janadhvani

Kannada Online News Paper

ಡಿಕೆಶಿ ಹುಟ್ಟುಹಬ್ಬ ಪ್ರಯುಕ್ತ ದ.ಕ. ಜಿಲ್ಲಾ ಯುವ ಕಾಂಗ್ರೆಸ್‌ನಿಂದ ರಕ್ತದಾನ ಶಿಬಿರ

ಮಂಗಳೂರು, ಮೇ 15 : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಯ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ 55 ನೇ ಹುಟ್ಟುಹಬ್ಬದ ಪ್ರಯುಕ್ತ ದ.ಕ. ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಗುರುವಾರ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು. ಶಿಬಿರವು ಕೋವಿಡ್ -19 ನಿಯಮಗಳ ಪಾಲನೆಯೊಂದಿಗೆ ಕಂಕನಾಡಿಯ ಹೈಲಾಂಡ್ ಆಸ್ಪತ್ರೆ ಸಮೀಪದ ಜನತಾ ಲಂಚ್ ಹೊಂನಲ್ಲಿ ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ದೀಪ ಬೆಳಗಿಸುವ ಮೂಲಕ ಶಿಬಿರವನ್ನು ಉದ್ಘಾಟಿಸಿದರು.

ಸುಮಾರು ನೂರರಷ್ಟು ಕಾರ್ಯಕರ್ತರು ರಕ್ತದಾನ ಮಾಡಿದರು.

ಶಾಸಕರಾದ ಯುಟಿ ಖಾದರ್, ಐವನ್ ಡಿಸೋಜ, ಮಾಜಿ ಸಚಿವರಾದ ಬಿ.ರಮನಾಥ ರೈ, ಮಾಜಿ ಶಾಸಕರಾದ ಜೆ.ಆರ್.ಲೋಬೊ, ಮನಪಾ ಸದಸ್ಯರಾದ ಪ್ರವೀನ್ ಚಂದ್ರ ಆಳ್ವ, ಎಸಿ ವಿನಯರಾಜ್, ನವೀನ್ ಡಿಸೋಜ, ರವೂಫ್ ಬಜಾಲ್, ಬಂಟ್ವಾಳ ತಾಲೂಕು ಪಂಚಾಯತ್ ಉಪಾಧ್ಯಕ್ಷ ಅಬ್ಬಾಸ್ ಆಲಿ, ಯುವ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಸುಹೈಲ್ ಕಂದಕ್, ಪುದು ಗ್ರಾಮ ಪಂಚಾಯತ್ ಸದಸ್ಯ & ಮಂಗಳೂರು ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಶೀರ್ ಪೇರಿಮಾರ್, ರೆಡ್ ಕ್ರಾಸ್ ಸಂಸ್ಥೆಯ ಪ್ರವೀಣ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಂತಲಾ ಗಟ್ಟಿ, ಯುವ ಕಾಂಗ್ರೆಸ್ ವಿಧಾನಸಭಾ ಅಧ್ಯಕ್ಷ ಮೆರಿಲ್ ರೇಗೊ, ಗಿರೀಶ್ ಆಳ್ವ, ಯು.ಟಿ.ತೌಸಿಫ್, ಅಭಿನಂದನ್, ಜಿಲ್ಲಾ ಪದಾಧಿಕಾರಿಗಳಾದ ಶಬೀರ್ ಕೆಂಪಿ, ಬಶೀರ್ ಪರ್ಲಡ್ಕ, ಅಶ್ರಫ್ (ಅಪ್ಪು) ಅಡ್ಯಾರ್, ಎನ್‌ಎಸ್‌ಯುಐ ರಾಜ್ಯ ಕಾರ್ಯದರ್ಶಿ ರೂಪೇಶ್ ದ.ಕ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿ ಅನ್ಸಾರುದ್ದೀನ್ ಸಾಲ್ಮರ, ಜಿಲ್ಲಾ ಎನ್.ಎಸ್.ಯು.ಐ ಪ್ರಧಾನ ಕಾರ್ಯದರ್ಶಿ ಸವಾದ್ ಸುಳ್ಯ, ದ.ಕ ಸೋಶಿಯಲ್ ಮೀಡಿಯಾ ಸೆಲ್ ಸದಸ್ಯ ಸಾದಿಕ್ ಬರೆಪ್ಪಾಡಿ, ಮಂಗಳೂರು ಯಾನಪೋಯಾ ಕಾಲೇಜ್ ಎನ್.ಎಸ್.ಯು.ಐ ಘಟಕದ ಅಧ್ಯಕ್ಷ ರಿಲ್ವಾನ್ ಫರಂಗಿಪೇಟೆ, ಶಾಹೀಲ್ ಆರ್.ಎಸ್ ಫರಂಗಿಪೇಟೆ, ಆಫ್ರೀದ್ ಫರಂಗಿಪೇಟೆ, ಉಳ್ಳಾಲ ಎನ್.ಎಸ್.ಯು.ಐ ಘಟಕದ ಅಧ್ಯಕ್ಷ ವಿವಿಯನ್ ಡಿಸೋಜ ರವರು ಉಪಸ್ಥಿತರಿದ್ದರು.

error: Content is protected !! Not allowed copy content from janadhvani.com