ಬೆಂಗಳೂರು,ಏ.25: ಪ್ರಮುಖ ಹೋರಾಟಗಾರ, ಚಿಂತಕ, ನಮ್ಮ ಧ್ವನಿ ಸಂಸ್ಥಾಪಕ ಮಹೇಂದ್ರ ಕುಮಾರ್ ಕೊಪ್ಪ (47) ಇಂದು ಬೆಳಗ್ಗೆ ಹೃದಯಾಘಾತದಿಂದಾಗಿ ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
“ನಮ್ಮ ಧ್ವನಿ” ಎಂಬ ಸಂಘಟನೆ ಸಂಸ್ಥಾಪಕರಾಗಿದ್ದ ಅವರು ನಮ್ಮ ಧ್ವನಿ ಯೂಟ್ಯೂಬ್ ಚಾನೆಲ್ ಮೂಲಕ ವಿವಿಧ ವಿಷಯಗಳ ಬಗ್ಗೆ ಮಾತನಾಡಿ ಜನಪ್ರಿಯರಾಗಿದ್ದರು.ಯಾವ ಹಿಂದು,ಯಾವ ಮುಸ್ಲಿಂ ,ಯಾವ ಕ್ರೈಸ್ತ ನಾವೆಲ್ಲರೂ ಭಾರತೀಯರೆಂದು ಸೌಹಾರ್ಧತೆ ಸಾರಿದ ಇವರು ಸಂಘಿಗಳ ಪಾಲಿನ ಸಿಂಹ ಸ್ವಪ್ನ ವಾಗಿದ್ದರು.
ಶಾಂತಿಪ್ರಿಯ, ಸೌಹಾರ್ದಪರ, ಪ್ರಗತಿಪರ ನಿಲುವುಗಳ ಮಹೇಂದ್ರ ಕುಮಾರ್ ಅವರ ನಿಧನ ರಾಜ್ಯಕ್ಕೆ ಬಹು ದೊಡ್ಡ ಆಘಾತವಾಗಿದೆ. ಮಹೇಂದ್ರ ಕುಮಾರ್ ಅವರು ಪತ್ನಿ, ಇಬ್ಬರು ಮಕ್ಕಳು ಮತ್ತು ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.
ಬಜರಂಗದಳದ ಮಾ ರಾಜ್ಯ ಸಂಚಾಲಕರಾಗಿದ್ದ ಅವರು ಅದರಿಂದ ಹೊರಬಂದ ಬಳಿಕ ಸಾಮಾಜಿಕ, ಜಾಗೃತಿಕ ಚಟುವಟಿಕೆಯಲ್ಲಿ ಸಕ್ರಿಯವಾಗಿದ್ದರು. ಮೂಲತ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದವರಾದ ಮಹೇಂದ್ರ ಕುಮಾರ್ ಬೆಂಗಳೂರು ವಾಸಿಯಾಗಿದ್ದರು.
ಸರ್ವಧರ್ಮ ಸೌಹಾರ್ದ, ಸಾಮಾರಸ್ಯದ ಕುರಿತು ಕಾಳಜಿಯಿಂದ ದುಡಿಯುತ್ತಿದ್ದ ಅವರು, ರಾಜ್ಯದಾದ್ಯಂತ ಅಪಾರ ಜನಮನ್ನಣೆ ಗಳಿಸಿದ್ದರು. ಸಿಎಎ, ಎನ್ಆರ್ಸಿ ವಿರೋಧಿ ಹೋರಾಟದ ಸಂದರ್ಭದಲ್ಲಿ ಮಂಚೂಣಿಯಲ್ಲಿದ್ದು ಜನರಿಗೆ ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದರು.
“ನಮ್ಮ ಧ್ವನಿ” ಎಂಬ ಸಂಘಟನೆ ಸಂಸ್ಥಾಪಕರಾಗಿದ್ದ ಅವರು ನಮ್ಮ ಧ್ವನಿ ಯೂಟ್ಯೂಬ್ ಚಾನೆಲ್ ಮೂಲಕ ವಿವಿಧ ವಿಷಯಗಳ ಬಗ್ಗೆ ಮಾತನಾಡಿ ಜನಪ್ರಿಯರಾಗಿದ್ದರು.ಯಾವ ಹಿಂದು,ಯಾವ ಮುಸ್ಲಿಂ ,ಯಾವ ಕ್ರೈಸ್ತ ನಾವೆಲ್ಲರೂ ಭಾರತೀಯರೆಂದು ಸೌಹಾರ್ಧತೆ ಸಾರಿದ ಇವರು ಸಂಘಿಗಳ ಪಾಲಿನ ಸಿಂಹ ಸ್ವಪ್ನ ವಾಗಿದ್ದರು.
ಶಾಂತಿಪ್ರಿಯ, ಸೌಹಾರ್ದಪರ, ಪ್ರಗತಿಪರ ನಿಲುವುಗಳ ಮಹೇಂದ್ರ ಕುಮಾರ್ ಅವರ ನಿಧನ ರಾಜ್ಯಕ್ಕೆ ಬಹು ದೊಡ್ಡ ಆಘಾತವಾಗಿದೆ. ಮಹೇಂದ್ರ ಕುಮಾರ್ ಅವರು ಪತ್ನಿ, ಇಬ್ಬರು ಮಕ್ಕಳು ಮತ್ತು ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ