ಕುವೈತ್ ಸಿಟಿ: ಕುವೈತ್ನಿಂದ ಊರಿಗೆ ಮರಳಲು ಬಯಸುವ ಭಾರತೀಯರಿಗಾಗಿ ಭಾರತೀಯ ರಾಯಭಾರ ಕಚೇರಿಯು ವಿಶೇಷ ವೆಬ್ ಪುಟವನ್ನು ಸ್ಥಾಪಿಸಿದೆ. ಮರಳಲು ಬಯಸುವವರ ಬಗ್ಗೆ ಮಾಹಿತಿ ಸಂಗ್ರಹಿಸುವುದು ಮಾತ್ರ ನೋಂದಣಿ ಪ್ರಕ್ರಿಯೆಯ ಉದ್ದೇಶವಾಗಿದ್ದು, ವಿಮಾನಗಳು ಪುನರಾರಂಭಿಸುವ ಬಗ್ಗೆ ಕೇಂದ್ರ ಸರಕಾರ ನಿರ್ಧಾರ ಕೈಗೊಂಡಿಲ್ಲ ಎಂದು ರಾಯಭಾರ ಕಚೇರಿ ತಿಳಿಸಿದೆ.
ಮರಳಲು ಇಚ್ಛಿಸುವ ವಲಸಿಗ ಕುಟುಂಬದ ಪ್ರತಿಯೊಬ್ಬ ವ್ಯಕ್ತಿ ಕೂಡ ನೋಂದಣಿ ನಡೆಸಬೇಕು. ಕಂಪನಿಗಳ ನೌಕರರು ವೈಯಕ್ತಿಕವಾಗಿ ನೋಂದಣಿಯನ್ನು ಪೂರ್ಣಗೊಳಿಸಬೇಕು. ವಿಮಾನಗಳು ಪ್ರಾರಂಭವಾಗುವ ಬಗ್ಗೆ ನಂತರ ಪ್ರಕಟಿಸಲಾಗುವುದು.
ಕೋವಿಡ್ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಅನುಸರಿಸುತ್ತಿರುವ ನಿಯಮಗಳಿಗೆ ಅನುಗುಣವಾಗಿ ಪ್ರಯಾಣ ಬೆಳಸಬೇಕು ಎಂದು ರಾಯಭಾರ ಕಚೇರಿ ತಿಳಿಸಿದೆ. indembkwt.com/eva/ ನಲ್ಲಿ ನೋಂದಾಯಿಸಿ ಕೊಳ್ಳಬಹುದು. ಈಗಾಗಲೇ ನೋರ್ಕಾದಲ್ಲಿ ನೋಂದಾಯಿಸಿಕೊಂಡವರು ಕೂಡ ರಾಯಭಾರ ಕಚೇರಿಯಲ್ಲಿ ನೋಂದಾಯಿಸಿ ಕೊಳ್ಳಬೇಕಾಗುತ್ತದೆ.
ಅರ್ಜಿದಾರನು ಸ್ವಂತ ಹಾರಾಟದ ವೆಚ್ಚವನ್ನು ಭರಿಸುವುದಾಗಿ ಮತ್ತು ಊರಿಗೆ ಮರಳಿದ ಬಳಿಕ, 14 ದಿನಗಳ ಕಾಲ ಕ್ವಾರಮಟೈನ್ ಅನ್ನು ಸ್ವಂತ ಖರ್ಚಿನಲ್ಲಿ ನಡೆಸಬಹುದು ಎಂಬ ಭರವಸೆಯನ್ನು ನೀಡಬೇಕಾಗುತ್ತದೆ. ನೋಂದಣಿ ಮೂಲಕ ಮಾಹಿತಿಯನ್ನು ಸಂಗ್ರಹಿಸುವ ಗುರಿಯನ್ನು ಹೊಂದಲಾಗಿದೆ.ಕೇಂದ್ರ ಸರಕಾರ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ