ಸರ್ಕಾರದ ಯೊಜನೆ ಅರ್ಹರಿಗೆ ದೊರೆಯುವಂತಾಗಲಿ
ದೇಶ ಕ್ಕೆ ದೇಶ ಕೋರೋಣ ದಿಂದ ತತ್ತರಿಸಿದ ಈ ಸಂದರ್ಭದಲ್ಲಿ ರಾಜ್ಯ ಸರ್ಕಾರ ಬಡ ಅಟೋ ರಿಕ್ಷಾ ಹಾಗೂ ಟ್ಯಾಕ್ಸಿ ಚಾಲಕರಿಗೆ ಲಾಕ್ ಡೌನ್ ಎದುರಿಸಲು ಏಕ ಕಂತಿನ ಐದು ಸಾವಿರ ರೂಪಾಯಿ ಪರಿಹಾರ ದನ ಘೊಷಿಸಿದ್ದು ಅತ್ಯಂತ ಶ್ಲಾಘನೀಯ ಮತ್ತು ಸ್ವಾಗತಾರ್ಹವಾಗಿದೆ.
ಆದರೆ ಈ ಮೊತ್ತ ಪಡೆಯಲು ಚಾಲಕರು ಭ್ಯಾಡ್ಜ್ ಹೊಂದಿರಲು ಕಡ್ಡಾಯ ಎಂಬ ನಿಯಮನ್ನು ಸಡಿಲಿಸಿ ಬ್ಯಾಡ್ಜ್ ರಹಿತ ಬಡ ಚಾಲಕರನ್ನು ಈ ಯೊಜನೆಗೆ ಪರಿಗಣಿಸಬೇಕೆಂದು ಕರ್ನಾಟಕ ರಾಜ್ಯ ಕೆ.ಪಿ.ಸಿ.ಸಿ ಕಾರ್ಮಿಕ ವಿಭಾಗದ ಕಾರ್ಯದರ್ಶಿ ಹನೀಫ್ ಬಗ್ಗುಮೂಲೆ ಆಗ್ರಹಿಸಿದ್ದಾರೆ.
ರಾಜ್ಯದಲ್ಲಿ ಹಲವಾರು ಬಡ ಚಾಲಕರಲ್ಲಿ ಬ್ಯಾಡ್ಜ್ ಹೊಂದಿಲ್ಲ ಕೆಲವೊಂದು ಕಾರಣಗಳಿಂದ ಹಲವು ಚಾಲಕರು ಬ್ಯಾಡ್ಜ್ ಪಡೆದುಕೊಳ್ಳಲು ವಿಳಂಬವಾಗಿದ್ದು ಕೇವಲ ಡ್ರೈವಿಂಗ್ ಲೈಸೆನ್ಸ್ ಹೊಂದಿ ಆಟೋರಿಕ್ಷಾ ಮತ್ತು ಟ್ಯಾಕ್ಸಿ ಓಡಿಸಿ ಸಂಸಾರ ಮಾಡುವವರಿಗೆ ಇದರಿಂದ ತೊಂದರೆಯುಂಟಾಗಿದೆ.
ಸರ್ಕಾರ ಸಧ್ಯ ಘೋಷಣೆ ಮಾಡಿರುವ ಪರಿಹಾರ ಪಡೆಯಲು ಬ್ಯಾಡ್ಜ್ ಕಡ್ಡಾಯ ಎಂಬ ನಿಯಮ ದಿಂದ ಇಂತಹ ಚಾಲಕರು ಪರಿಹಾರದಿಂದ ವಂಚಿತರಾಗುತ್ತಾರೆ. ಇಂತಹ ಚಾಲಕರು ಪರಿಹಾರದಿಂದ ವಂಚಿತರಾದರೆ ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ಸರಕಾರದ ಯೊಜನೆಗಳು ತಲುಪುವುದಿಲ್ಲ. ಈ ನಿಟ್ಟಿನಲ್ಲಿ ಸರ್ಕಾರ ಈ ಮೊದಲು ಹೊರಡಿಸಿದ ನಿಯಮದಲ್ಲಿ ಸಡಿಲಿಕೆ ಮಾಡಿ ಲೈಸೆನ್ಸ್ ಹೊಂದಿದ ಎಲ್ಲಾ ಅಟೋ ಮತ್ತು ಟ್ಯಾಕ್ಸಿ ಚಾಲಕರಿಗೆ ತಾವು ಹೊಂದಿದ ಟೂರಿಸ್ಟ್ ವಿವರಗಳ ಮೇರೆಗೆ ಪರಿಹಾರ ದೊರೆಯುವಂತೆ ಸರ್ಕಾರ ದ ಈ. ಯೊಜನೆ ಅರ್ಹರಿಗೆ ತಲುಪುವಂತಾಗಲಿ ಎಂದು ಹನೀಫ್ ಬಗ್ಗುಮೂಲೆ ಸರ್ಕಾರವನ್ನು ಆಗ್ರಹಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ