ದುಬೈ: ಇಸ್ಲಾಂ ಮತ್ತು ಮುಸ್ಲಿಂ ಸಮುದಾಯವನ್ನು ಅವಹೇಳಿಸುವ ರೀತಿಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ ಮೂವರು ಭಾರತೀಯರನ್ನು ಯುಎಇ ಯಲ್ಲಿ ಕೆಲಸದಿಂದ ಕಿತ್ತೊಗೆಯಲಾಗಿದೆ.
ಅಝಾದಿಯಾ ಗ್ರೂಪ್ನ ರೆಸ್ಟೊರೆಂಟ್ಗಳಲ್ಲಿ ಶೆಫ್ ಆಗಿದ್ದ ರಾವತ್ ರೋಹಿ ಹಾಕಿದ ಪೋಸ್ಟ್, ಮುಸ್ಲಿಂ ಸಮುದಾಯದ ವಿರುದ್ಧ ಇತ್ತೆಂದು ಪರಿಗಣಿಸಿ ಆತನನ್ನು ಕೆಲಸದಿಂದ ಕಿತ್ತೊಗೆಯಲಾಗಿದ್ದು ತನಿಖೆಗೂ ಗುರಿಪಡಿಸಲಾಗಿದೆ.
ಇನ್ನೊಂದು ಪ್ರಕರಣದಲ್ಲಿ ಶಾರ್ಜಾದ ನ್ಯುಮಿಕ್ಸ್ ಆಟೊಮೇಷನ್ನಲ್ಲಿ ಸ್ಟೋರ್ ಕೀಪರ್ ಆಗಿದ್ದ ಸಚಿನ್ ಕಿನ್ನಿಗೋಳಿ, ಟ್ರಾನ್ಸ್ಗಾರ್ಡ್ ಗ್ರೂಪ್ನ ವಿಶಾಲ್ ಠಾಕೂರ್ ಕೂಡ ತಮ್ಮ ಪೋಸ್ಟ್ಗಳಿಂದಾಗಿ ಕೆಲಸದಿಂದ ವಜಾಗೊಂಡಿದ್ದಾರೆ ಎಂದು ಗಲ್ಫ್ ನ್ಯೂಸ್ ವರದಿ ಮಾಡಿದೆ.
ಯಾವುದೇ ರೀತಿಯ ಧಾರ್ಮಿಕ ಮತ್ತು ಜನಾಂಗೀಯ ತಾರತಮ್ಯವನ್ನು ಯುಎಇ ಕಾನೂನು ಪ್ರಕಾರ ಶಿಕ್ಷಾರ್ಹ ಅಪರಾಧ ಎಂದು 2015ರಲ್ಲೇ ಘೋಷಿಸಿದೆ.
ಕೆಲ ವಾರಗಳಿಂದ ಇಂಥ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿದ್ದು, ಇದುವರೆಗೂ ಆರಕ್ಕೂ ಅಧಿಕ ಮಂದಿ ಇಂಥದ್ದೇ ಪೋಸ್ಟ್ಗಳಿಂದಾಗಿ ಕಾನೂನು ಶಿಕ್ಷೆಗೆ ಒಳಗಾಗುವ ಭೀತಿ ಅನುಭವಿಸುತ್ತಿದ್ದಾರೆ ಭಾರತೀಯರು.
ಯುಎಇಯಲ್ಲಿ ಭಾರತೀಯ ರಾಯಭಾರಿಯಾಗಿರುವ ಪವನ್ ಕಪೂರ್ ಅವರು ಜನಾಂಗೀಯ ದ್ವೇಷ, ಯಾವುದೇ ಧರ್ಮಗಳನ್ನು ನಿಂದಿಸುವ ಪೋಸ್ಟ್ಗಳನ್ನು ಹಾಕಬೇಡಿ ಎಂದು ಭಾರತೀಯ ನಿವಾಸಿಗಳಿಗೆ ಎಚ್ಚರಿಸಿದ್ದಾರೆ















ಇನ್ನಷ್ಟು ಸುದ್ದಿಗಳು
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ
ಸೌದಿ: ವೀಸಾ ಅವಧಿ ಮುಕ್ತಾಯ- ಸ್ವದೇಶಕ್ಕೆ ಮರಳಲಾಗದೆ ಸಾವಿರಾರು ಮಂದಿ ಸಂಕಷ್ಟದಲ್ಲಿ