ದುಬೈ: ಕೋವಿಡ್-19 ನಿಂದ ಸಂಕಷ್ಟಕ್ಕೊಳಗಾದ ಯುಎಇ ಕನ್ನಡಿಗರನ್ನು ಹೊತ್ತು ತಂದ ವಿಮಾನದ ಪ್ರಯಾಣಿಕರೊಂದಿಗೆ ತಡರಾತ್ರಿವರೆಗೂ ಅನ್ನ ಪಾನೀಯ ನೀಡದೆ ಅಮಾನವೀಯವಾಗಿ ವರ್ತಿಸಿದ್ದನ್ನು ಕೆಸಿಎಫ್ ಅಂತರಾಷ್ಟ್ರೀಯ ಸಮಿತಿ ಖಂಡಿಸುತ್ತದೆ.
ಹಲವಾರು ಒತ್ತಡಗಳ ಮೇರೆಗೆ ಊರಿಗೆ ಪ್ರಯಾಣ ಲಭಿಸಿದರೂ ಅದನ್ನು ಸರಿಯಾಗಿ ನಿಭಾಯಿಸುವಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ ವಿಫಲವಾಗಿದೆ ಎಂದು ಕೆಸಿಎಫ್ ಅಂತರಾಷ್ಟ್ರೀಯ ಸಮಿತಿ ಅಧ್ಯಕ್ಷರಾದ ಡಾ। ಶೈಖ್ ಬಾವ ಮಂಗಳೂರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು.

ರಾತ್ರಿ ಒಂಬತ್ತು ಗಂಟೆ ಸುಮಾರಿಗೆ ಮಂಗಳೂರು ವಿಮಾನ ನಿಲ್ದಾಣ ತಲುಪಿದ ಪ್ರಯಾಣಿಕರು ವಯಸ್ಕರು ಮಕ್ಕಳು ಯಾವುದೇ ಅನ್ನಪಾನೀಯವಿಲ್ಲದೆ ಬೆಳಗ್ಗಿನ ಜಾವ 4 ಗಂಟೆಯವರೆಗೆ ಏರ್ಪೋರ್ಟ್ ನಲ್ಲೇ ಉಳಿಯುವಂತೆ ಮಾಡಿರುವುದು ಇಡೀ ರಾಜ್ಯವೇ ತಲೆತಗ್ಗಿಸುವಂತಾಗಿದೆ.
ಕುಡಿಯಲು ನೀರು ನೀಡದ ಏರ್ಪೋರ್ಟ್ ಸಿಬ್ಬಂದಿಗಳ ದುರ್ವರ್ತನೆ ಖಂಡನೀಯವಾಗಿದೆ. ಸರಿಯಾದ ರೀತಿಯ ಕ್ವಾರೈಂಟೇನ್ ವ್ಯವಸ್ಥೆ ಏರ್ಪಡಿಸದೆ ಕಷ್ಟ ನಷ್ಟಗಳನ್ನು ಎದುರಿಸಿ ಮುಂದಿನ ಜೀವನದ ಬಗ್ಗೆ ಗೊಂದಲಗಳಿಗೆ ಸರಿಯಾದ ಉತ್ತರವಿಲ್ಲದೆ ಮಾನಸಿಕವಾಗಿ ನೊಂದಿರುವ ಅನಿವಾಸಿಗಳಿಂದ ಕ್ವಾರೈಂಟೆನ್ ಹೆಸರಿನಲ್ಲಿ ಜಿಲ್ಲಾಡಳಿತ ದಂಧೆಗಿಳಿದಿರುವುದು ಅನಿವಾಸಿ ಕನ್ನಡಿಗರಿಗೆ ಮಾಡುವ ದ್ರೋಹವಾಗಿದೆ ಎಂದು ಅವರು ಒತ್ತಿ ಹೇಳಿದರು.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ