ಅನಿವಾಸಿ ಭಾರತೀಯರಿಂದಲೇ ಪ್ರಾರಂಭಗೊಂಡು ಧಾರ್ಮಿಕ, ಸಾಮಾಜಿಕ, ಮತ್ತು ಶೈಕ್ಷಣಿಕ ರಂಗಗಳಲ್ಲಿ ಉತ್ತಮ ರೀತಿಯಲ್ಲಿ ಸೇವೆ ಗೈಯುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾ ಸಂಸ್ಥೆ ಎ.ಎಮ್.ಇ.ಸಿ. ಯನ್ನು ಪ್ರವಾಸಿಗಳಿಗೆ ಅಗತ್ಯವಾದರೆ ಕ್ವಾರಂಟೈನ್ ಆಗಿ ನೀಡಲು ಸಿದ್ಧ ಎಂದು ಸಂಸ್ಥೆಯ ಉಪಾಧ್ಯಕ್ಷರಾದ ಸ್ವಲಾಹುದ್ದೀನ್ ಸಖಾಫಿ ಮಾಡನ್ನೂರ್ ಹಾಗೂ ಎ.ಎಮ್.ಇ.ಸಿ ಇದರ ಜನರಲ್ ಮ್ಯಾನೇಜರ್ ಅಶ್ರಫ್ ಸಖಾಫಿ ಮಾಡಾವು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಜೀವನೋಪಾಯಕ್ಕಾಗಿ ವಿದೇಶದಲ್ಲಿರುವ ನೂರಾರು ಕನ್ನಡಿಗರು ಕೋರೋನ ಭೀತಿಯಿಂದ ಸಂಕಷ್ಟದಲ್ಲಿದ್ದಾರೆ. ಹಲವು ದೇಶಗಳಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಅವರ ಸುರಕ್ಷತೆಯನ್ನು ಸರಕಾರವು ಖಚಿತಪಡಿಸಬೇಕೆಂದು ಸಂಸ್ಥೆಯ ಜನರಲ್ ಮ್ಯಾನೇಜರ್ ಅಶ್ರಫ್ ಸಖಾಫಿ ಮಾಡಾವು ಆಗ್ರಹಿಸಿದರು.
2006 ರಲ್ಲಿ ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದ ಮೂಡಡ್ಕ ಎಂಬ ಕುಗ್ರಾಮದಲ್ಲಿ ಮರ್ಹೂಂ ಟಿ.ಎಚ್ .ಉಸ್ತಾದರು ಸ್ಥಾಪಿಸಿದ ಸಂಸ್ಥೆಯು ಇಂದು ಒಂದೇ ಸೂರಿನಡಿಯಲ್ಲಿ ಧಾರ್ಮಿಕ, ಲೌಕಿಕ ಶಿಕ್ಷಣಗಳೆರಡನ್ನೂ ನೀಡಿ ಸಮಾಜಕ್ಕೆ ಅವರನ್ನು ಉತ್ತಮ ಉತ್ಪನ್ನಗಳಾಗಿ ನೀಡುವಲ್ಲಿ ಮಹತ್ತರವಾದ ಪಾತ್ರವನ್ನು ವಹಿಸಿಕೊಂಡು ಬರುತ್ತಿದೆ.
ವರದಿ – ಆಸಿಫ್ ಸರಳಿಕಟ್ಟೆ















ಇನ್ನಷ್ಟು ಸುದ್ದಿಗಳು
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮರುಪರಿಶೀಲಿಸುವಂತೆ ಕೆಸಿಎಫ್ ಆಗ್ರಹ
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ