ಪುತ್ತೂರು: ಬನ್ನೂರು ಮಸೀದಿಗೆ ಒಳಪಟ್ಟ ಬಡವರು,ಮಧ್ಯಮ ವರ್ಗ, ಶ್ರೀಮಂತರು ಮತ್ತು ಅನಿವಾಸಿ ಕನ್ನಡಿಗರ ಕುಟುಂಬಗಳಲ್ಲಿ ಬಹುತೇಕ ಜನರು ಕೋವಿಡ್-19 ಲಾಕ್ ಡೌನ್ ಸಮಸ್ಯೆಯಿಂದ ಒಂದೇ ರೀತಿಯ ಸಂಕಷ್ಟವನ್ನು ಎದುರಿಸುತ್ತಿರುವ ಪ್ರಸ್ತುತ ಪರಿಸ್ಥಿತಿಯಲ್ಲಿ ಮಸೀದಿಯ ಅಧೀನದಲ್ಲಿರುವ ಸರ್ವ ಮನೆಗಳಿಗೆ ರಂಝಾನ್ ಕಿಟ್ ವಿತರಿಸಲಾಯಿತು.

ಕಾರ್ಯಕ್ರಮವನ್ನು ಮಸೀದಿಯ ಖತೀಬರಾದ ಬಹು:ಅಬ್ದುಲ್ ಮಜೀದ್ ಮಲ್ಲಿ ಸಖಾಫಿ ಉಸ್ತಾದ್ ರವರು ದುಆಃ ಮಾಡುವುದರ ಮೂಲಕ ಉದ್ಘಾಟಿಸಿದರು.ಜಮಾಅತ್ ಕಮಿಟಿ ಅಧ್ಯಕ್ಷರಾದ ಮೊಯ್ದಿನ್ ಹಾಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಪುತ್ತೂರು ವೃತ್ತ ನಿರೀಕ್ಷಕರಾದ ತಿಮ್ಮಪ್ಪ ನಾಯ್ಕ್ ರವರು ಯೋಜನೆಯನ್ನು ಶ್ಲಾಘಿಸಿ ಶುಭ ಹಾರೈಸಿದರು.ಈ ಸಂದರ್ಭದಲ್ಲಿ ಜಮಾಅತ್ ಕಮೀಟಿ ಸದಸ್ಯರು ಜಮಾಅತ್’ನ ನೇತಾರರು ಹಾಗೂ ಯುವಕರು ಉಪಸ್ಥಿತರಿದ್ದರು.
ಖತೀಬ್ ಉಸ್ತಾದ್ ರವರ ನೇತೃತ್ವದಲ್ಲಿ ಆರಂಭಗೊಂಡು ಅನಿವಾಸಿ ಭಾರತೀಯರು, ಜಮಾಅತ್ ಸಮಿತಿಯ ಸದಸ್ಯರು ಹಾಗೂ ನಾಡಿನ ಕೊಡುಗೈ ಧಾನಿಗಳ ಸಹಕಾರದಿಂದ ಮತ್ತು ನಾಡಿನ ಯುವಕರ ಸ್ವಯಂ ಸ್ಪೂರ್ತಿಯ ಅಹರ್ನಿಶಿ ಸೇವೆಯಿಂದ ಯೋಜನೆಯು ಯಶಸ್ವಿಯಾಗಿ ನೆರವೇರಿತು. ಇದಕ್ಕೆ ತನು ಮನ ಧನಗಳಿಂದ ಸಹಕರಿಸಿದ ಸರ್ವರಿಗೂ ಸರ್ವ ಶಕ್ತನಾದ ಅಲ್ಲಾಹನು ತಕ್ಕುದಾದ ಪ್ರತಿಫಲ ನೀಡಲಿ, ಕೋರೋನ ವೈರಸ್ ನಂತಹ ಮಾರಕ ರೋಗದಿಂದ ಸರ್ವರನ್ನೂ ಅಲ್ಲಾಹು ಕಾಪಾಡಲಿ.















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್