janadhvani

Kannada Online News Paper

ಮೇ.4ರಿಂದ ಬಸ್ ಸಂಚಾರ ಆರಂಭ- ಸಾರಿಗೆ ಸಚಿವ

ಬೆಂಗಳೂರು: ರಾಜ್ಯಾದ್ಯಂತ ಕೆಎಸ್ಆರ್ಟಿಸಿ ಬಸ್ ಸಂಚಾರವು ಮೇ 4ನೇ ತಾರೀಕಿನಿಂದ ಆರಂಭವಾಗಲಿದೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

ಈ ಸಂಬಂಧ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಅವರು, ಕಂಟೇನ್ಮೆಂಟ್ ಮತ್ತು ರೆಡ್ ಜೋನ್ ತಾಲೂಕುಗಳನ್ನು ಹೊರತುಪಡಿಸಿ ಎಲ್ಲಾ ಜಿಲ್ಲೆಗಳಲ್ಲೂ ಬಸ್ ಸಂಚಾರ ಆರಂಭಿಸಲು ಸಿಎಂ ಸಮ್ಮತಿ ನೀಡಿದ್ದಾರೆ ಎಂದರು.

ಸಂವಹನ ಕೊರತೆಯಿಂದಾಗಿ ಕೆಎಸ್ಆರ್ಟಿಸಿ ದುಪ್ಪಟ್ಟು ದರ ತೆಗೆದುಕೊಂಡಿದೆ. ಪ್ರಯಾಣಿಕರ ಜನರ ಹಿತದೃಷ್ಟಿಯಿಂದ ಈಗ ಒಂದೆಡೆ ದರ ಮಾತ್ರ ತೆಗೆದುಕೊಂಡು ಕಳಿಸುವಂತೆ ಆದೇಶಿಸಿದ್ದೇನೆ. ಈ ಬಗ್ಗೆ ಯಾವುದೇ ಗೊಂದಲ ಬೇಡ ಎಂದರು.

ರಾಜ್ಯ ಸರ್ಕಾರ ಈಗಾಗಲೇ ಹಾಟ್ಸ್ಪಾಟ್ಗಳನ್ನು ಗುರುತಿಸಿದೆ. ಕೊರೋನಾ ವೈರಸ್ ಇರುವ ತಾಲೂಕುಗಳಲ್ಲಿ ಮುಂದಿನ ಆದೇಶ ನೀಡುವವರೆಗೂ ಬಸ್ ಸಂಚಾರ ಇರುವುದಿಲ್ಲ. ಉಳಿದಂತೆ ಮೇ 4ರಿಂದ ಕೆಎಸ್ಆರ್ಟಿಸಿ ಬಸ್ ಸಂಚಾರ ಶುರುವಾಗಲಿದೆ ಎಂದು ಲಕ್ಷ್ಮಣ ಸವದಿ ತಿಳಿಸಿದರು.

error: Content is protected !! Not allowed copy content from janadhvani.com