ರಿಯಾದ್: ರಮಝಾನ್ ಮತ್ತಿತರ ಸಮಯಗಳಲ್ಲಿ ಸಹಾಯ ನೀಡುವಾಗ ಫಲಾನುಭವಿಗಳ ಚಿತ್ರಗಳನ್ನು ತೆಗೆಯುವುದು ಮತ್ತು ಪ್ರಕಟಿಸುವುದನ್ನು ಮಾನವ ಸಂಪನ್ಮೂಲ ಸಚಿವಾಲಯ ನಿಷೇಧಿಸಿದೆ. ವ್ಯಕ್ತಿಗಳ ಗೌಪ್ಯತೆಯನ್ನು ಗೌರವಿಸುವ ಸಲುವಾಗಿ ಸಚಿವಾಲಯ ಈ ಕ್ರಮ ತೆಗೆದುಕೊಂಡಿದೆ.
ವಿವಿಧ ಸೇವಾ ಸಂಘಟನೆಗಳು, ಸಂಸ್ಥೆಗಳು ಮತ್ತು ವ್ಯಕ್ತಿಗಳು ಜನರಿಗೆ ಸಹಾಯವನ್ನು ಹಸ್ತಾಂತರಿಸುವ ಚಿತ್ರವನ್ನು ತೆಗೆದುಕೊಳ್ಳುವುದನ್ನು ನಿಷೇಧಿಸಲಾಗಿದೆ.
ಆದರೆ ರಮಝಾನ್ ಸಮಯದಲ್ಲಿ, ನೆರವು ವಿತರಣೆಗಾಗಿ ತಯಾರಿ ನಡೆಸುವ ದೃಶ್ಯಗಳನ್ನು ತೆಗೆಯಲು ಮತ್ತು ಪ್ರಕಟಿಸಲು ಯಾವುದೇ ಅಡ್ಡಿಯಿಲ್ಲ. ಇತರರಿಗೆ ಸ್ಫೂರ್ತಿ ನೀಡುವಂತಹ ತುಣುಕನ್ನು ನೀವು ತೆಗೆಯಬಹುದು ಮತ್ತು ಬಿಡುಗಡೆ ಮಾಡಬಹುದು. ಆದರೆ ಅದರಲ್ಲಿ ಯಾವುದೇ ಫಲಾನುಭವಿಯ ಚಿತ್ರ ಇರಬಾರದು. ಸಂಸ್ಥೆಗಳು ಮತ್ತು ಸ್ವಯಂಸೇವಾ ಸಂಸ್ಥೆಗಳ ವರದಿಗಳು ಮತ್ತು ಕರಪತ್ರಗಳಲ್ಲಿ ಸಹಾಯ ಪಡೆಯುವ ಚಿತ್ರಗಳನ್ನು ಪ್ರಕಟಿಸುವುದನ್ನು ಸಚಿವಾಲಯ ನಿಷೇಧಿಸಿದೆ.
ದೊಡ್ಡ ಮತ್ತು ಸಣ್ಣ ಸಂಸ್ಥೆಗಳು ಸಣ್ಣಮಟ್ಟದ ಸಹಾಯ ನೀಡುವ ಚಿತ್ರಗಳು ಮತ್ತು ದೃಶ್ಯಗಳನ್ನು ಪ್ರಕಟಿಸುತ್ತವೆ. ಸ್ವೀಕರಿಸುವವರು ಅನ್ಯ ದಾರಿಯಿಲ್ಲದೆ ಚಿತ್ರಕ್ಕೆ ಮುಖ ನೀಡಬೇಕಾದ ಸಂದರ್ಭಗಳು ಸಹ ಇರುತ್ತವೆ. ಈ ಪ್ರವೃತ್ತಿಯನ್ನು ಕೊನೆಗೊಳಿಸುವುದರ ಭಾಗವಾಗಿ ಸಚಿವಾಲಯ ಈ ನಿರ್ಧಾರ ಕೈಗೊಂಡಿದೆ.















ಇನ್ನಷ್ಟು ಸುದ್ದಿಗಳು
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮರುಪರಿಶೀಲಿಸುವಂತೆ ಕೆಸಿಎಫ್ ಆಗ್ರಹ
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?