ಕೋವಿಡ್ 19 ಮಾರಕ ವೈರಾಣು ಹರಡುವುದನ್ನು ತಡೆಗಟ್ಟಲು ಸರಕಾರ ಘೋಷಿಸಿದ ಲಾಕ್ ಡೌನ್ ನಿಂದಾಗಿ ಸಂಕಷ್ಟಕ್ಕೆ ಒಳಗಾಗಿರುವ ಜನರ ಸಂಕಷ್ಟವನ್ನು ಅರಿತು ಸ್ಪಂದಿಸಲು ಉಳ್ಳಾಲ ಅಳೇಕಲ ಜಮಾಅತ್ ಮುಂದಾಳುತ್ವದಲ್ಲಿ ಇತರ ಸಮಿತಿಗಳು ಮತ್ತು ಸಂಘ ಸಂಸ್ಥೆಗಳ ಸಂಪೂರ್ಣ ಸಹಕಾರದೊಂದಿಗೆ ಮತ್ತು ದೇಶ ವಿದೇಶಗಳಲ್ಲಿರುವ ಕೊಡುಗೈ ದಾನಿಗಳ ಸಹಾಯದೊಂದಿಗೆ ಊರಿನ ಯುವಕರ ತನು, ಮನ, ಧನದ ಸಹಕಾರದೊಂದಿಗೆ ಅಳೇಕಲ ಜಮಾಅತಿನಲ್ಲಿರುವ ಬಡವರು, ಮಧ್ಯಮ ವರ್ಗದವರು, ಶ್ರೀಮಂತರು ಎಂಬ ವ್ಯತ್ಯಾಸವಿಲ್ಲದೆ ಸರ್ವ ಜಮಾಅತ್ ಬಾಂಧವರಿಗೂ ಮತ್ತು ಹಿಂದು, ಮುಸ್ಲಿಂ, ಕ್ರೈಸ್ತ ಬಾಂಧವರಿಗೂ ಆಹಾರ ಧಾನ್ಯಗಳ ಒಂದು ಸಾವಿರ ಕಿಟ್ಟುಗಳನ್ನು ವಿತರಿಸಲಾಯಿತು. ತಲಾ 2,700 ಮೌಲ್ಯದ ಪ್ರತೀ ಕಿಟ್ಟುಗಳನ್ನು ಎಲ್ಲರ ಮನೆ ಬಾಗಿಲಿಗೆ ತಲುಪಿಸಲಾಯಿತು.
ಅಳೇಕಲ ಜಮಾಅತ್ ಅಧ್ಯಕ್ಷರಾದ ಬಹು ಪಿ ಎಸ್ ಎಂ ಶಿಹಾಬುದ್ದೀನ್ ಕಾಮಿಲ್ ಸಖಾಫಿ ಉಳ್ಳಾಲ ಕಿಟ್ಟುಗಳ ವಿತರಣಾ ಕಾರ್ಯಕ್ರಮದಲ್ಲಿ ದುವಾ ನೆರವೇರಿಸಿ ಈ ವಿಷಯವನ್ನು ತಿಳಿಸಿದರು.
ಪ್ರಸ್ತುತ ಕಾರ್ಯಕ್ರಮದಲ್ಲಿ ಜಮಾಅತ್ ಉಪಾಧ್ಯಕ್ಷರಾದ ಅಶ್ರಫ್ ಯು ಡಿ, ಪ್ರಧಾನ ಕಾರ್ಯದರ್ಶಿ ಫಾರೂಕ್ ಹಾಜಿ, ಮದ್ರಸಾ ಸಂಚಾಲಕ ರಿಯಾಝ್, ಕಾರ್ಯ ದರ್ಶಿ ಜಾಫರ್, ಉಳ್ಳಾಲ ನಗರಸಭಾ ಸ್ಥಳೀಯ ಕೌನ್ಸಿಲರ್ ಅಸ್ಗರ್ ಆಲಿ, ಅಳೇಕಲ ಜಮಾಅತ್ ಆಡಳಿತ ಸಮಿತಿ ಪದಾಧಿಕಾರಿಗಳು ಮತ್ತು ಫಾರೂಕ್, ಉಮರ್,ಹನೀಫ್ ರಿಯಾಝ್,ಯು.ಡಿ ಹಸನ್, ಹನೀಫ್, ಯು ಎನ್ ಜಾಫರ್, ಯು ಎ ಅಬ್ದುಲ್ ಕಾದರ್ ಹಾಜಿ ಅಳೇಕಲ ಹಾಗೂಇತರ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಜರಿದ್ದರು.















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ