ ಮಾಣಿ ಉಸ್ತಾದ್ ಒತ್ತಾಯಿಸಿದ್ದಾರೆ.
ಮಂಜನಾಡಿ ಅಲ್ ಮದೀನಾ ಅನಿವಾಸಿ ಕನ್ನಡಿಗರಿಗೆ ತೆರೆದಿಟ್ಟಿದೆ
ಮಂಜನಾಡಿ: ಅನಿವಾಸಿ ಮಿತ್ರರಿಗೆ ಕ್ವಾರಂಟೈನ್ ಸಜ್ಜೀಕರಣಕ್ಕಾಗಿ ಅಲ್ ಮದೀನಾ ಮಂಜನಾಡಿ ಸಂಸ್ಥೆಯನ್ನು ಬಿಟ್ಟುಕೊಡುವುದಾಗಿ ಸಂಸ್ಥೆಯ ಅಧ್ಯಕ್ಷರಾದ ಇಂಡಿಯನ್ ಗ್ರಾಂಡ್ ಮುಫ್ತಿ ಶೈಖುನಾ ಸುಲ್ತಾನುಲ್ ಉಲಮಾ ಮತ್ತು ಕಾರ್ಯದರ್ಶಿ ಇಸ್ಮಾಯಿಲ್ ಅಲ್ ಹಾದಿ ಉಜಿರೆ ತಂಙಳ್ ತಿಳಿಸಿದ್ದಾರೆ.
ಸಂಸ್ಥೆಯ ಜನರಲ್ ಮ್ಯಾನೇಜರ್ ಅಬ್ದುಲ್ ಖಾದರ್ ಸಖಾಫಿ ಉಸ್ತಾದ್ ಇದರ ಬಗ್ಗೆ ಮಾಹಿತಿ ನೀಡಿದ್ದಾರೆ.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ