ಕುವೈಟ್ ಸಿಟಿ: ಕೋವಿಡ್ 19 ರ ಪರಿಣಾಮವಾಗಿ ವಿದೇಶಗಳಲ್ಲಿ ಯಾತನೆ ಅನುಭವಿಸುವ ಭಾರತೀಯ ವಲಸಿಗರನ್ನು ವಾಪಸ್ ತರಿಸುವಂತೆ ಕೋರಿ ಸುಪ್ರೀಂ ಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ಹೂಡಲಾಗಿದೆ. ಪ್ರವಾಸಿ ಲೀಗಲ್ ಸೆಲ್ನ ಜಾಗತಿಕ ಅಧ್ಯಕ್ಷ ಅಡ್ವಕೆಟ್.ಜೋಸ್ ಅಬ್ರಹಾಂ ಈ ಅರ್ಜಿಯನ್ನು ಸಲ್ಲಿಸಿದ್ದಾರೆ.
ಯಾತನೆ ಅನುಭವಿಸುತ್ತಿರುವ ವಿದೇಶಿ ಭಾರತೀಯರನ್ನು ವಾಪಸು ಕರೆತರುವುದರ ಜೊತೆಗೆ ಕೇಂದ್ರ ಆರೋಗ್ಯ ಸಚಿವಾಲಯದ ಅಡಿಯಲ್ಲಿ ಆನ್ಲೈನ್ನಲ್ಲಿ ವೈದ್ಯರ ಪರಿಶೋಧನೆ ಮತ್ತು ಸಮಾಲೋಚನೆಗಾಗಿ ವೆಬ್ ಪೋರ್ಟಲ್ ಸಜ್ಜುಗೊಳಿಸುವ ತುರ್ತು ಅಗತ್ಯವನ್ನು ಸಹ ಅರ್ಜಿಯಲ್ಲಿ ಕೋರಲಾಗಿದೆ.
ಭಾರತೀಯ ರಾಯಭಾರಿ, ಹೈಕಮೀಷನ್ ಸಾರಥ್ಯದಲ್ಲಿ ರೋಗ ಲಕ್ಷಣವಿರುವ ವಲಸಿಗ ಭಾರತೀಯರನ್ನು ಪರಿಶೋಧನೆಗೆ ಒಳಪಡಿಸಬೇಕು. ಆಹಾರ, ಔಷಧ, ನೀರಿನ ಸೌಲಭ್ಯಗಳನ್ನು ಒದಗಿಸಬೇಕು. ಅತ್ಯಧಿಕ ಸಂಖ್ಯೆಯಲ್ಲಿರುವ ಕಾರ್ಮಿಕರನ್ನು ಸುರಕ್ಷಿತ ಶಿಬಿರಗಳಿಗೆ ಸ್ಥಳಾಂತರಿಸಬೇಕು. ರೋಗದಿಂದ ಬಳಲುತ್ತಿರುವ ವಲಸಿಗ ಭಾರತೀಯರ ಕುಟುಂಬಗಳಿಗೆ ಆರ್ಥಿಕ ನೆರವು ನೀಡುವಂತೆಯೂ ಅರ್ಜಿಯಲ್ಲಿ ಕೋರಲಾಗಿದೆ.
ಪ್ರವಾಸಿ ಲೀಗಲ್ ಸೆಲ್ ಇದೇ ಕೋರಿಕೆಯೊಂದಿಗೆ, ಮುಖ್ಯಮಂತ್ರಿ ಇತರ ಸಂಸದರು ಪ್ರಧಾನಿ ಮತ್ತು ವಿದೇಶಾಂಗ ಸಚಿವರಿಗೆ ಪತ್ರಗಳನ್ನು ಕಳುಹಿಸಿದ್ದು, ಆದರೆ ಕೇಂದ್ರ ಸರಕಾರ ಇನ್ನೂ ಯಾವುದೇ ಕ್ರಮ ಕೈಗೊಂಡಿಲ್ಲ. ಈ ಹಿನ್ನೆಲೆಯಲ್ಲಿ ಪ್ರವಾಸಿ ಲೀಗಲ್ ಸೆಲ್ ಸುಪ್ರೀಂ ಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದೆ.
ಅನುಕೂಲಕರ ನ್ಯಾಯ ಲಭಿಸುವ ಬರವಸೆ ಇದೆ ಎಂದು ಕುವೈತ್ ಚಾಪ್ಟರ್ ಅಧ್ಯಕ್ಷ ಬಾಬು ಫ್ರಾನ್ಸಿಸ್, ಪ್ರಧಾನ ಕಾರ್ಯದರ್ಶಿ ಬಿಜು ಸ್ಟೀಫನ್ ಪತ್ರಿಕಾ ಪ್ರಕಟಮೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ
ಸೌದಿ: ವೀಸಾ ಅವಧಿ ಮುಕ್ತಾಯ- ಸ್ವದೇಶಕ್ಕೆ ಮರಳಲಾಗದೆ ಸಾವಿರಾರು ಮಂದಿ ಸಂಕಷ್ಟದಲ್ಲಿ