ರಿಯಾದ್: ಕೋವಿಡ್ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಅತ್ಯಂತ ನೋವುಂಟುಮಾಡುವ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗಿ ಬರಬಹುದೆಂದು ಸೌದಿ ಹಣಕಾಸು ಸಚಿವ ಮುಹಮ್ಮದ್ ಅಲ್-ಜದ್ಆನ್ ಹೇಳಿಕೆ ನೀಡಿದ್ದಾರೆ.
70 ವರ್ಷಗಳಲ್ಲಿ ಅತಿದೊಡ್ಡ ಆರ್ಥಿಕ ಬಿಕ್ಕಟ್ಟಿನತ್ತ ದೇಶ ಸಾಗುತ್ತಿದೆ. ಇದನ್ನು ಗಮನದಲ್ಲಿಟ್ಟುಕೊಂಡು ದೇಶವು ತನ್ನ ಯೋಜನೆಗಳನ್ನು ಸಿದ್ಧಪಡಿಸುತ್ತಿದೆ. ಸ್ಥಳೀಯರ ಉದ್ಯೋಗಗಳನ್ನು ರಕ್ಷಿಸುವ ದೃಢ ನಿರ್ಧಾರಗಳೊಂದಿಗೆ ತೀರ್ಮಾನ ಕೂಗೊಳ್ಳಬೇಕಾಗುತ್ತದೆ.
ಪ್ರಸಕ್ತ ನಡೆಯುತ್ತಿರುವ ಪ್ರಮುಖ ಯೋಜನೆಗಳ ಕಾಮಗಾರಿಗಳನ್ನು ವಿಳಂಬಗೊಳಿಸಲಾಗುತ್ತವೆ. ಪ್ರಯಾಣ ವೆಚ್ಚ ಮತ್ತು ಹೊಸ ಯೋಜನೆಗಳನ್ನು ತಾತ್ಕಾಲಿಕವಾಗಿ ಕಡಿತಗೊಳಿಸಲಾಗುತ್ತದೆ. ಪ್ರಸ್ತುತ ವಿವಿಧ ಇಲಾಖೆಗಳಿಗೆ ಮೀಸಲಿಟ್ಟಿರುವ ಹೆಚ್ಚಿನ ಹಣವನ್ನು ಆರೋಗ್ಯ ಕ್ಷೇತ್ರಕ್ಕೆ ಉಪಯೋಗಿಸಬೇಕಾದ ಪರಿಸ್ಥಿತಿ ಇದೆ ಎಂದು ಹಣಕಾಸು ಸಚಿವರು ಹೇಳಿದರು.
ಈ ಬಗ್ಗೆ ಹಣಕಾಸು ಸಚಿವಾಲಯ ಚರ್ಚಿಸಿದ ಬಳಿಕ ನಿರ್ಧರಿಸಲಿದೆ. ಯೋಜನೆಗಳನ್ನು ವಿಳಂಬಗೊಳಿಸುವುದರಿಂದ ಅನೇಕರಿಗೆ ಉದ್ಯೋಗ ನಷ್ಟವಾಗಬಹುದು ಎಂದು ಹಣಕಾಸು ಮಾಧ್ಯಮಗಳು ಸೂಚಿಸುತ್ತವೆ. ಸ್ಥಳೀಯರ ಉದ್ಯೋಗಗಳನ್ನು ರಕ್ಷಿಸಲಾಗುವುದು ಎಂದು ಸಚಿವರು ಪದೇ ಪದೇ ಪ್ರತಿಪಾದಿಸಿದ್ದಾರೆ.
ಪ್ರಸಕ್ತ ಪರಿಸ್ಥಿತಿಯನ್ನು ನಿವಾರಿಸಲು ಮೀಸಲು ಹಣವನ್ನು ಬಳಸಲಾಗುತ್ತದೆ. ಸಮಸ್ಯೆಗಳು ನಿವಾರಣೆಯಾಗಲಿದೆ ಎಂದು ಆಶಿಸುತ್ತೇವೆ ಎಂದು ಜದ್ಆನ್ ಹೇಳಿದರು. ಹಣಕಾಸಿನ ವರ್ಷದ ಮೊದಲ ತ್ರೈಮಾಸಿಕದಲ್ಲಿ, ಇತರಕಡೆ ಇರುವಂತಹಾ ಅತಿದೊಡ್ಡ ಆರ್ಥಿಕ ಹಿಂಜರಿತ ಸೌದಿ ಅರೇಬಿಯಾದಲ್ಲೂ ಇತ್ತು. ಮುಂದಿನ ಆರು ತಿಂಗಳಲ್ಲಿ ಬಿಕ್ಕಟ್ಟು ತೀವ್ರಗೊಳ್ಳುವ ಸಾಧ್ಯತೆಯಿದೆ ಎಂದು ಸರಕಾರ ಅಂದಾಜಿಸಿದೆ. ಈ ಕ್ರಮವು ಪ್ರಯೋಜನಕಾರಿ ಎಂದು ಹಣಕಾಸು ಸಚಿವಾಲಯ ಅಂದಾಜಿಸಿದೆ. ಈಗಾಗಲೇ, ದೇಶದ ವಿವಿಧ ಯೋಜನೆಗಳು ಸ್ಥಗಿತಗೊಂಡಿವೆ.















ಇನ್ನಷ್ಟು ಸುದ್ದಿಗಳು
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ
ಸೌದಿ: ವೀಸಾ ಅವಧಿ ಮುಕ್ತಾಯ- ಸ್ವದೇಶಕ್ಕೆ ಮರಳಲಾಗದೆ ಸಾವಿರಾರು ಮಂದಿ ಸಂಕಷ್ಟದಲ್ಲಿ