ಮಂಗಳೂರು (ಜನಧ್ವನಿ ವರದಿ): ಕೊರೊನಾ ವೈರಸ್ ನ ತೀವ್ರ ಹರಡುವಿಕೆಯನ್ನು ತಡೆಗಟ್ಟುವ ಸಲುವಾಗಿ ಹಂಪನಕಟ್ಟೆಯ 3 ವಾಣಿಜ್ಯ ಸಂಕೀರ್ಣಗಳ ಮುಸ್ಲಿಂ ವರ್ತಕರು ಬಟ್ಟೆ ಅಂಗಡಿ, ಫ್ಯಾನ್ಸಿ ಸ್ಟೋರ್ ಮತ್ತು ಇತರ ಅಂಗಡಿಗಳನ್ನು ಈದ್ ಹಬ್ಬದ ವರೆಗೆ ತೆರೆಯದಿರಲು ತೀರ್ಮಾನಿಸಿದ್ದಾಗಿ ವರದಿಯಾಗಿದೆ.

ಮುಸ್ಲಿಂ ವರ್ತಕರ ಸಂಘಟನೆ ಕೆ ಟಿ ಎ ಯೂತ್ ಫಾರಂ ನ ಅಧ್ಯಕ್ಷರಾದ ಮೌಶಿರ್ ಅಹ್ಮದ್ ಸಾಮಣಿಗೆ ಈ ಬಗ್ಗೆ ಮಾಹಿತಿ ನೀಡಿ ಈದ್ ಹಬ್ಬದ ವರೆಗೆ ಹಂಪನಕಟ್ಟೆಯ ಟೋಕ್ಯೋ ಮಾರ್ಕೆಟ್, ಅಕ್ಬರ್ ಕಾಂಪ್ಲೆಕ್ಸ್, ಕುನಿಲ್ ಕಾಂಪ್ಲೆಕ್ಸ್ ಮೊದಲಾದ ವಾಣಿಜ್ಯ ಸಂಕೀರ್ಣಗಳ ಎಲ್ಲಾ ವರ್ತಕರು ತಮ್ಮ ಅಂಗಡಿಗಳನ್ನು ತೆರೆಯದಿರಲು ನಿರ್ಧರಿಸಿದ್ದು ಈ ಬಗ್ಗೆ ಅಂತಿಮ ತೀರ್ಮಾನ ಆಗುವ ವರೆಗೂ ಎಲ್ಲಾ ಸಮುದಾಯದ ವರ್ತಕರು ತಮ್ಮ ಜೊತೆ ಕೈ ಜೋಡಿಸುವುದಾಗಿ ಹೇಳಿದ್ದಾರೆ ಎಂದು ಅವರು ಹೇಳಿದ್ದಾರೆ.
ಎಲ್ಲಾ ಉದ್ಯಮಿಗಳೂ ಈ ಬಗ್ಗೆ ಸಹಕಾರ ನೀಡುವುದಾಗಿ ಮಾತು ನೀಡಿದ್ದು ಸರಕಾರ ಮೇ 17ವ್ರ ವರೆಗೂ ಲಾಕ್ ಡೌನ್ ವಿಸ್ತರಿಸಿದ್ದು ಅದನ್ನು ವರ್ತಕರೂ ಬೆಂಬಲಿಸಲಿದ್ದಾರೆ ಎಂದರು.
ಉಡುಪಿ ಖಾಝಿ ಬಹು ಬೇಕಲ ಇಬ್ರಾಹಿಂ ಮುಸ್ಲಿಯಾರ್ ರವರು ಕೂಡ ಈ ಹಿಂದೆಯೇ ಲಾಕ್ ಡೌನ್ ಅನ್ನು ಈದ್ ಹಬ್ಬ ಮುಗಿಯುವ ವರೆಗೂ ಮುಂದೂಡಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿರುವುದನ್ನು ಸ್ಮರಿಸಬಹುದು.















ಇನ್ನಷ್ಟು ಸುದ್ದಿಗಳು
ಮುಸ್ಲಿಮ್ ಮತ ಸ್ಥಿತಿಗತಿ ಇಂದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಸುದೃಢಗೊಳಿಸಿದೆ,ರಾಜಣ್ಣ ಅರಿಯಲಿ: ಕೆ.ಅಶ್ರಫ್
ಮೊಂಟೆಪದವು ಗುಡ್ಡ ಕುಸಿತ: ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಮೃತ್ಯು- ತಾಯಿಯ ರಕ್ಷಣೆ
ದೇರಳಕಟ್ಟೆ : ಮನೆಯ ತಡೆಗೋಡೆ ಕುಸಿದು 10 ವರ್ಷದ ಪುಟ್ಟ ಬಾಲಕಿ ಮೃತ್ಯು
ಭಾರೀ ಮಳೆ: ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಪುಟ್ಟ ಮಗು ಸಹಿತ ಇಬ್ಬರು ಮೃತ್ಯು
ಸದಾ ಸಮುದಾಯದ ಪರ ಧ್ವನಿಯೆತ್ತುವ ಅಲ್ಪಸಂಖ್ಯಾತ ಸಚಿವರು ಕರಾವಳಿಗೆ ಭೇಟಿ ನೀಡದಿರಲು ಕಾರಣವೇನು?
ಉಲಮಾ ಒಕ್ಕೂಟದ ವಖ್ಫ್ ಪ್ರತಿಭಟನೆ : ಪೊಲೀಸ್ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ ಸಂಘಟಕರು
ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ: ಜೆಡಿಎಸ್ ಬಂಟ್ವಾಳ ಮೈನಾರಿಟಿ ಅಧ್ಯಕ್ಷ ಮುಹಮ್ಮದ್ ಶಫೀಕ್ ಆಲಡ್ಕ
ಮುಸ್ಲಿಮ್ ಬಸ್ ಪ್ರಯಾಣಿಕನ ಮೇಲೆ ಹಲ್ಲೆ: ಶೀಘ್ರ ಕಾನೂನು ಕ್ರಮ ಕೈಗೊಳ್ಳಬೇಕು- ಕೆ.ಅಶ್ರಫ್
ಸರಕಾರದ ಆದೇಶ, ತುಳುನಾಡಿನ ಜನತೆಯ ಒಗ್ಗಟ್ಟಿನ ಹೋರಾಟದ ಫಲ- ಮುನೀರ್ ಕಾಟಿಪಳ್ಳ
ಮುಸ್ಲಿಮ್ ವರ್ತಕರ ಮೇಲೆ ಹಲ್ಲೆ: ಮುಸ್ಲಿಮ್ ಮುಖಂಡರ ಭೇಟಿ, ಗಂಭೀರ ಪರಿಗಣನೆ- ಕೆ.ಅಶ್ರಫ್