ದೋಹಾ: ಮುಂದಿನ ತಿಂಗಳಲ್ಲಿ ಖತರ್ನಿಂದ ಭಾರತದ 12 ಭಾಗಗಳಿಗೆ ವಿಮಾನ ಸೇವೆಯನ್ನು ಪುನರಾರಂಭಿಸಲು ಖತರ್ ಏರ್ವೇಸ್ ಸಜ್ಜಾಗಿದೆ.
ಭಾರತದ ಅನುಮತಿ ದೊರೆತ ಕೂಡಲೇ ಮುಂದಿನ ಕ್ರಮ ಕೈಗೊಳ್ಳಲಾಗುವುದು. ವಲಸಿಗರಿಂದ ಹೆಚ್ಚುತ್ತಿರುವ ಬೇಡಿಕೆಯ ಹಿನ್ನೆಲೆಯಲ್ಲಿ ಖತರ್ ಏರ್ವೇಸ್ ಈ ಕ್ರಮ ಕೈಗೊಂಡಿದೆ. ಮುಂದಿನ ತಿಂಗಳು ಈ ಸೇವೆಯು ಭಾರತ ಸೇರಿದಂತೆ ವಿಶ್ವಾದ್ಯಂತ 81 ಸ್ಥಳಗಳಿಗೆ ತಲುಪುವ ನಿರೀಕ್ಷೆಯಿದೆ ಎಂದು ಖತರ್ ಏರ್ವೇಸ್ ಸಿಇಒ ಅಕ್ಬರ್ ಅಲ್-ಬೆಕಿರ್ ತಿಳಿಸಿದ್ದಾರೆ.
ಆದರೆ, ಭಾರತ ಸೇರಿದಂತೆ ದೇಶಗಳ ಅನುಮೋದನೆ ಲಭಿಸಿದ ಬಳಿಕವಷ್ಟೇ ಟಿಕೆಟ್ ಕಾಯ್ದಿರಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಬಹುದು ಎಂದವರು ತಿಳಿಸಿದರು. ಈ ಸೇವೆಯು ಭಾರತದ 12 ಕೇಂದ್ರಗಳಲ್ಲಿ ಲಭ್ಯವಿರುತ್ತದೆ. ಕೋಝಿಕೋಡ್, ಕೊಚ್ಚಿ ಮತ್ತು ತಿರುವನಂತಪುರಂ, ದೆಹಲಿ, ಅಹಮದಾಬಾದ್, ಅಮೃತಸರ, ಬೆಂಗಳೂರು, ಮುಂಬೈ, ಗೋವಾ, ಕೋಲ್ಕತಾ ಮತ್ತು ಚೆನ್ನೈ ನಗರಗಳಲ್ಲಿ ಈ ಸೇವೆ ಲಭ್ಯವಾಗಲಿದೆ.
ಕೋವಿಡ್ನ ಹಿನ್ನೆಲೆಯಲ್ಲಿ ತಮ್ಮ ದೇಶಗಳಿಗೆ ಮರಳಲು ಬಯಸುವ ಹತ್ತು ಲಕ್ಷ ವಲಸಿಗರನ್ನು ವಾಪಸ್ ಕಳುಹಿಸುವ ಗುರಿಯಾಗಿದೆ ಕಂಪನಿಯ ಉದ್ದೇಶ ಎಂದು ಖತರ್ ಏರ್ವೇಸ್ನ ಸಿಇಒ ತಿಳಿಸಿದ್ದಾರೆ. ಖತರ್ ಏರ್ವೇಸ್ ಪ್ರಸಕ್ತ ಕೇರಳ ಸೇರಿದಂತೆ ಭಾರತದ ವಿವಿಧ ಭಾಗಗಳಿಗೆ ಸರಕು ಸೇವೆಗಳನ್ನು ನಿರ್ವಹಿಸುತ್ತಿದೆ.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ