ದುಬೈ: ಇತ್ತೀಚೆಗೆ ದುಬೈಯಲ್ಲಿ ಮೃತಪಟ್ಟಿದ್ದ ಉಳ್ಳಾಲ ಮಿಲ್ಲತ್ನಗರ ನಿವಾಸಿ ಯು.ಟಿ.ಜಮಾಲ್ ಇವರ ಮೃತದೇಹದ ಅಂತಿಮ ಪ್ರಕ್ರಿಯೆಗಳನ್ನು ಕೆಸಿಎಫ್ ಯುಎಇ ಶಿಕ್ಷಣ ವಿಭಾಗದ ಅಧ್ಯಕ್ಷ ಇಬ್ರಾಹೀಂ ಸಖಾಫಿ ಕೆದುಂಬಾಡಿ ಹಾಗೂ ಕೆಸಿಎಫ್ ದುಬೈ ನಾರ್ತ್ ಝೋನ್ ಸಾಂತ್ವಾನ ವಿಭಾಗದ ಅಧ್ಯಕ್ಷ ಅಲಿ ಅಸ್ಗರ್ ಕೂಳೂರು ಇವರ ನೇತೃತ್ವದಲ್ಲಿ ನಡೆಸಲಾಯಿತು. ಕುಟುಂಬ ಸದಸ್ಯರು ಹಾಗೂ ಸಂಘಟನೆಯ ಇತರ ಕಾರ್ಯಕರ್ತರು ಈ ಸಂದರ್ಭದಲ್ಲಿ ಸಹಕರಿಸಿದ್ದರು.
ವದಂತಿಗಳಿಗೆ ಕಿವಿಗೊಡದಂತೆ ಕರೆ
ದುಬೈ ಹಾಗೂ ಅಬುದಾಬಿಗಳಲ್ಲಿ ಕೋವಿಡ್-19 ಕಾರಣ ಮೃತಪಟ್ಟವರ ಮೃತದೇಹಗಳನ್ನು ದಹನ ಮಾಡಲಾಗುತ್ತಿದೆ ಎಂಬ ಶಬ್ದ ಸಂದೇಶವೊಂದು ವಾಟ್ಸಪ್ನಲ್ಲಿ ಹರಿದಾಡುತ್ತಿದ್ದು ಇದು ಶುದ್ಧ ಸುಳ್ಳು ಎಂದು ಕೆಸಿಎಫ್ ಯುಎಇ ಪ್ರಕಾಶನ ವಿಭಾಗದ ಅಧ್ಯಕ್ಷ ಅಬ್ದುಲ್ ಕರೀಂ ಮುಸ್ಲಿಯಾರ್ ಸ್ಪಷ್ಪಪಡಿಸಿದ್ದಾರೆ. ಕೋವಿಡ್ 19 ಸಂಬಂಧ ಕನ್ನಡಿಗರು ಮೃತಪಟ್ಟಲ್ಲಿ ಅವರ ಮಯ್ಯತ್ ನಮಾಝ್, ದಫನ ಸೇರಿದಂತೆ ಇನ್ನಿತರ ತರ ಪ್ರಕ್ರಿಯೆಗಳನ್ನು ಕೆಸಿಎಫ್ ನಾಯಕರ ನೇತೃತ್ವದಲ್ಲಿ ನಡೆಸಲಾಗುತ್ತಿದೆ. ಯುಎಇಯಲ್ಲಿ ಮೃತಪಟ್ಟ ತಮ್ಮ ಬಂಧುಗಳ ಅಂತ್ಯ ಸಂಸ್ಕಾರದ ಕುರಿತು ಊರಿನಲ್ಲಿರುವವವರು ಯಾವುದೇ ರೀತಿಯಲ್ಲಿ ಆತಂಕಗೊಳ್ಳುವ ಅಗತ್ಯವಿಲ್ಲ ಎಂದು ಅವರು ಹೇಳಿದ್ದಾರೆ. ಈ ರೀತಿಯ ಸುಳ್ಳು ವಾಯ್ಸ್ ಸಂದೇಶಗಳನ್ನು ಸೋಷಿಯಲ್ ಮೀಡಿಯಾಗಳಲ್ಲಿ ಹರಿಯಬಿಡಬಾರದು ಎಂದು ಅವರು ಹೇಳಿದರು.















ಇನ್ನಷ್ಟು ಸುದ್ದಿಗಳು
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ