ನವದೆಹಲಿ,ಏ.25: ವಿಶ್ವಾದ್ಯಂತವಿರುವ ಜನರ ನಿದ್ದೆಗೆಡಿಸಿದ ಕೋವಿಡ್-19 ಲಕ್ಷಾಂತರ ಮಂದಿಯನ್ನು ಬಲಿ ಪಡೆದುಕೊಂಡಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಮಾತ್ರವೇ ಇದನ್ನು ನಿಯಂತ್ರಿಸಲು ಸಾಧ್ಯ ಎಂದು ವಿಶ್ವ ಆರೋಗ್ಯ ಸಂಸ್ಥೆ ಮುನ್ಸೂಚನೆ ನೀಡಿದೆ.
ಇದರನ್ವಯ ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಆದೇಶದ ಮೇರೆಗೆ ಎರಡನೇ ಅವಧಿಗೆ ಜಾರಿ ಮಾಡಲಾದ ಲಾಕ್ಡೌನ್ ಪರಿಣಾಮದಿಂದ ಕಡೆಗೂ ಕೊರೋನಾ ವೈರಸ್ ನಿಯಂತ್ರಣಕ್ಕೆ ಬಂದಿರುವ ಲಕ್ಷಣಗಳು ಕಂಡುಬಂದಿವೆ.
ಮಾರ್ಚ್ 23ರಿಂದ ಏಪ್ರಿಲ್ 23ರವರೆಗೂ ಸುಮಾರು 5 ಲಕ್ಷ ಮಂದಿಯನ್ನು ಕೊರೋನಾ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇದರ ಪರಿಣಾಮ ಒಂದು ತಿಂಗಳ ಅವಧಿಯಲ್ಲಿ ಸೋಂಕಿತರ ಪತ್ತೆ ಪ್ರಮಾಣ ಜಾಸ್ತಿ ಇತ್ತು. ಆದರೀಗ ಕೊರೋನಾ ಪರೀಕ್ಷೆ ಪ್ರಮಾಣ ಇದರ 33 ಪಟ್ಟು ಹೆಚ್ಚಿಸಲಾಗಿದೆ. ಹೀಗಿದ್ದರೂ ಕೊರೋನಾ ಹರಡುವಿಕೆ ಪ್ರಮಾಣ ಶೇ.6ರಷ್ಟು ಮಾತ್ರ ಇದೆ. ಈ ಮೂಲಕ ದೇಶದಲ್ಲಿ ಕೊರೋನಾ ನಿಯಂತ್ರಣಕ್ಕೆ ಬಂದಿದೆ.
ಪ್ರತಿದಿನ ಶೇ.100ರ ಗಡಿ ದಾಟುತ್ತಿದ್ದ ಕೊರೋನಾ ಸೋಂಕು ಈಗ ದಿಢೀರ್ ನಿನ್ನೆ ಮಾತ್ರ ಶೇ.6ಕ್ಕೆ ಇಳಿಕೆಯಾಗಿದೆ. ಇದರರ್ಥ ದೇಶದಲ್ಲಿ ಕೊರೋನಾ ವೈರಸ್ ಹರಡುವ ವೇಗ ಕಡಿಮೆಯಾಗಿದೆ ಎಂದು. ಇನ್ನು ಮುಂದೆಯೂ ಲಾಕ್ಡೌನ್ ಮುಗಿದ ನಂತರ ಇನ್ನಷ್ಟು ಕಡಿಮೆಯಾಗಬಹುದು ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಇನ್ನೊಂದೆಡೆ ಮಳೆಗಾಲ ಆರಂಭವಾದ ನಂತರ ಮತ್ತೆ ವೈರಸ್ಸಿನ ಎರಡನೇ ಅಲೆ ಕಾಣಿಸಿಕೊಳ್ಳಬಹುದು ಎಂದು ವಿಜ್ಞಾನಿಗಳು ಎಚ್ಚರಿಕೆ ನೀಡಿದ್ದಾರೆ. ಈ ಕಾರಣಕ್ಕಾದರೂ ಕಡ್ಡಾಯವಾಗಿ ದೈಹಿಕ ಅಂತರ ಕಾಯ್ದುಕೊಳ್ಳಬೇಕು ಮತ್ತು ಲಾಕ್ಡೌನ್ ಆದೇಶ ಕಟ್ಟುನಿಟ್ಟಿನಿಂದ ಪಾಲಿಸಬೇಕಾಗಿದೆ.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ