ಸೌದಿ ಅರೇಬಿಯಾ: ಮದೀನಾ ಮುನವ್ವರದಲ್ಲಿ ಇತ್ತೀಚಿಗೆ ಮರಣಹೊಂದಿದ ಮಹಾರಾಷ್ಟ್ರದ ಕೊರೊನಾ ಪೀಡಿತ ವ್ಯಕ್ತಿಯ ಮರಣೋತ್ತರ ಕ್ರಿಯೆ ಹಾಗೂ ದಫನ ಕಾರ್ಯಕ್ಕೆ ಬೇಕಾದ ಭಾರತೀಯ ದೂತಾವಾಸ ಕಛೇರಿಯ ಅಗತ್ಯ ದಾಖಲೆ ಪತ್ರಗಳ ಕಾನೂನು ಪ್ರಕ್ರಿಯೆ, ಹಾಗೂ ಇನ್ನಿತರ ಕೆಲಸ ಕಾರ್ಯದಲ್ಲಿ ಸಧ್ಯದ ಕಠಿಣ ಪರಿಸ್ಥಿತಿಯಲ್ಲಿ ಕುಟುಂಬಸ್ತರ ಅಪೇಕ್ಷೆ ಮೇರೆಗೆ ಕೆ.ಸಿ.ಎಫ್ ಸಾಂತ್ವನ ಕಾರ್ಯಕರ್ತರು ನೆರವಾಗಿದ್ದಾರೆ.
ಮದೀನಾ ಮುನವ್ವರದಲ್ಲಿ ಎಪ್ರಿಲ್ 21ರಂದು ಮರಣಹೊಂದಿದ ಪುಣೆಯ ವ್ಯಕ್ತಿಯೊಬ್ಬರ ಮರಣೋತ್ತರ ಕ್ರಿಯೆ ನಿರ್ವಹಿಸಲು, ವಾರಸುದಾರಿಕೆ ತೆಗೆದುಕೊಳ್ಳಲು ಕುಟುಂಬಸ್ತರು, ಪರಿಚಯಸ್ತರು ಯಾರು ಇಲ್ಲದಾಗ… ಕೆ.ಸಿ.ಎಫ್ ಸಾಂತ್ವನ ಕಾರ್ಯಕರ್ತರೊಬ್ಬರ ಹೆಸರಿಗೆ ಕುಟುಂಬಸ್ತರು ದಫನ ಕಾರ್ಯಕ್ಕೆ ಬೇಕಾದ ವಾರಸುದಾರಿಕೆಯ ದಾಖಲೆ ವರ್ಗಾವಣೆ ಮಾಡಿ ಲಾಕ್ ಡೌನ್ ಸಮಯದಲ್ಲಿ ಪೊಲೀಸ್ ಇಲಾಖೆಯ ವಿಶೇಷ ಅನುಮತಿ ಪಡೆದು ಸ್ವತಃ ಕೆ.ಸಿ.ಎಫ್ ಸಾಂತ್ವನ ಕಾರ್ಯಕರ್ತರು ಮುಂದೆ ನಿಂತು ಕಾನೂನು ಪ್ರಕ್ರಿಯೆಗಳನ್ನು ಪೂರ್ತಿಗೊಳಿಸಿ ದಫನ ಕಾರ್ಯ ನೆರವೇರಿಸಿದ್ದಾರೆ.
ಕಳೆದ ನಾಲ್ಕು ವರ್ಷಗಳಿಂದ ಉಮ್ರಾ,ಹಜ್ಜ್, ಹಾಗೂ ಅನಿವಾಸಿಯಾಗಿ ಬಂದು ಮದೀನಾ ಮುನವ್ವರದಲ್ಲಿ ಮರಣ ಸಂಭವಿಸಿದಾಗ ನೂರಕ್ಕಿಂತ ಅಧಿಕ ಮಂದಿಯ ದಫನ ಕಾರ್ಯಕ್ಕೆ ನೆರವು ನೀಡಲಾಗಿದೆ. ಕೋವಿಡ್ ಪರಿಸ್ಥಿತಿಯಲ್ಲಿ ಹೆಚ್ಚುವರಿ ದಾಖಲೆ ಹಾಗೂ ವಾರಸುದಾರರ ಕಡೆಯಿಂದ ಎರಡು ಮಂದಿಗೆ ಮಾತ್ರ ಅನುಮತಿ ನೀಡಲಾಗುತ್ತದೆ ಹಾಗೂ ದಫನ ಕಾರ್ಯಕ್ಕೆ ಭಾಗವಹಿಸಿದ ನಂತರ ಪೋಲಿಸ್ ಇಲಾಖೆ ಹೋಮ್ ಕೊರಂಟೈನ್ನಲ್ಲಿರುವಂತೆ ಸಲಹೆ ನೀಡಿದ್ದಾರೆ ಎಂದು ಕೆ.ಸಿ.ಎಫ್ ಮದೀನಾ ಮುನವ್ವರ ಝೋನ್ ಸಾಂತ್ವನ ಇಲಾಖೆ ಕನ್ವೀನರ್ ರಝ್ಝಾಖ್ ಉಳ್ಳಾಲ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು