ಅಬುಧಾಬಿ: ಕೋವಿಡ್ನಿಂದ ಮುಕ್ತಿ ಪಡೆಯುವ ಸಲುವಾಗಿ ವಿಶ್ವಸಂಸ್ಥೆಯ ಸಹಯೋಗದೊಂದಿಗೆ ಅಬುಧಾಬಿ ಯುವರಾಜ ಮತ್ತು ಸಶಸ್ತ್ರ ಪಡೆಗಳ ಕಮಾಂಡರ್-ಇನ್-ಚೀಫ್, ಶೈಖ್ ಮುಹಮ್ಮದ್ ಬಿನ್ ಝಾಯಿದ್ ಆಲ್-ನಹ್ಯಾನ್ ಅವರ ನೇತೃತ್ವದಲ್ಲಿ ನಡೆಸಿದ ಜಾಗತಿಕ ಪ್ರಾರ್ಥನಾ ಸಮಾವೇಶ ಸಮಾಪ್ತಿಗೊಂಡಿದೆ.
ಈ ಕಾರ್ಯಕ್ರಮವನ್ನು ಯುಎಇ ಮಾನವ ಭ್ರಾತೃತ್ವದ ಉನ್ನತ ಸಮಿತಿಯು ಆನ್ಲೈನ್ನಲ್ಲಿ ಆಯೋಜಿಸಿದೆ. ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್, ಶೈಖುಲ್ ಅಝ್ಹರ್ ಅಹ್ಮದ್ ತ್ವಯ್ಯಿಬ್ ಮತ್ತು ಪೋಪ್ ಫ್ರಾನ್ಸಿಸ್ ನಾಯಕತ್ವದಲ್ಲಿ ಅನೇಕ ವಿಶ್ವ ನಾಯಕರ ಸಹಿತ ಜಾಗತಿಕ ಮಟ್ಟದ ಲಕ್ಷಗಟ್ಟಲೆ ಜನರು ಭಾಗವಹಿಸಿದ್ದರು. ಸ್ನೇಹವನ್ನು ಉತ್ತೇಜಿಸಲು ಪ್ರಾರ್ಥನಾ ವೇದಿಕೆ ಒಂದು ಸ್ಮರಣೀಯ ಅವಕಾಶವಾಗಿದ್ದು ಸಂತೋಷ ನೀಡಿದೆ ಎಂದು ಶೈಖ್ ಅಝ್ಹರ್ ಹೇಳಿದರು.
ಭಾರತೀಯ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎ.ಪಿ. ಅಬೂಬಕರ್ ಮುಸ್ಲಿಯಾರ್ ಆನ್ಲೈನ್ ಸಮ್ಮೇಳನವನ್ನುದ್ದೇಶಿಸಿ ಮಾತನಾಡಿದರು. ನಾವು ಆಧುನಿಕ ಜಗತ್ತು ಎದುರಿಸಿದ ಅತ್ಯಂತ ದುರಂತಕರ ಬಿಕ್ಕಟ್ಟನಿಂದ ನಾವು ಮುಂದೆ ಸಾಗುತ್ತಿದ್ದೇವೆ ಎಂದು ತಿಳಿಸಿದ ಅವರು, ಪ್ರಾರ್ಥನೆಯೊಂದಿಗೆ ಸೃಷ್ಟಿಕರ್ತನತ್ತ ಇನ್ನಷ್ಟು ಹತ್ತಿರವಾಗಿ, ಈ ಸಂದಿಗ್ಧತೆಯಿಂದ ರಕ್ಷಣೆ ಪಡೆಯಲು ಸದಾ ಪ್ರಾರ್ಥಿಸುತ್ತಿರುವಂತೆ ಕಾಂತಪುರಂ ಕರೆ ನೀಡಿದರು.















ಇನ್ನಷ್ಟು ಸುದ್ದಿಗಳು
ಇರಾನ್ ಮೇಲೆ ಮತ್ತೆ ಯುಎಸ್ ದಾಳಿ; ಬಂದರ್ ಅಬ್ಬಾಸ್ ಸೇರಿದಂತೆ ವಿವಿಧ ಕೇಂದ್ರಗಳಲ್ಲಿ ಬಾಂಬ್ ದಾಳಿ
ಇರಾಕ್ನಲ್ಲೂ ಖಾಮ್ನಈ ಅಂತ್ಯಕ್ರಿಯೆ ವಿಧಿವಿಧಾನಗಳು; ನಜಫ್ನತ್ತ ಹರಿದುಬಂದ ಜನಸಾಗರ
ವಿಕಾಸದ ಕೂಗಿನೊಂದಿಗೆ ಇತ್ತಿಹಾದ್ ರೈಲು; ಟಿಕೆಟ್ ದರ ಮತ್ತು ರಿಯಾಯಿತಿಗಳ ಘೋಷಣೆ
ಯುಎಇ: ಮುಂದುವರಿದ ಭಾರತೀಯ ಪಾಸ್ಪೋರ್ಟ್ ಸೇವಾ ಬಿಕ್ಕಟ್ಟು
ಇತ್ತಿಹಾದ್ ರೈಲಿಗೆ ಐತಿಹಾಸಿಕ ಕ್ಷಣ; ಭವ್ಯ ಆರಂಭಕ್ಕೆ ಯುಎಇನಲ್ಲಿ ಅಭೂತಪೂರ್ವ ಜನಸ್ಪಂದನ
ವಲಸಿಗರಿಗೆ ಶುಭ ಸುದ್ದಿ: ಸೌದಿ ವರ್ಕ್ ಪರ್ಮಿಟ್ ಸ್ಥಿತಿ ಸರಿಪಡಿಸಿಕೊಳ್ಳುವ ಗಡುವು ವಿಸ್ತರಣೆ
‘ಅವನು ಬದುಕಿದ್ದರೆ ನಾನು ಕೂಡ ಬದುಕುತ್ತೇನೆ’; ಭೂಕಂಪದ ಅವಶೇಷಗಳ ನಡುವೆ ಮರಣವನ್ನೇ ಗೆದ್ದು ಬಂದ ತಾಯಿ ಮತ್ತು 18 ದಿನದ ಮಗು!
ದಾಳಿಗಳು ಮುಂದುವರಿದರೆ ‘ನರಕಸದೃಶ’ ತಿರುಗೇಟು ನೀಡಲಾಗುವುದು- ಇರಾನ್ ಎಚ್ಚರಿಕೆ
ಮತ್ತೆ ಯುದ್ಧವೇ? – ಎರಡನೇ ದಿನವೂ ಇರಾನ್ ಮೇಲೆ ಯುಎಸ್ ದಾಳಿ
ಬಹ್ರೇನ್ ಮೇಲೆ ಇರಾನ್ ಡ್ರೋನ್ ದಾಳಿ: ಸೌದಿ ಅರೇಬಿಯಾ ತೀವ್ರ ಖಂಡನೆ- ಪೂರ್ಣ ಬೆಂಬಲ ಘೋಷಣೆ