ಬೆಂಗಳೂರು: ಕೊರೊನಾ ವೈರಸ್ ನಿಯಂತ್ರಿಸುವ ಭಾಗವಾಗಿ ಮೂರನೇ ಬಾರಿಗೆ ಲಾಕ್ಡೌನ್ ವಿಸ್ತರಣೆಯಾಗಿದ್ದು, ಶನಿವಾರ ರಾಜ್ಯ ಸರಕಾರ ನೂತನ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಮೇ 17ರವರೆಗೆ ಲಾಕ್ಡೌನ್ ವಿಸ್ತರಿಸಿ ಕೇಂದ್ರ ಸರಕಾರ ಹೊರಡಿಸಿರುವ ಹೊಸ ಮಾರ್ಗಸೂಚಿ ಹಿನ್ನೆಲೆಯಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಸಂಪುಟದ ಹಿರಿಯ ಸದಸ್ಯರು, ಉನ್ನಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳೊಂದಿಗೆ ಶನಿವಾರ ಸಭೆ ನಡೆಸಿದ್ದಾರೆ.ಇದಲ್ಲದೆ ರಾಜ್ಯದ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಕೊರೊನಾ ನಿಯಂತ್ರಣ ಕ್ರಮಗಳ ಕುರಿತು ಚರ್ಚೆ ನಡೆಸಿದ್ದು ಹೊಸ ಮಾರ್ಗಸೂಚಿ ಕ್ರಮಗಳನ್ನು ಬಿಡುಗಡೆ ಮಾಡಿದ್ದಾರೆ.
ಹೊಸ ಮಾರ್ಗಸೂಚಿಗಳು ಮೇ 4ರಿಂದ ಮೇ 17ರವರೆಗೆ ಅನ್ವಯವಾಗಲಿವೆ.
- ರಾಜ್ಯದ ಗ್ರೀನ್ ಝೋನ್ ಜಿಲ್ಲೆಗಳಲ್ಲಿ ಬಸ್ ಸಂಚಾರಕ್ಕೆ ಅವಕಾಶ ನೀಡಲಾಗಿದೆ.
- ಮೇ.17ರ ವರೆಗೆ ಎಲ್ಲ ರೀತಿಯ ವಿಮಾನಯಾನ ಬಂದ್ ಮಾಡಲಾಗಿದೆ.
- ರೆಡ್ ಝೋನ್ ಜಿಲ್ಲೆಗಳಲ್ಲಿ ಷಾಪಿಂಗ್ ಕಾಂಪ್ಲೆಕ್ಸ್ ಮಾಲ್ಗಳನ್ನು ತೆರೆಯುವಂತಿಲ್ಲ.
- ರಾಜ್ಯಾದ್ಯಂತ ಶಾಲಾ ಕಾಲೇಜುಗಳನ್ನು ತೆರೆಯುವಂತಿಲ್ಲ.
- ಖಾಸಗಿ ಕಂಪನಿ, ಕಚೇರಿಗಳನ್ನು ಓಪನ್ ಮಾಡಬಹುದು.
- ಅಗತ್ಯವಸ್ತುಗಳು ಎಂದಿನಂತೆ ಲಭ್ಯವಿರುತ್ತವೆ.
- ಆರೆಂಜ್ ಮತ್ತು ಗ್ರೀನ್ ಝೋನ್ ಜಿಲ್ಲೆಗಳಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡಲಾಗಿದೆ.
- ಸಾರ್ವಜನಿಕ ವಾಹನಗಳಿಗೆ ಅವಕಾಶ ನೀಡಲಾಗಿಲ್ಲ.
- ಗೂಡ್ಸ್ ವಾಹನಗಳಿಗೆ ಮಾತ್ರ ಅವಕಾಶ ನೀಡಲಾಗಿದೆ.
- ಆರೋಗ್ಯದ ದೃಷ್ಟಿಯಿಂದ ಗರ್ಭಿಣಿ, ಮಕ್ಕಳು ಹಿರಿಯರು ಮನೆಯಲ್ಲೇ ಇರಬೇಕು ಎಂದು ಸೂಚಿಸಲಾಗಿದೆ.
- ಗಂಭೀರ ಆರೋಗ್ಯ ಸಮಸ್ಯೆ ಕಂಡುಬಂದರೆ ಮಾತ್ರವೇ ಆಸ್ಪತ್ರೆಗೆ ತೆರಳಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.
- ರಾಜ್ಯದ ಎಲ್ಲ ಕಡೆ ಆಸ್ಪತ್ರೆ ಗಳ ಒಪಿಡಿ ತೆರಯಲು ಸೂಚಿಸಲಾಗಿದೆ.
- ರೆಡ್ ಝೋನ್ನಲ್ಲಿ ಯಾವುದೇ ವ್ಯಕ್ತಿ ಸಂಚರಿಸಬೇಕಾದರೆ ಆರೋಗ್ಯ ಸೇತು ಆಪ್ ಹೊಂದಿರುವುದನ್ನು ಕಡ್ಡಾಯಗೊಳಿಸಲಾಗಿದೆ.
- ರೆಡ್ ಝೋನ್ನಲ್ಲಿ ಸೆಲೂನ್, ಬ್ಯೂಟಿ ಪಾರ್ಲರ್ ತೆರೆಯಲು ಅವಕಾಶ ನೀಡಲಾಗಿಲ್ಲ.
- ಆಟೋ ರಿಕ್ಷಾ, ಸೈಕಲ್ ರಿಕ್ಷಾ, ಟ್ಯಾಕ್ಸಿ, ಕ್ಯಾಬ್, ಅಂತರ ಜಿಲ್ಲಾ ಬಸ್ಸುಗಳ ಚಾಲನೆಗೂ ಅವಕಾಶ ನೀಡಲಾಗಿಲ್ಲ















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ