ಅಬುಧಾಬಿ: ಕೋವಿಡ್ನಿಂದ ಮುಕ್ತಿ ಪಡೆಯುವ ಸಲುವಾಗಿ ವಿಶ್ವಸಂಸ್ಥೆಯ ಸಹಯೋಗದೊಂದಿಗೆ ಅಬುಧಾಬಿ ಯುವರಾಜ ಮತ್ತು ಸಶಸ್ತ್ರ ಪಡೆಗಳ ಕಮಾಂಡರ್-ಇನ್-ಚೀಫ್, ಶೈಖ್ ಮುಹಮ್ಮದ್ ಬಿನ್ ಝಾಯಿದ್ ಆಲ್-ನಹ್ಯಾನ್ ಅವರ ನೇತೃತ್ವದಲ್ಲಿ ನಡೆಸಿದ ಜಾಗತಿಕ ಪ್ರಾರ್ಥನಾ ಸಮಾವೇಶ ಸಮಾಪ್ತಿಗೊಂಡಿದೆ.
ಈ ಕಾರ್ಯಕ್ರಮವನ್ನು ಯುಎಇ ಮಾನವ ಭ್ರಾತೃತ್ವದ ಉನ್ನತ ಸಮಿತಿಯು ಆನ್ಲೈನ್ನಲ್ಲಿ ಆಯೋಜಿಸಿದೆ. ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್, ಶೈಖುಲ್ ಅಝ್ಹರ್ ಅಹ್ಮದ್ ತ್ವಯ್ಯಿಬ್ ಮತ್ತು ಪೋಪ್ ಫ್ರಾನ್ಸಿಸ್ ನಾಯಕತ್ವದಲ್ಲಿ ಅನೇಕ ವಿಶ್ವ ನಾಯಕರ ಸಹಿತ ಜಾಗತಿಕ ಮಟ್ಟದ ಲಕ್ಷಗಟ್ಟಲೆ ಜನರು ಭಾಗವಹಿಸಿದ್ದರು. ಸ್ನೇಹವನ್ನು ಉತ್ತೇಜಿಸಲು ಪ್ರಾರ್ಥನಾ ವೇದಿಕೆ ಒಂದು ಸ್ಮರಣೀಯ ಅವಕಾಶವಾಗಿದ್ದು ಸಂತೋಷ ನೀಡಿದೆ ಎಂದು ಶೈಖ್ ಅಝ್ಹರ್ ಹೇಳಿದರು.
ಭಾರತೀಯ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎ.ಪಿ. ಅಬೂಬಕರ್ ಮುಸ್ಲಿಯಾರ್ ಆನ್ಲೈನ್ ಸಮ್ಮೇಳನವನ್ನುದ್ದೇಶಿಸಿ ಮಾತನಾಡಿದರು. ನಾವು ಆಧುನಿಕ ಜಗತ್ತು ಎದುರಿಸಿದ ಅತ್ಯಂತ ದುರಂತಕರ ಬಿಕ್ಕಟ್ಟನಿಂದ ನಾವು ಮುಂದೆ ಸಾಗುತ್ತಿದ್ದೇವೆ ಎಂದು ತಿಳಿಸಿದ ಅವರು, ಪ್ರಾರ್ಥನೆಯೊಂದಿಗೆ ಸೃಷ್ಟಿಕರ್ತನತ್ತ ಇನ್ನಷ್ಟು ಹತ್ತಿರವಾಗಿ, ಈ ಸಂದಿಗ್ಧತೆಯಿಂದ ರಕ್ಷಣೆ ಪಡೆಯಲು ಸದಾ ಪ್ರಾರ್ಥಿಸುತ್ತಿರುವಂತೆ ಕಾಂತಪುರಂ ಕರೆ ನೀಡಿದರು.















ಇನ್ನಷ್ಟು ಸುದ್ದಿಗಳು
ಇರಾಕ್ನ ನೂತನ ಪ್ರಧಾನ ಮಂತ್ರಿಯಾಗಿ ಉದ್ಯಮಿ ಅಲಿ ಅಲ್-ಝೈದಿ ಆಯ್ಕೆ- ದೇಶದ ರಾಜಕೀಯದಲ್ಲಿ ಹೊಸ ಯುಗ?
ಅಮೆರಿಕಕ್ಕೆ ಇರಾನ್ನಿಂದ ‘ಬಿಗ್ ಡೀಲ್’: ಹೋರ್ಮುಜ್ ಜಲಸಂಧಿ ತೆರೆಯಲು ಸಿದ್ಧ, ಆದರೆ ಒಂದು ಷರತ್ತು!
ಟ್ರಂಪ್ ಔತಣಕೂಟದಲ್ಲಿ ಶೂಟೌಟ್: ನಾಸಾ ಫೆಲೋಶಿಪ್ ಪಡೆದ ಎಂಜಿನಿಯರ್ ಬಂಧನ
ಇರಾನ್ ಜೊತೆಗಿನ ಸಂಧಾನಕ್ಕೆ ಬ್ರೇಕ್? – ಅಮೆರಿಕ ನಿಯೋಗದ ಪ್ರವಾಸ ರದ್ದುಪಡಿಸಿದ ಟ್ರಂಪ್
ಇಸ್ರೇಲ್ ಪ್ರಧಾನಿಗೆ ಕ್ಯಾನ್ಸರ್: ಇರಾನ್ ಭಯದಿಂದ ವಿಷಯ ಮುಚ್ಚಿಟ್ಟಿದ್ದಾಗಿ ಸ್ಪಷ್ಟನೆ
ಇರಾನ್ ಪರ ಗುಂಪುಗಳ ದಾಳಿ ಹಿನ್ನೆಲೆ: ಇರಾಕ್ಗೆ ಸೇರಬೇಕಿದ್ದ 500 ಮಿಲಿಯನ್ ಡಾಲರ್ ನಗದು ಸಾಗಾಟವನ್ನು ತಡೆದ ಅಮೆರಿಕ
ಹೋರ್ಮುಝ್ ಜಲಸಂಧಿಯಲ್ಲಿ ಉದ್ವಿಗ್ನತೆ: ಮೂರು ವಾಣಿಜ್ಯ ಹಡಗುಗಳ ಮೇಲೆ ಗುಂಡಿನ ದಾಳಿ
ನಾಳೆ ಮಾತುಕತೆ: ಒಪ್ಪಂದಕ್ಕೆ ಬಾರದಿದ್ದರೆ ಇರಾನ್ನ ವಿದ್ಯುತ್ ಸ್ಥಾವರ, ಸೇತುವೆಗಳ ಧ್ವಂಸ- ಟ್ರಂಪ್ ಎಚ್ಚರಿಕೆ
ಯುಎಸ್-ಇರಾನ್ ಕದನ ವಿರಾಮ ಅಂತ್ಯಕ್ಕೆ ದಿನಗಣನೆ- ಪಶ್ಚಿಮ ಏಷ್ಯಾದಲ್ಲಿ ಮತ್ತೆ ಯುದ್ಧದ ಭೀತಿ
ನೌಕಾ ದಿಗ್ಬಂಧನವನ್ನು ಹಿಂಪಡೆಯದ ಅಮೆರಿಕ- ಹಾರ್ಮುಜ್ ಜಲಸಂಧಿಯನ್ನು ಮತ್ತೆ ಮುಚ್ಚಿದ ಇರಾನ್