ದುಬೈ: ಇಸ್ಲಾಂ ಮತ್ತು ಮುಸ್ಲಿಂ ಸಮುದಾಯವನ್ನು ಅವಹೇಳಿಸುವ ರೀತಿಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ ಮೂವರು ಭಾರತೀಯರನ್ನು ಯುಎಇ ಯಲ್ಲಿ ಕೆಲಸದಿಂದ ಕಿತ್ತೊಗೆಯಲಾಗಿದೆ.
ಅಝಾದಿಯಾ ಗ್ರೂಪ್ನ ರೆಸ್ಟೊರೆಂಟ್ಗಳಲ್ಲಿ ಶೆಫ್ ಆಗಿದ್ದ ರಾವತ್ ರೋಹಿ ಹಾಕಿದ ಪೋಸ್ಟ್, ಮುಸ್ಲಿಂ ಸಮುದಾಯದ ವಿರುದ್ಧ ಇತ್ತೆಂದು ಪರಿಗಣಿಸಿ ಆತನನ್ನು ಕೆಲಸದಿಂದ ಕಿತ್ತೊಗೆಯಲಾಗಿದ್ದು ತನಿಖೆಗೂ ಗುರಿಪಡಿಸಲಾಗಿದೆ.
ಇನ್ನೊಂದು ಪ್ರಕರಣದಲ್ಲಿ ಶಾರ್ಜಾದ ನ್ಯುಮಿಕ್ಸ್ ಆಟೊಮೇಷನ್ನಲ್ಲಿ ಸ್ಟೋರ್ ಕೀಪರ್ ಆಗಿದ್ದ ಸಚಿನ್ ಕಿನ್ನಿಗೋಳಿ, ಟ್ರಾನ್ಸ್ಗಾರ್ಡ್ ಗ್ರೂಪ್ನ ವಿಶಾಲ್ ಠಾಕೂರ್ ಕೂಡ ತಮ್ಮ ಪೋಸ್ಟ್ಗಳಿಂದಾಗಿ ಕೆಲಸದಿಂದ ವಜಾಗೊಂಡಿದ್ದಾರೆ ಎಂದು ಗಲ್ಫ್ ನ್ಯೂಸ್ ವರದಿ ಮಾಡಿದೆ.
ಯಾವುದೇ ರೀತಿಯ ಧಾರ್ಮಿಕ ಮತ್ತು ಜನಾಂಗೀಯ ತಾರತಮ್ಯವನ್ನು ಯುಎಇ ಕಾನೂನು ಪ್ರಕಾರ ಶಿಕ್ಷಾರ್ಹ ಅಪರಾಧ ಎಂದು 2015ರಲ್ಲೇ ಘೋಷಿಸಿದೆ.
ಕೆಲ ವಾರಗಳಿಂದ ಇಂಥ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿದ್ದು, ಇದುವರೆಗೂ ಆರಕ್ಕೂ ಅಧಿಕ ಮಂದಿ ಇಂಥದ್ದೇ ಪೋಸ್ಟ್ಗಳಿಂದಾಗಿ ಕಾನೂನು ಶಿಕ್ಷೆಗೆ ಒಳಗಾಗುವ ಭೀತಿ ಅನುಭವಿಸುತ್ತಿದ್ದಾರೆ ಭಾರತೀಯರು.
ಯುಎಇಯಲ್ಲಿ ಭಾರತೀಯ ರಾಯಭಾರಿಯಾಗಿರುವ ಪವನ್ ಕಪೂರ್ ಅವರು ಜನಾಂಗೀಯ ದ್ವೇಷ, ಯಾವುದೇ ಧರ್ಮಗಳನ್ನು ನಿಂದಿಸುವ ಪೋಸ್ಟ್ಗಳನ್ನು ಹಾಕಬೇಡಿ ಎಂದು ಭಾರತೀಯ ನಿವಾಸಿಗಳಿಗೆ ಎಚ್ಚರಿಸಿದ್ದಾರೆ















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ